ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಉದ್ಯೋಗ ಕೊಡಿಸುವುದಾಗಿ ವಂಚನೆ : ಶ್ಯಾಂ ಭಟ್ ವಿರುದ್ಧ ಎಫ್‌ಐಆರ್‌

|
Google Oneindia Kannada News

ಬೆಂಗಳೂರು, ಮೇ 15 : ಕರ್ನಾಟಕ ಲೋಕಸಭಾ ಆಯೋಗದ ಮಾಜಿ ಅಧ್ಯಕ್ಷ ಶ್ಯಾಂ ಭಟ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಉದ್ಯೋಗ ಕೊಡಿಸುವುದಾಗಿ ಹಣ ಪಡೆದು ವಂಚನೆ ಮಾಡಲಾಗಿದೆ ಎಂಬುದು ಆರೋಪವಾಗಿದೆ.

ಸಶಸ್ತ್ರ ಮೀಸಲು ಪಡೆ ನಿವೃತ್ತ ಸಬ್ ಇನ್‌ಸ್ಪೆಕ್ಟರ್ ಸಿದ್ದಯ್ಯ ನೀಡಿದ ದೂರಿನ ಅನ್ವಯ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಶ್ಯಾಂ ಭಟ್, ಜೆಡಿಎಸ್ ಮುಖಂಡ ಧನರಾಜ್, ನಿವೃತ್ತ ಸಹಾಯಕ ಸಬ್ ಇನ್‌ಸ್ಪೆಕ್ಟರ್ ಪ್ರದೀಪ್ ಆರೋಪಿಗಳು.

ಅಬಕಾರಿ ಇಲಾಖೆ ನೇಮಕಾತಿ : ಕೀ ಉತ್ತರ ಪ್ರಕಟಿಸಿದ ಕೆಪಿಎಸ್‌ಸಿಅಬಕಾರಿ ಇಲಾಖೆ ನೇಮಕಾತಿ : ಕೀ ಉತ್ತರ ಪ್ರಕಟಿಸಿದ ಕೆಪಿಎಸ್‌ಸಿ

ಅಬಕಾರಿ ಇಲಾಖೆಯಲ್ಲಿ ಸಬ್ ಇನ್‌ಸ್ಪೆಕ್ಟರ್ ಹುದ್ದೆಯ ಉದ್ಯೋಗ ಕೊಡಿಸುವುದಾಗಿ ಲಕ್ಷಾಂತರ ರೂಪಾಯಿ ಹಣ ಪಡೆದು ವಂಚನೆ ಮಾಡಲಾಗಿದೆ ಎಂಬುದು ದೂರು. ಎಫ್ಐಆರ್ ದಾಖಲಾಗಿರುವುದನ್ನು ಪಶ್ಚಿಮ ವಿಭಾಗದ ಡಿಸಿಪಿ ರವಿ ಚನ್ನಣ್ಣನವರ್ ಖಚಿತಪಡಿಸಿದ್ದಾರೆ.

1998ರ ಕೆಪಿಎಸ್‌ಸಿ ಹಗರಣ, ಹೈಕೋರ್ಟ್ ಮಹತ್ವದ ತೀರ್ಪು1998ರ ಕೆಪಿಎಸ್‌ಸಿ ಹಗರಣ, ಹೈಕೋರ್ಟ್ ಮಹತ್ವದ ತೀರ್ಪು

Shyam Bhat

ದೂರಿನ ವಿವರ : ಸಿದ್ದಯ್ಯ ಅವರಿಗೆ ಪ್ರದೀಪ್ ಮೂಲಕ ಪರಿಚಯವಾಗಿದ್ದ ಧನರಾಜ್ ಕೆಪಿಎಸ್‌ಸಿ ಅಧ್ಯಕ್ಷ ಶ್ಯಾಂ ಭಟ್ ನನಗೆ ಸ್ನೇಹಿತರು. 20 ಲಕ್ಷ ಕೊಟ್ಟರೆ ಅವರನ್ನು ನೇರವಾಗಿ ಭೇಟಿ ಮಾಡಿಸಿ ಅಬಕಾರಿ ಇಲಾಖೆಯಲ್ಲಿ ಸಬ್ ಇನ್‌ಸ್ಪೆಕ್ಟರ್ ಹುದ್ದೆ ಕೊಡಿಸುತ್ತೇನೆ ಎಂದು ಹೇಳಿದ್ದರು.

ಧಾರವಾಡ ಕೋರ್ಟ್ ನೇಮಕಾತಿ : ಶೀಘ್ರಲಿಪಿಗಾರ ಹುದ್ದೆಗೆ ಅರ್ಜಿ ಹಾಕಿಧಾರವಾಡ ಕೋರ್ಟ್ ನೇಮಕಾತಿ : ಶೀಘ್ರಲಿಪಿಗಾರ ಹುದ್ದೆಗೆ ಅರ್ಜಿ ಹಾಕಿ

ಸಿದ್ದಯ್ಯ ಅವರು ಮುಂಗಡವಾಗಿ 10 ಲಕ್ಷ ಹಣ ಕೊಟ್ಟಿದ್ದರು. ಅದನ್ನು ಶ್ಯಾಂ ಭಟ್ ಅವರಿಗೆ ನೀಡಿದ್ದಾಗಿ ಆರೋಪಿಗಳು ಹೇಳಿದ್ದಾರೆ. ಸಿದ್ದಯ್ಯ ಅವರ ಮಗನಿಗೆ ಉದ್ಯೋಗ ಸಿಕ್ಕಿಲ್ಲ, ಆಗ ಹಣ ವಾಪಸ್ ಕೊಡುವಂತೆ ಒತ್ತಾಯಿಸಿದ್ದರು.

3 ಲಕ್ಷವನ್ನು ಮಾತ್ರ ನೀಡಿರುವ ಆರೋಪಿಗಳು ಇನ್ನೂ 7 ಲಕ್ಷ ನೀಡಿಲ್ಲ. ಮೂವರು ಸೇರಿಕೊಂಡು ವಂಚನೆ ಮಾಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಎಲ್ಲಾ ಆರೋಪಿಗಳಿಗೆ ಪೊಲೀಸರು ವಿಚಾರಣೆಗೆ ಬರಲು ನೋಟಿಸ್ ನೀಡಿದ್ದಾರೆ.

English summary
An FIR was registered against Karnataka Public Service Commission (KPSC) former president Shyam Bhat in Upparpet police station, Bengaluru.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X