ವಿದೇಶದಲ್ಲಿ ಕೆಲಸದ ಆಸೆ ತೋರಿಸಿ ನಿರುದ್ಯೋಗಿ ಯುವಕರಿಗೆ ವಂಚನೆ
ಬೆಂಗಳೂರು, ಜು. 01: ವಿದೇಶದಲ್ಲಿ ಕೆಲಸ ಪಡೆಯುವ ಆಸೆಗೆ ಬಿದ್ದು ಮೋಸ ಹೋಗಬೇಡಿ. ಅಂಗೈಯಲ್ಲಿ ಆಕಾಶ ತೋರಿಸಿ ನಾಮ ಹಾಕುವ ಬೋಗಸ್ ಕಂಪನಿಗಳು ಮೋಸ ಮಾಡಲೆಂದೇ ಹುಟ್ಟಿಕೊಂಡಿವೆ. ವಿದೇಶದಲ್ಲಿ ಕೆಲಸ ಕೊಡಿಸುವ ಆಸೆ ಹುಟ್ಟಿಸಿ ನಿರುದ್ಯೋಗಿಗಳಿಂದ ಲಕ್ಷಾಂತರ ಹಣ ಪಡೆದು ಮೋಸ ಮಾಡಿದ್ದ ಕಂಪನಿಯೊಂದರ ವಿರುದ್ಧ ಇಂದಿರಾನಗರ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ.
ಕೆನಡಾದ ಪ್ರತಿಷ್ಠಿತ ಕಂಪನಿಯಲ್ಲಿ ಕೆಲಸ ಕೊಡಿಸುವ ಆಸೆ ತೋರಿಸಿ ವಿಆರ್ಆರ್ ವೆಂಚರ್ಸ್ ಪ್ರೆ. ಲಿಮಿಟೆಡ್ ನೂರಾರು ನಿರುದ್ಯೋಗಿ ಯುವಕರಿಂದ ಲಕ್ಷಾಂತರ ಹಣ ಪಡೆದು ಮೋಸ ಮಾಡಿದೆ. ಹಣ ಕಳೆದುಕೊಂಡು ಬೀದಿಗೆ ಬಿದ್ದಿರುವ ಯುವಕರು ಕಂಪನಿ ವಿರುದ್ಧ ಇಂದಿರಾನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರಿನ ಮೇರೆಗೆ ಕಂಪನಿ ಮುಖ್ಯಸ್ಥರಿಗಾಗಿ ಶೋಧ ನಡೆಸುತ್ತಿದ್ದಾರೆ.
ಕೆನಡಾದ ಪ್ರತಿಷ್ಠಿತ ಕಂಪನಿಯಲ್ಲಿ ಕೆಲಸ ಕೊಡಿಸುವುದಾಗಿ ವಿಆರ್ಆರ್ ವೆಂಚರ್ಸ್ ಜಾಹೀರಾತು ನೀಡಿತ್ತು. ಇದನ್ನು ನಂಬಿ ನೂರಾರು ಯುವಕರು ಸಂದರ್ಶನಕ್ಕೆ ಬಂದಿದ್ದರು. ಕೆನಡಾದ ಪ್ರತಿಷ್ಠಿತ ಕಂಪನಿಯಲ್ಲಿ ಕೆಲಸ ಸಿಕ್ಕಿರುವ ಬಗ್ಗೆ ನಕಲಿ ಲೆಟರ್ ಹೆಡ್ ಗಳಲ್ಲಿ ನೇಮಕಾತಿ ಆದೇಶ ವಿಆರ್ಆರ್ ವೆಂಚರ್ಸ್ ನೀಡಿರುವುದು ನಕಲಿ ನೇಮಕಾತಿ ಪತ್ರಗಳು ಎಂಬುದು ಗೊತ್ತಾಗಿದೆ. ಆ ಬಳಿಕ ಕಂಪನಿಯ ಕಚೇರಿಗೆ ಹೋಗಿ ಹಣ ವಾಪಸು ನೀಡುವಂತೆ ಕೇಳಿದ್ದಾರೆ. ಇದಕ್ಕೆ ಯಾವುದೇ ಉತ್ತರ ನಿಡದೇ ಬೆದರಿಕೆ ಹಾಕಿದ್ದಾರೆ. ಇದರಿಂದ ನೊಂದ ಯುವಕರು ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.

Recommended Video
ದೇಶ- ವಿದೇಶದಲ್ಲಿ ಕೆಲಸ ಕೊಡಿಸುವ ನೆಪದಲ್ಲಿ ಹುಟ್ಟಿಕೊಂಡಿರುವ ಅನೇಕ ಕನ್ಸಲ್ಟೆನ್ಸಿ ಏಜೆನ್ಸಿಗಳು ಜನರಿಂದ ನೋಂದಣಿ ಶುಲ್ಕ, ನೇಮಕಾತಿ ಶುಲ್ಕ ಹೆಸರಿನಲ್ಲಿ ವಸೂಲಿ ಮಾಡುವ ಜಾಲ ಬೆಂಗಳೂರಿನಲ್ಲಿ ಮೊದಿನಿಂದಲೂ ನಡೆದುಕೊಂಡು ಬರೆತ್ತಿದೆ. ಇದೀಗ ವಿದೇಶದಲ್ಲಿ ಕೆಲಸ ಕೊಡಿಸುವ ಆಸೆ ಹುಟ್ಟಿಸಿ ಅಮಾಯಕ ಯುವಕರಿಗೆ ಕೆಲಸದ ಆಮಿಷ ತೋರಿಸಿ ಪ್ರತಿಷ್ಠಿತ ಕಂಪನಿಗಳ ಸೋಗಿನಲ್ಲಿ ಬೀದಿಗೆ ತಳ್ಳುತ್ತಿವೆ.
-
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Moodbidri: ಮಹಿಳೆಯರನ್ನು ಮಂಚಕ್ಕೆ ಕರೆದಿದ್ದ ಆರೋಪ: ಮೂಡುಬಿದರೆ ಇನ್ಸ್ಪೆಕ್ಟರ್ ದೌರ್ಜನ್ಯ ಪ್ರಕರಣ ಸಿಐಡಿ ತನಿಖೆ












Click it and Unblock the Notifications