ಕಾಳಿ ದೇವತೆ ಅವಹೇಳನ ಮಾಡಿದ ಟ್ವಿಟ್ಟರ್ ಮತ್ತು ನಾಸ್ತಿಕ ಅರ್ಮಿನ್ ನವಾಬಿ ವಿರುದ್ಧ ಎಫ್ಐಆರ್ !
ಬೆಂಗಳೂರು, ಡಿಸೆಂಬರ್ 30: ಹಿಂದೂಗಳ ಆರಾಧ್ಯ ದೇವತೆ ಕಾಳಿಕಾ ದೇವಿ ಅರೆನಗ್ನ ಚಿತ್ರ ಪೋಸ್ಟ್ ತೆಗೆಯದ ಆರೋಪಕ್ಕೆ ಸಂಬಂಧಿಸಿದಂತೆ ಪ್ರಸಿದ್ಧ ಜಾಲ ತಾಣ ಟ್ವಿಟ್ಟರ್ ಸಂಸ್ಥೆ ವಿರುದ್ಧ ಬೆಂಗಳೂರಿನಲ್ಲಿ ಎಫ್ಐಆರ್ ದಾಖಲಾಗಿದೆ.
ಅಶ್ಲೀಲ ಪೋಸ್ಟ್ ಹಾಕಿದ್ದ ಅರ್ಮಿನ್ ನವಾಬಿ, ಟ್ವಿಟ್ಟರ್ ಸಂಸ್ಥೆ, ಅದರ ಸಿಇಓ ಜಾಕ್ ಡೋರ್ಸಿ, ಭಾರತದ ನಿರ್ದೇಶಕರಾದ ಮಹೀಮ್ ಕೌಲ್, ಮನೀಷ್ ಮಹೇಶ್ವರಿ, ಮಾಯ ಹರಿ ಸೇರಿದಂತೆ ಏಳು ಮಂದಿಯ ವಿರುದ್ಧ ಕೆ.ಆರ್.ಪುರ ಪೊಲೀಸ್ ಠಾಣೆಯಲ್ಲಿ ಕ್ರಿಮಿನಲ್ ಕೇಸು ದಾಖಲಾಗಿದೆ.
ಕೆ.ಆರ್. ಪುರಂ ಬಸವನಪುರ ನಿವಾಸಿ ಕಿರಣ್ ಆರಾಧ್ಯ ಎಂಬುವರು ಈ ಕುರಿತು ಸಲ್ಲಿಸಿದ್ದ ಖಾಸಗಿ ದೂರನ್ನು ವಿಚಾರಣೆ ನಡೆಸಿದ ನ್ಯಾಯಾಲಯ ಐಟಿ ಕಾಯ್ದೆ ಅಡಿ ಕೇಸು ದಾಖಲಿಸಿ ತನಿಖೆ ನಡೆಸಲು ಆದೇಶಿಸಿದೆ. ಆರೋಪಿ ಅರ್ಮಿನ್ ನವಾಬಿ ಮತ್ತು ಟ್ವಿಟ್ಟರ್ ಸಂಸ್ಥೆ ವಿರುದ್ಧ ಮಾಹಿತಿ ತಂತ್ರಜ್ಞಾನ ಕಾಯ್ದೆಯ 67(a) ಹಾಗೂ ಐಪಿಸಿಯ 292a 295a, ಹಾಗೂ 298 ಕಾಯ್ದೆಯಡಿ ಎಫ್ ಐ ಆರ್ ದಾಖಲಾಗಿದೆ.

ಕಾಳಿಕಾ ದೇವಿಯ ಅಶ್ಲೀಲ ಚಿತ್ರಗಳನ್ನು ಹಾಕಿ ತ ಸೆಕ್ಸಿ ಗಾಡ್ಗಳು ಇರುವ ನಾನು ಹಿಂದೂಧರ್ಮವನ್ನು ಪ್ರೀತಿಸುತ್ತಿದ್ದೀನಿ ಎಂದು ಅರ್ಮಿನ್ ನವಾಬಿ ಎಂಬುವ ಅವಹೇಳನ ಮಾಡಿದ್ದ. ಹಿಂದೂ ದೇವತೆ ಅವಹೇಳನ ಪೋಸ್ಟ್ ತೆಗೆಯುವಂತೆ ಕಿರಣ್ ಆರಾಧ್ಯ ಟ್ವಿಟ್ಟರ್ ಸಂಸ್ಥೆಗೆ ಹಲವಾರು ಬಾರಿ ಮನವಿ ಮಾಡಿದ್ದರು. ಯಾವುದೇ ಕ್ರಮ ಜರುಗಿಸಿರಲಿಲ್ಲ.

ನಲವತ್ತು ದಿನಗಳ ಬಳಿಕ ಅರ್ಮಿನ್ ನವಾಬಿಯ ಟ್ವಿಟ್ಟರ್ ಖಾತೆ ರದ್ದು ಪಡಿಸಿ ಕೆಲವೇ ದಿನಕ್ಕೆ ಪುನಃ ಚಾಲ್ತಿ ನೀಡಿದ್ದರು. ಮತ್ತೆ ಹಿಂದೂ ದೇವತೆಗಳ ಬಗ್ಗೆ ಅವಹೇಳನ ಮಾಡಿ ಪೋಸ್ಟ್ ಗಳನ್ನು ಹಾಕಿ ಹಿಂದೂಗಳ ಭಾವನೆಗಳಿಗೆ ಧಕ್ಕೆ ತಂದಿದ್ದಾನೆ. ಈ ಕುರಿತು ಕಿರಣ್ ಆರಾಧ್ಯ ನ್ಯಾಯಾಲಯದಲ್ಲಿ ಖಾಸಗಿ ದೂರು ಸಲ್ಲಿಸಿದ್ದರು. ನ್ಯಾಯಾಲಯದ ಆದೇಶದ ಮೇರೆಗೆ ಇದೀಗ ಟ್ವಿಟ್ಟರ್ ಸಂಸ್ಥೆ ವಿರುದ್ಧವೇ ಎಫ್ಐಆರ್ ದಾಖಲಾಗಿದೆ.

ಅರ್ಮಿನ್ ನವಾಬಿ ಕೆನಡಾ ಮೂಲದ ನಾಸ್ತಿಕ. ಇವನು ಥೆಹರಾನ್ ಮೂಲದವ. ಮೊದಲು ದೇವರು, ಸ್ವರ್ಗ, ನರಕದ ಬಗ್ಗೆ ನಂಬಿಕೆ ಇಟ್ಟಿದ್ದ. ಚಿಕ್ಕಂದಿನಲ್ಲೇ ಶಾಲೆಯ ಕಿಟಕಿಯಿಂದ ಬಿದ್ದು ಆತ್ಮಹತ್ಯೆಗೆ ಯತ್ನಿಸಿದ್ದ. ಬಳಿಕ ಥೆಹರಾನ್ ನ ವಿವಿಯಲ್ಲಿ ಪದವಿ ಪಡೆದಿದ್ದ. ದೇವರ ಮೇಲೆ ನಂಬಿಕೆ ಕಳೆದುಕೊಂಡು ನಾಸ್ತಿಕನಾಗಿ ಬದಲಾಗಿದ್ದ.ಕೆನಡಾದ ಪೌರತ್ವ ಪಡೆದ ಬಳಿಕ ಆತ 2014 ರಲ್ಲಿ ಯಾಕೆ ದೇವರು ಇಲ್ಲ ಎಂಬ ಪುಸ್ತಕವನ್ನು ಹೊರತಂದಿದ್ದ. ಇದಕ್ಕೂ ಮೊದಲು ಆರ್ಕುಟ್ ಮತ್ತು ಫೇಸ್ ಬುಕ್ ಪುಟಗಳಲ್ಲಿ ಇರಾನಿಯ ನಾಸ್ತಿಕರು ಎಂಬ ಗುಂಪು ರಚಿಸಿ ದೇವರುಗಳ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕುತ್ತಿದ್ದ. ಇದೀಗ ಬೆಂಗಳೂರಿನಲ್ಲೂ ಅರ್ಮಿನ್ ನವಾಬಿ ಹುಚ್ಚಾಟಕ್ಕೆ ಕೇಸು ದಾಖಲಾಗಿದೆ.
-
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Moodbidri: ಮಹಿಳೆಯರನ್ನು ಮಂಚಕ್ಕೆ ಕರೆದಿದ್ದ ಆರೋಪ: ಮೂಡುಬಿದರೆ ಇನ್ಸ್ಪೆಕ್ಟರ್ ದೌರ್ಜನ್ಯ ಪ್ರಕರಣ ಸಿಐಡಿ ತನಿಖೆ -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು?











Click it and Unblock the Notifications