ಬೆಂಗಳೂರು ಅಗ್ನಿ ದುರಂತ: 74 ಪಬ್ ಬಾರ್ ರೆಸ್ಟೋರೆಂಟ್ ಗಳಿಗೆ ನೋಟಿಸ್, ಬಂದ್ ಆಗಿದ್ದೇಷ್ಟು?, ವಲಯವಾರು ವಿವರ
ಬೆಂಗಳೂರು, ಅಕ್ಟೋಬರ್ 22: ಬಿಬಿಎಂಪಿ ವ್ಯಾಪ್ತಿಯಲ್ಲಿನ ಕೋರಮಂಗಲದಲ್ಲಿ ಮಡ್ ಕೆಫೆ ಬಾರ್ನಲ್ಲಿ ಅಗ್ನಿ ದುರಂತ ನಡೆದಿತ್ತು. ಈ ಘಟನೆ ಬಹಳಷ್ಟು ಚರ್ಚೆ ಆಗಿತ್ತು. ಅದರ ಬೆನ್ನಲ್ಲೆ ಅಗ್ನಿ ಸುರಕ್ಷತೆ ಕ್ರಮ ಕೈಗೊಳ್ಳುವ ಜೊತೆಗೆ ನಿಯಮ ಮೀರಿದ ಪಬ್, ಬಾರ್ ಮತ್ತು ರೆಸ್ಟೋರೆಂಟ್ ಗಳ ಪರಿಶೀಲನೆ ನೋಟಿಸ್ ಜಾರಿ ಮಾಡಲಾಗಿದೆ.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿರುವ ವಲಯವಾರು ಪಬ್, ಬಾರ್ ಮತ್ತು ರೆಸ್ಟೋರೆಂಟ್ ಗಳಿಗೆ ಸಂಬಂಧಿಸಿದಂತೆ ಪಾಲಿಕೆಯ 8 ವಲಯಗಳಲ್ಲಿ ಆರೋಗ್ಯಾಧಿಕಾರಿಗಳ ನೇತೃತ್ವದಲ್ಲಿ ಅಕ್ಟೊಬರ್ 22ರಂದು ತಪಾಸಣೆ ನಡೆಸಲಾಗಿದೆ. ನ್ಯೂನ್ಯತೆಗಳು ಕಂಡು ಬಂದಿರುವಂತಹ ಉದ್ದಿಮೆಗಳಿಗೆ ನೋಟಿಸ್ ಜಾರಿಮಾಡಲಾಗಿದೆ. ಜೊತೆಗೆ ಪರವಾನಿಗೆ ನಿಯಮಾವಳಿ ಪಾಲಿಸದ ಉದ್ದಿಮೆಗಳನ್ನು ಸ್ಥಳದಲ್ಲೇ ಮುಚ್ಚಲಾಗಿದೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ ಒಟ್ಟು ಸುಮಾರು 157 ಉದ್ದಿಮೆಗಳನ್ನು ಪರಿಶೀಲಿಸಲಾಗಿದೆ. ಅದರಲ್ಲಿ 74 ಉದ್ದಿಮೆಗಳಿಗೆ ನೋಟಿಸ್ ಜಾರಿಗೊಳಿಸಿ 10 ಉದ್ದಿಮೆಗಳನ್ನು ಮುಚ್ಚಲಾಗಿರುತ್ತದೆ. ನೋಟಿಸ್ ಜಾರಿ ಮಾಡಿದ್ದರ ಕುರಿತು ಪೂರ್ಣ ವಿವರ ಇಲ್ಲಿದೆ.
ವಲಯವಾರು ನೋಟಿಸ್, ಬಂದ್ ವಿವರ
ಒಟ್ಟು ಎಂಟು ವಲಯಗಳ ಪೈಕಿ ಬೊಮ್ಮನಹಳ್ಳಿಯಲ್ಲಿ ನಾಲ್ಕು ನೋಟಿಸ್ ಜಾರಿ ಮಾಡಲಾಗಿದೆ. ದಾಸರಹಳ್ಳಿಯಲ್ಲಿ ಒಟ್ಟು 22 ಬಾರ್, ಪಬ್ ರಸ್ಟೋರೆಂಟ್ ಗಳ ಮೇಲೆ ಪರಿಶೀಲಿಸಲಾಯಿತು. ಅದರಲ್ಲಿ ಹತ್ತು ಮಳಿಗೆಗಳಿಗೆ ನೋಟಿಸ್ ಜಾರಿ ಮಾಡಲಾಗಿದೆ.
ಇನ್ನೂ ಬೆಂಗಳೂರು ಪೂರ್ವ ವಲಯದಲ್ಲಿ ಒಟ್ಟು 36 ಮಳಿಗೆಗಳ ಪರಿಶೀಲನೆ ನಡೆಸಲಾಗಿದೆ. ಒಟ್ಟು 24 ನೋಟಿಸ್ ಜಾರಿ ಮಾಡಲಾಗಿದೆ. ಇದರಲ್ಲಿ ಪಬ್ ಬಾರ್ ರೆಸ್ಟೋರೆಂಟ್ ಸೇರಿ ಒಟ್ಟು ಏಳು ಬಂದ್ ಮಾಡಿಸಲಾಗಿದೆ. ಮಹಾದೇವಪುರದಲ್ಲಿ ಆರು ಮಳಿಗೆಗಳಿಗೆ ನೋಟಿಸ್ ನೀಡಲಾಗಿದೆ.
ಆರ್ಆರ್ ನಗರ ವಲಯದಲ್ಲಿ 3, ದಕ್ಷಿಣ ವಲಯದಲ್ಲಿ 08, ಪಶ್ಚಿಮ ವಲಯದಲ್ಲಿ 02 ಹಾಗೂ ಯಲಹಂಕ ವ್ಯಾಪ್ತಿಯಲ್ಲಿ 17 ನೋಟಿಸ್ ಜಾರಿ ಮಾಡಲಾಗಿದೆ. ಒಟ್ಟ 10 ಅಂಗಡಿಗಳನ್ನು ಬಂದ್ ಮಾಡಿಸಲಾಗಿದೆ ಎಂದು ಬಿಬಿಎಂಪಿ ತಿಳಿಸಿದೆ.
-
ಬೆಂಗಳೂರು ಉತ್ತರ: ಮಳೆಗಾಲಕ್ಕೂ ಮುನ್ನ ಮುನ್ನೆಚ್ಚರಿಕೆ ಕ್ರಮ, ರಸ್ತೆ ಅಗಲೀಕರಣ, ಟಿ.ಡಿ.ಆರ್ ಬಗ್ಗೆ ಮಹತ್ವದ ಚರ್ಚೆ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು?











Click it and Unblock the Notifications