ಆಗಸ್ಟ್ 18ರಂದು ಬಿಜೆಪಿಯಿಂದ ವಿಧಾನಸೌಧ ಚಲೋ
ಬೆಂಗಳೂರು, ಆಗಸ್ಟ್ 17: ಶುಕ್ರವಾರ ಅಂದರೆ ಆಗಸ್ಟ್ 18ರಂದು ರಾಜ್ಯ ಕಾಂಗ್ರೆಸ್ ಸರ್ಕಾರದ ಭ್ರಷ್ಟ ಸಚಿವರ ರಾಜಿನಾಮೆಗೆ ಒತ್ತಾಯಿಸಿ ಬಿಜೆಪಿ 'ವಿಧಾನಸೌಧ ಚಲೋ' ಕಾರ್ಯಕ್ರಮವನ್ನು ಆಯೋಜಿಸಿದೆ.
ಡಿಕೆಶಿ, ಜಾರಕಿಹೊಳಿ ರಾಜೀನಾಮೆಗಾಗಿ ಶುಕ್ರವಾರದಿಂದ ಬಿಜೆಪಿ ಹೋರಾಟ
ಬೆಳಿಗ್ಗೆ 11 ಗಂಟೆಗೆ ಫ್ರೀಡಂ ಪಾರ್ಕ್ ನಿಂದ ಭಾರೀ ಪ್ರತಿಭಟನೆ ಆರಂಭವಾಗಲಿದೆ. ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಮತ್ತು ವಿಧಾನಸಭೆಯ ವಿರೋಧ ಪಕ್ಷದ ಉಪನಾಯಕ ಆರ್.ಅಶೋಕ್ ಪ್ರತಿಭಟನೆಯ ನೇತೃತ್ವ ವಹಿಸಲಿದ್ದಾರೆ.
ಬಿಜೆಪಿಯ ಬೆಂಗಳೂರು ನಗರ ಅಧ್ಯಕ್ಷ ಪಿ.ಎನ್. ಸದಾಶಿವ, ಬೆಂಗಳೂರು ನಗರ ಜಿಲ್ಲೆ ಅಧ್ಯಕ್ಷ ಎಸ್. ಮುನಿರಾಜು, ಬೆಂಗಳೂರು ಮಹಾನಗರದ ಶಾಸಕರು, ವಿಧಾನ ಪರಿಷತ್ ಸದಸ್ಯರು, ಬಿಬಿಎಂಪಿ ಸದಸ್ಯರು, ಬೆಂಗಳೂರು ನಗರ ಮತ್ತು ನಗರ ಜಿಲ್ಲೆ ಪದಾಧಿಕಾರಿಗಳು ಹಾಗೂ ಸಾವಿರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗವಹಿಸಲಿದ್ದಾರೆ.
"@BJP4Karnataka Rally from Freedom park to vidhana soudha.
— Shama Sundara S K (@shamsundar_sk) August 17, 2017
Friday 11 AM. @CMofKarnataka @blrtraffic @AmitShah @OneindiaKannada
ಕಳೆದ ವಾರ ಬೆಂಗಳೂರಿಗೆ ಭೇಟಿ ನೀಡಿದ್ದ ಬಿಜೆಪಿ ರಾಷ್ಟ್ರಧ್ಯಕ್ಷ ಅಮಿತ್ ಶಾ, ಕಾಂಗ್ರೆಸ್ ಸರ್ಕಾರದ ಭ್ರಷ್ಟ ಸಚಿವರ ರಾಜೀನಾಮೆಗೆ ಒಂದು ವಾರಗಳ ಕಾಲ ಪ್ರತಿಭಟನೆ ನಡೆಸುವಂತೆ ರಾಜ್ಯ ನಾಯಕರಿಗೆ ಸೂಚಿಸಿದ್ದರು. ಇದೀಗ ಅದರಂತೆ ಪ್ರತಿಭಟನೆಗೆ ಇಳಿದಿದ್ದಾರೆ.