ಬೆಂಗಳೂರಲ್ಲಿ ಹೊತ್ತಿ ಉರಿದ ಬೈಕ್ ಮಾರಾಟ ಮಳಿಗೆ
ಬೆಂಗಳೂರು, ಫೆಬ್ರವರಿ 26: ನಗರದ ಇನ್ಫ್ಯಾಂಟ್ರಿ ರಸ್ತೆಯಲ್ಲಿರುವ ಜ್ಯೋತಿ ಕಾಂಪ್ಲೆಕ್ಸ್ನಲ್ಲಿರುವ ಶೋ ರೂಂನಲ್ಲಿ ಬೆಂಕಿ ಅವಘಡ ಸಂಭವಿಸಿದೆ.
ಶೋರೂಮ್ನಲ್ಲಿ ಎಲೆಕ್ಟ್ರಿಕ್ ವಾಹನವನ್ನು ಚಾರ್ಜ್ ಮಾಡಲಾಗುತ್ತಿತ್ತು. ಓವರ್ ಚಾರ್ಜ್ ಆಗಿ ಈ ಘಟನೆ ಸಂಭವಿಸಿರಬಹುದು ಎಂದು ಸಂದಾಜಿಸಲಾಗಿದೆ.
ಸೌತ್ ಎಂಡ್ ಮೆಟ್ರೋ ನಿಲ್ದಾಣದ ಬಳಿ ಅಗ್ನಿ ಅವಘಡ
ಸ್ಥಳಕ್ಕೆ ಎರಡು ಅಗ್ನಿಶಾಮಕ ತಂಡದವರು ಬಂದು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಯಾವುದೇ ಸಾವು-ನೋವು ಸಂಭವಿಸಿಲ್ಲ. ಎಷ್ಟು ನಷ್ಟ ಉಂಟಾಗಿದೆ ಎನ್ನುವ ಕುರಿತು ಮಾಹಿತಿ ಇನ್ನೇನು ಸಿಗಬೇಕಿದೆ. ಫೆಬ್ರವರಿ 25ರಂದು ಜಯನಗರದ ಸೌತ್ಎಂಡ್ ಬಳಿ ಇರುವ ಮೆಟ್ರೋ ನಿಲ್ದಾಣಕ್ಕೆ ಹೊಂದಿಕೊಂಡಂತಿರುವ ಹೋಟೆಲ್ ಒಂದರಲ್ಲಿ ಬೆಂಕಿ ಕಾಣಿಸಿಕೊಂಡಿತ್ತು.
ಆರ್ ವಿ ರಸ್ತೆಯಲ್ಲಿರುವ ನ್ಯೂ ಶಾಂತಿ ಸಾಗರ ಹೋಟೆಲ್ನ ಎರಡನೇ ಮಹಡಿಯ ಅಡುಗೆ ಮನೆಯಲ್ಲಿ ಬೆಂಕಿ ಹೊತ್ತಿಕೊಂಡು ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಕೂಡಲೇ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿ, ಹೆಚ್ಚಿನ ದುರಂತವನ್ನು ತಪ್ಪಿಸಿದ್ದರು.