Get Updates
Get notified of breaking news, exclusive insights, and must-see stories!

Karnataka Election 2023: ಬಿರಿಯಾನಿ ಔತಣ ನೀಡಿದ ಬಿಜೆಪಿ ಸಚಿವ ಸೋಮಶೇಖರ್ ವಿರುದ್ಧ ಎಫ್‌ಐಆರ್

ಬೆಂಗಳೂರು, ಏಪ್ರಿಲ್ 14: ಇದು ಚುನಾವಣಾ ಸಮಯ. ನಾವು ಏನೇ ಮಾಡಿದರೂ ಅದರ ಮೇಲೆ ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ಕಣ್ಣಿರುತ್ತದೆ ಎಂಬುದು ರಾಜಕೀಯ ಪಕ್ಷಗಳು ಮತ್ತು ನಾಯಕರಿಗೆ ತಿಳಿದಿರಬೇಕು. ಹೇಗೋ ರಂಜಾನ್ ಪವಿತ್ರ ತಿಂಗಳು ನಡೆಯುತ್ತಿದೆ ಇದೇ ನೆಪದಲ್ಲಿ ಜನರಿಗೆ ರುಚಿಕರವಾದ ಬಿರಿಯಾನಿ ತಿನ್ನಲು ಆಹ್ವಾನಿಸುವ ಎಂದರೇ ಮಾತ್ರ ನಿಮ್ಮ ಮೇಲೆ ಪ್ರಕರಣ ದಾಖಲಾಗುತ್ತೆ ಹುಷಾರ್..!

ಹೌದು.... ಒಳ್ಳೆ ಊಟ ಕೊಡುಸ್ತಿನಿ ಬನ್ನಿ ಅಂತ ನೀವು ಜನರನ್ನು ಕರೆದು ಆರಾಮಾವಾಗಿ ಊಟ ಹಾಕಿಸಬಹುದು. ಆದರೆ ನೀವು ರಾಜಕೀಯ ಪಕ್ಷದವರಾಗಿದ್ದು, ಚುನಾವಣಾ ಪ್ರಚಾರದಲ್ಲಿ ನಿರತ ರಾಜಕಾರಣಿಯಾಗಿದ್ದರೆ ಮಾತ್ರ ಅದು ಮಾದರಿ ನೀತಿ ಸಂಹಿತೆಯ ಉಲ್ಲಂಘನೆಯಾಗಬಹುದು. ನಿಮ್ಮ ಮೇಲೆ ದೂರು ಕೂಡ ದಾಖಲಾಗಬಹುದು.

FIR Registered Against BJP Minister ST Somashekhar for Hosting Biryani Feast

ಬೆಂಗಳೂರಿನ ಯಶವಂತಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಸಹಕಾರ ಸಚಿವ ಎಸ್‌ಟಿ ಸೋಮಶೇಖರ್ ಮತದಾರರನ್ನು ಬಿರಿಯಾನಿ ತಿನ್ನಲು ಬನ್ನಿ ಎಂದು ಆಹ್ವಾನಿಸಿದ್ದಕ್ಕೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ತಮ್ಮ ಚುನಾವಣಾ ಪ್ರಚಾರದ ವೇಳೆ ಜನರಿಗೆ ಊಟ ಮಾಡುವಂತೆ ಮನವಿ ಮಾಡಿದ್ದಕ್ಕಾಗಿ ಚುನಾವಣಾಧಿಕಾರಿಗಳು ಸಚಿವರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ.

ಸಚಿವ ಎಸ್‌ಟಿ ಸೋಮಶೇಖರ್ ವಿರುದ್ಧ ಜಾತ್ಯಾತೀತ ಜನತಾದಳ ಪಕ್ಷದ ದೂರಿನ ನಂತರ ಚುನಾವಣಾ ಆಯೋಗವು ಈ ಬಿರಿಯಾನಿ ಪಾರ್ಟಿ ಆಯೋಜಿಸಿದ್ದಕ್ಕಾಗಿ ಬಿಜೆಪಿ ಸಚಿವರ ವಿರುದ್ಧ ಎಫ್‌ಐಆರ್ ದಾಖಲಿಸಿದೆ.

ಏಪ್ರಿಲ್ 9ರಂದು ಬೆಂಗಳೂರಿನ ಕೆಂಗೇರಿ ಹೋಬಳಿಯ ದೊಡ್ಡಿಪಾಳ್ಯದ ಕಬ್ಬಾಳಮ್ಮ ದೇವಸ್ಥಾನದ ಬಳಿ ಎಸ್‌ಟಿ ಸೋಮಶೇಖರ್ ಪ್ರಚಾರ ನಡೆಸುತ್ತಿದ್ದು, ಅಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಭಾಷಣ ಮುಗಿಸಲು ಸಿದ್ಧವಾದಾಗ ಅವರ ಬೆಂಬಲಿಗರು ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದವರಿಗೆ ಊಟ ಸಿದ್ಧವಾಗಿದೆ ಎಂದು ಘೋಷಿಸುವಂತೆ ಮನವಿ ಮಾಡಿದರು.

FIR Registered Against BJP Minister ST Somashekhar for Hosting Biryani Feast

ಈ ವೇಳೆ ಬಿಜೆಪಿ ಅಭ್ಯರ್ಥಿ ಎಸ್ ಟಿ ಸೋಮಶೇಖರ್ ಬೆಂಬಲಿಗರ ಮನವಿಗೆ ಒಪ್ಪಿಕೊಂಡು, "ಈಗಾಗಲೇ ಊಟಕ್ಕೆ ತಡವಾಗಿದೆ ಮತ್ತು ಆಹಾರ ಕೂ ಸಿದ್ಧವಾಗಿದೆ. ಅದೂ ಬಿರಿಯಾನಿ. ದಯವಿಟ್ಟು ಎಲ್ಲರೂ ಊಟ ಮಾಡಿಕೊಂಡು ಹೋಗಿ" ಎಂದಿದ್ದಾರು. ರಾಜ್ಯದಲ್ಲಿ ನೀತಿ ಸಂಹಿತೆ ಜಾರಿಯಿರುವ ಕಾರಣ ಹೀಗೆ ಮತದಾರರಿಗೆ ಆಮೀಷ ಒಡ್ಡುವಂತಿಲ್ಲ.

ಸೋಮಶೇಖರ್ ಅವರು ಮತದಾರರಿಗೆ ಆಮಿಷ ಒಡ್ಡಿ ಬಿರಿಯಾನಿ ಔತಣ ನೀಡಿ ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಅವರ ಹೇಳಿಕೆಯ ವಿಡಿಯೋ ದೃಶ್ಯಾವಳಿ ಆಧರಿಸಿ ಜೆಡಿಎಸ್ ರಾಜ್ಯ ಕಾನೂನು ಘಟಕದ ಅಧ್ಯಕ್ಷ ಎ.ಪಿ.ರಂಗನಾಥ್ ಮುಖ್ಯ ಚುನಾವಣಾಧಿಕಾರಿಗೆ ದೂರು ಸಲ್ಲಿಸಿದ್ದಾರೆ. ವಿಡಿಯೋ ದೃಶ್ಯಾವಳಿ ಆಧರಿಸಿ ಚುನಾವಣಾ ಕಣ್ಗಾವಲು ತಂಡದ ಅಧಿಕಾರಿ ಪ್ರಕಾಶ್ ಸಿಪಿ ಅವರು ಕಗ್ಗಲಿಪುರ ಪೊಲೀಸರಿಗೆ ದೂರು ನೀಡಿದ್ದು, ಬುಧವಾರ ಸೋಮಶೇಖರ್ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ.

ಮೇ ಹತ್ತರಂದು ನಡೆಯಲಿರುವ ವಿಧಾನಸಭಾ ಚುನಾವಣೆ ಹಿನ್ನೆಲೆ ರಾಜ್ಯದಲ್ಲಿ ಮಾರ್ಚ್ 29 ನೀತಿ ಸಂಹಿತೆ ಜಾರಿಯಾಗಿದೆ. ಆದರೂ, ಕೂಡ ಸಿವಿಜಿಲ್ ಆ್ಯಪ್‌ನಲ್ಲಿ ಏಪ್ರಿಲ್ 11ರವರೆಗೆ ಮಾದರಿ ನೀತಿ ಸಂಹಿತೆ ಉಲ್ಲಂಘನೆಗೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ 460 ದೂರುಗಳು ದಾಖಲಾಗಿವೆ.

ನೀತಿ ಸಂಹಿತೆ ಉಲ್ಲಂಘನೆಗೆ ಸಂಬಂಧಿಸಿದಂತೆ ಮಂಗಳವಾರದವರೆಗೆ 1,018 ಎಫ್‌ಐಆರ್‌ಗಳು ದಾಖಲಾಗಿದ್ದು, ಮಾದಕ ದ್ರವ್ಯ, ಮದ್ಯ, ಅಮೂಲ್ಯ ಲೋಹಗಳು ಮತ್ತು ಇತರ ಉಡುಗೊರೆಗಳು ಸೇರಿದಂತೆ 51 ಕೋಟಿ ರೂಪಾಯಿ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಮಾದರಿ ನೀತಿ ಸಂಹಿತೆ ಜಾರಿಯಾದ ನಂತರ 24 ಗಂಟೆಗಳ ಸಹಾಯವಾಣಿ ಸೇವೆಯನ್ನು ತೆರೆಯಲಾಗಿದೆ

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+