ಕಾಂಗ್ರೆಸ್ ಕಾರ್ಯಕರ್ತರ ಕಿತ್ತಾಟ, ನಲಪಾಡ್ ವಿರುದ್ಧ ಎಫ್ಐಆರ್
ಬೆಂಗಳೂರು, ಮಾರ್ಚ್ 16: ಯುಬಿ ಸಿಟಿ ಫರ್ಜಿ ಕೆಫೆಯಲ್ಲಿ ಹಲ್ಲೆ, ಗಲಾಟೆ, ಮೇಖ್ರಿ ಸರ್ಕಲ್ ಬಳಿ ಅಪಘಾತ ಪ್ರಕರಣದ ನಂತರ ಶಾಸಕ ಎನ್.ಎ ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್ ಮತ್ತೆ ಸುದ್ದಿಯಲ್ಲಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರ ಕಿತ್ತಾಟ ಪೊಲೀಸ್ ಠಾಣೆ ಮೆಟ್ಟಿಲೇರಿದ್ದು, ನಲಪಾಡ್ ವಿರುದ್ಧ ದೂರು ದಾಖಲಾಗಿ, ಎಫ್ಐಆರ್ ಹಾಕಿರುವ ಘಟನೆ ನಡೆದಿದೆ.
Recommended Video
ಮೊಹಮದ್ ನಲಪಾಡ್ ಹಾಗೂ ಅವರ ಗನ್ ಮ್ಯಾನ್ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಟೀಮ್ ಹಲ್ಲೆ ಮಾಡಿದ್ಧಾರೆ ಎಂದು ಆರೋಪಿಸಲಾಗಿದೆ. ದೂರು ಸ್ವೀಕರಿಸಿರುವ ವೈಯಾಲಿ ಕಾವಲ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಎಫ್ ಐ ಆರ್ ಹಾಕಿದ್ದಾರೆ.
ವೈಯಾಲಿಕಾವಲ್ ತೆಲುಗು ಭವನದಲ್ಲಿ ಯೂತ್ ಕಾಂಗ್ರೆಸ್ನಿಂದ ಕಾರ್ಯಕ್ರಮ ಭಾನುವಾರ ಸಂಜೆ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಶಾಸಕ ಹ್ಯಾರೀಸ್ ಪುತ್ರ ಮೊಹಮ್ಮದ್ ನಲಪಾಡ್, ಬಸವಕಲ್ಯಾಣ ಶಾಸಕ ಬಿ ನಾರಾಯಣ ಪುತ್ರ ಗೌತಮ್ ಕೂಡಾ ಭಾಗಿಯಾಗಿದ್ದರು.

ವೇದಿಕೆ ಮೇಲೆ ಭಾಷಣಕ್ಕೋ, ಕುಳಿತುಕೊಳ್ಳುವುದಕ್ಕೋ ಗೌತಮ್ ಗೆ ಸ್ಥಳಾವಕಾಶ ನೀಡಲ್ಲವೇಕೆ ಎಂದು ಸಚಿನ್ ಗೌಡ ಎಂಬ ಕಾರ್ಯಕರ್ತ ಜೋರು ಗಲಾಟೆ ಎಬ್ಬಿಸಿದ್ದಾನೆ. ಯೂತ್ ಕಾಂಗ್ರೆಸ್ ಉಪಾಧ್ಯಕ್ಷ ಶಿವಕುಮಾರ್ ಸಮಾಧಾನ ಪಡಿಸಲು ಯತ್ನಿಸಿ ಸೋತಿದ್ದಾರೆ. ಈ ಸಂದರ್ಭದಲ್ಲಿ ಇಬ್ಬರ ನಡುವಿನ ಗಲಾಟೆ ಬಿಡಿಸಲು ಹೋದ ನಲಪಾಡ್ ವಿರುದ್ಧವೇ ಸಚಿನ್ ಗೌಡ ಆವಾಜ್ ಹಾಕಿದ್ದಾರೆ ಎನ್ನಲಾಗಿದೆ.
ಮಾತಿನ ಚಕಮಕಿ ಕೈ ಮೀರಿ ಕೈ ಕೈ ಮಿಲಾಯಿಸುವ ಹಂತ ತಲುಪುತ್ತಿದ್ದಂತೆ ಸಚಿನ್ ಮೇಲೆ ನಲಪಾಡ್ ಗನ್ ಮ್ಯಾನ್ ಹಲ್ಲೆ ಮಾಡಿದ್ದಾನೆ ಎಂಬುದು ಆರೋಪ.
ಸದ್ಯ ವೈಯಾಲಿಕಾವಲ್ ಠಾಣೆಗೆ ನಲಪಾಡ್ ಹಾಗೂ ಸಚಿನ್ ಇಬ್ಬರು ತೆರಳಿ ದೂರು, ಪ್ರತಿದೂರು ಕೊಟ್ಟು ಬಂದಿದ್ದಾರೆ. ಘಟನೆ ಬಗ್ಗೆ ವಿವರ ಪಡೆದಿರುವ ಪೊಲೀಸರು, ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸುತ್ತಿದ್ದು, ಪುಂಡಾಟ ಆರಂಭಿಸಿದ್ದು ಯಾರು? ಎಂಬುದನ್ನು ಗಮನಿಸಿ ಮುಂದಿನ ಕ್ರಮ ಕೈಗೊಳ್ಳುವ ಸಾಧ್ಯತೆಯಿದೆ.
-
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ 3 ಜಾಗ ನಿಗದಿ: ಡಿಸಿಎಂ ಡಿ.ಕೆ ಶಿವಕುಮಾರ್ ಅಪ್ಡೇಟ್ಸ್ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್












Click it and Unblock the Notifications