BBMP: ಅನಧಿಕೃತ ಬೊರ್ವೆಲ್ ಕೊರೆತ, ಇತರರ ಆಸ್ತಿಗೆ ಹಾನಿ ಪ್ರಕರಣ: ಎರಡು ಪ್ರತ್ಯೇಕ FIR ದಾಖಲು
ಬೆಂಗಳೂರು, ಅಕ್ಟೋಬರ್ 07: ಕೊಳವೆ ಬಾವಿಗಳನ್ನು ಕೊರೆಸಲು ಅನುಮತಿ ಬೇಕು. ಅನುಮತಿ ಸಿಕ್ಕು ಕೊಳವೆ ಬಾವಿಯಲ್ಲಿ ನೀರು ಸಿಗದಿದ್ದರೆ, ಯಾವುದೇ ಅನಾಹುತ ಸಂಭವಿಸಿದಂತೆ ಅದನ್ನು ಮುಚ್ಚಬೇಕು. ಕೊಳವೆ ಬಾವಿ ಕೊರೆಸಲು ಹಲವು ನಿಯಮಗಳಿವೆ. ಹೀಗಿದ್ದರೂ ಬೆಂಗಳೂರಿನ ಆರ್ಆರ್ ನಗರದಲ್ಲಿ ಅನಧಿಕೃತವಾಗಿ ಬೋರ್ವೆಲ್ ಕೊರೆಸುತ್ತಿದ್ದವನ ವಿರುದ್ಧ ಹಾಗೂ ಕಟ್ಟಡ ನಿರ್ಮಾಣ ವೇಳೆ ಆಸ್ತಿಗೆ ಹಾನಿ ಮಾಡಿದವರ ಮೇಲೆ ಎಫ್ಐಆರ್ ದಾಖಲಿಸಲಾಗಿದೆ.
ರಾಜರಾಜೇಶ್ವರಿ ನಗರ ವಲಯ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಕೊಳವೆ ಬಾವಿ ಕೊರೆಸಲಾಗುತ್ತಿತ್ತು. ಬಿಬಿಎಂಪಿಯಿಂದ ಅನುಮತಿ ಪಡೆಯದೇ ಆರ್.ಆರ್ ನಗರ ವಲಯ ಹೇರೋಹಳ್ಳಿ ವಾರ್ಡ್ನ ವೀರಭದ್ರೇಶ್ವರ ನಗರ ಓಂ ಸಾಯಿ ಪಬ್ಲಿಕ್ ಮುಖ್ಯ ರಸ್ತೆಯಲ್ಲಿ ಅನಧಿಕೃತವಾಗಿ ಕೊಳವೆ ಬಾವಿ ಕೊರೆಸಲಾಗುತ್ತಿತ್ತು.

ಈ ವಿಷಯ ತಿಳಿಯುತ್ತಿದ್ದಂತೆ ವೀರಭದ್ರೇಶ್ವರ ನಗರ ಓಂ ಸಾಯಿ ಪಬ್ಲಿಕ್ ಮುಖ್ಯ ರಸ್ತೆಯ ಈ ಸ್ಥಳಕ್ಕೆ ಬಿಬಿಎಂಪಿ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದರು. ಈ ವೇಳೆ ಅಧಿಕಾರಿಗಳಿಗೆ, ಪಾಲಿಕೆ ಅನುಮತಿ ಇಲ್ಲದೇ ಅಕ್ಟೋಬರ್ 3ರಿಂದ 4ರ ಸಂಜೆ ವರೆಗೆ ಕೊಳವೆ ಬಾವಿ ಕೊರೆಸಿದ ಮಾಹಿತಿ ಲಭ್ಯವಾಗಿದೆ.
ರಸ್ತೆ ಹಾಳು ಮಾಡಿದ್ದಕ್ಕೆ ಬಿಬಿಎಂಪಿ ಗರಂ
ಸ್ಥಳಕ್ಕೆ ಬಂದ ಅಧಿಕಾರಿಗಳು, ಸಾರ್ವಜನಿಕ ರಸ್ತೆಯನ್ನು ಅಗೆದು ಹಾಳು ಮಾಡಿ ಕೊಳವೆ ಬಾವಿಯನ್ನು ಪಾಲಿಕೆಯ ರಸ್ತೆಯಲ್ಲಿ ಕೊರೆಸುತ್ತಿದ್ದವರಿಗೆ ಎಚ್ಚರಿಕೆ ನೀಡಿದ್ದಾರೆ. ಸಾರ್ವಜನಿಕರಿಗಾಗಿ ನಿರ್ಮಾಣ ಮಾಡಿದ ಡಾಂಬರು ರಸ್ತೆಯನ್ನು ಹಾಳು ಮಾಡಿದ್ದಕ್ಕೆ ಬಿಬಿಎಂಪಿ ಅಧಿಕಾರಿಗಳು ಗರಂ ಆದರು.
ಈ ಪ್ರಕರಣ ಸಂಬಂಧ ಅಕ್ಟೋಬರ್ 4ರಂದು ಪಾಲಿಕೆ ಅಧಿಕಾರಿಯು ಮಾಗಡಿ ಮುಖ್ಯ ರಸ್ತೆಯ ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಕೊಳವೆ ಬಾವಿ ಕೊರೆಸಿದವರ ಹಾಗೂ ಬೋರ್ವೆಲ್ ಕೊರೆಯುವ ವಾಹನದ ಮೇಲೆ ಕಾನೂನು ಕ್ರಮ ಕೈಗೊಳ್ಳಲು ದೂರು ನೀಡಿದ್ದಾರೆ.

ಪೊಲೀಸ್ ಠಾಣೆಯಲ್ಲಿ ಈಗಾಗಲೇ ಪ್ರಥಮ ವರ್ತಮಾನ ವರದಿ(ಎಫ್.ಐ.ಆರ್) ದಾಖಲಿಸಿಕೊಳ್ಳಲಾಗಿದೆ. ಕೂಡಲೆ ಸಂಬಂಧಪಟ್ಟವರ ಮೇಲೆ ಶಿಸ್ತು ಕ್ರಮ ಜರುಗಿಸಲು ಪೊಲೀಸ್ ಠಾಣೆಯಲ್ಲಿ ಕೋರಲಾಗಿದೆ. ಅಲ್ಲದೆ ಅನಧಿಕೃತವಾಗಿ ರಸ್ತೆಯಲ್ಲಿ ಕೊಳವೆ ಬಾವಿ ಕೊರೆದವರಿಗೆ ದಂಡ ವಿಧಿಸಲು ಕೂಡಾ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಬಿಬಿಎಂಪಿಯು ಪ್ರಕಟಣೆಯಲ್ಲಿ ತಿಳಿಸಿದೆ.
ಕಟ್ಟಡ ನಿರ್ಮಾಣ: ಆಸ್ತಿಗೆ ಹಾನಿ ಮಾಡಿದವರ ಮೇಲೆ ಎಫ್ಐಆರ್
ಇದೇ ರಾಜರಾಜೇಶ್ವರಿ ನಗರ ವಲಯದ ಕೆಂಚೇನಹಲ್ಲಿಯ ಐಡಿಯಲ್ ಹೋಮ್ಸ್ ಪೆಟ್ರೋಲ್ ಬ್ಯಾಂಕ್ ಬಳಿ ಮಂಜೇಗೌಡ ಎಂಬುವವರು ಕಟ್ಟಡ ನಿರ್ಮಿಸಲು ನಕ್ಷೆ ಮಂಜೂರಾತಿ ಪಡೆಯದೆ ಸುಮಾರು 6-8 ಅಡಿ ಆಳ ತಳಪಾಯದ(Earth Work Excavation) ಕಾಮಗಾರಿ ಮಾಡಲಾಗುತ್ತಿತ್ತು. ಇದರಿಂದ ಸುಮಾರು 70 ಅಡಿ ಉದ್ದದಷ್ಟು ಪಾದಚಾರಿ ರಸ್ತೆ ಹಾಗೂ ಒಳಚರಂಡಿಯು ಕುಸಿದು ಬಿದ್ದಿದೆ. ಪರಿಣಾಮ ಸಾರ್ವಜನಿಕರಿಗೆ ಓಡಾಡಲು ತೊಂದರೆ ಆಗುತ್ತಿದೆ.
ಅಲ್ಲದೇ ಒಳಚರಂಡಿ ಮುಂಭಾಗದಲ್ಲಿರುವ ಬಿ.ಎಂ.ಟಿ.ಸಿ ಬಸ್ ನಿಲ್ದಾಣವು ಸಹ ಕುಸಿಯುವ ಆತಂಕ ಎದುರಾಗಿದೆ. ಇಲಾಖೆಗೆ ಸರಿ ಸುಮಾರು 20 ಲಕ್ಷ ರೂ.ಗಳವರೆಗೂ ನಷ್ಟ ಉಂಟಾಗುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ.
ಕಟ್ಟಡ ಕಾಮಗಾರಿ ವೇಳೆಯಲ್ಲಿ ಯಾವುದೇ ಮುಂಜಾಗೃತ ಕ್ರಮ ಅನುಸರಿಸದೆ ಕಾಮಗಾರಿ ಮಾಡುತ್ತಿರುವುದರಿಂದ ಅಕ್ಕ-ಪಕ್ಕದ ಮನೆಗಳಿಗೂ ಸಹ ಹಾನಿಯಾಗುವ ಸಾಧ್ಯತೆ ಇದೆ. ಆದ್ದರಿಂದಲೇ ಕಟ್ಟಡ ಮಾಲೀಕರ ಮೇಲೆ ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್ ದಾಖಲಿಸಲಾಗಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ












Click it and Unblock the Notifications