ಬೆಂಗಳೂರು: ಅಲಂಕಾರಿಕಾ ವಸ್ತುಗಳ ಸ್ಟೋರ್ನಲ್ಲಿ ಅಗ್ನಿ ಅವಘಡ
ಬೆಂಗಳೂರು, ಫೆಬ್ರವರಿ, 16: ಬೆಂಗಳೂರಿನಲ್ಲಿ ಅಗ್ನಿ ಅವಘಡ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಲಿವೆ. ಹಾಗೆಯೇ ಇದೀಗ ಇಂದು (ಫೆಬ್ರವರಿ 16) ಅಲಂಕಾರಿಕಾ ವಸ್ತುಗಳ ಸ್ಟೋರ್ ಮಾಡಿದ್ದ ಜಾಗದಲ್ಲಿ ದಿಢೀರ್ ಹೊತ್ತಿ ಕಾಣಿಸಿಕೊಂಡ ಘಟನೆ ನಗರದ ಅರಮನೆ ಮೈದಾನದಲ್ಲಿ ನಡೆದಿದೆ.
ಡೆಕೊರೇಷನ್ ವೇಸ್ಟ್ ವಸ್ತುಗಳನ್ನು ಸಂಗ್ರಹ ಮಾಡುವ ಜಾಗದಲ್ಲಿ ಅಗ್ನಿ ಕಾಣಿಸಿಕೊಂಡಿದೆ. ಬೆಂಕಿ ಕಂಡ ತಕ್ಷಣವೇ ಸ್ಥಳೀಯರು ಅಗ್ನಿಶಾಮಕ ಸಿಬ್ಬಂದಿಗೆ ಕರೆ ಮಾಡಿದ್ದಾರೆ. ಈ ಮಾಹಿತಿ ಮೇರೆಗೆ ಕೂಡಲೇ ಘಟನಾ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದೆ ಎಂದು ತಿಳಿದುಬಂದಿದೆ.

ಬೈಕ್ ಶೋ ರೂಮ್ನಲ್ಲಿ ಅಗ್ನಿ ಅವಘಡ: ಇತ್ತೀಚೆಗಷ್ಟೇ ಬೆಂಗಳೂರಿನ ರಾಜಾಜಿನಗರ ಎಲೆಕ್ಟ್ರಿಕ್ ಬೈಕ್ ಶೋ ರೂಮ್ನಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಘಟನೆಯಲ್ಲಿ 10 ವಾಹನಗಳು ಸುಟ್ಟು ಭಸ್ಮವಾಗಿದ್ದು, 20ಕ್ಕೂ ಹೆಚ್ಚು ವಾಹನಗಳು ಭಾಗಶಃ ಹಾನಿಗೆ ಒಳಗಾಗಿದ್ದವು. ಈ ವೇಳೆ ಯಾವುದೇ ಪ್ರಾಣಾಪಾಯ ಸಂಭವಿಸಿರಲಿಲ್ಲ ಎಂದು ತಿಳಿದುಬಂದಿತ್ತು.
ಸ್ಥಳೀಯರ ಮಾಹಿತಿ ಮೇರೆಗೆ ಸ್ಥಳಕ್ಕೆ ಆಗಮನಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಹರಸಾಹಸ ಪಟ್ಟಿದ್ದರು. ಕಟ್ಟಡದ ನೆಲಮಳಿಗೆಯಲ್ಲಿ ಈ ದುರ್ಘಟನೆ ಸಂಭವಿಸಿದೆ ಎನ್ನುವ ಮಾಹಿತಿ ಲಭ್ಯವಾಗಿತ್ತು.
ಮೂರು ಅಗ್ನಿ ಶಾಮಕ ವಾಹನಗಳಿಂದ ಬೆಂಕಿ ನಂದಿಸುವ ಕಾರ್ಯ ನಡೆದಿದ್ದು, ಈ ವೇಳೆ ಮೂವರು ಸಿಬ್ಬಂದಿ ಶೋ ರೂಮ್ನಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಘಟನೆಯಲ್ಲಿ ಸಿಬ್ಬಂದಿಯು ಹೊರ ಬಂದು ಜೀವ ರಕ್ಷಣೆ ಮಾಡಿಕೊಂಡಿದ್ದು, ಓರ್ವ ವ್ಯಕ್ತಿಗೆ ಸಣ್ಣಪುಟ್ಟ ಗಾಯಗೊಂಡಿದ್ದರು. ಆತನನ್ನು ಚಿಕಿತ್ಸೆಗೆಂದು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿತ್ತು.
ರಾಜ್ಕುಮಾರ್ ರಸ್ತೆಯಲ್ಲಿರುವ ಪ್ಲಾನೆಟ್ ಹೋಂಡಾ ಶೋರೂಂನಲ್ಲಿ ಬೆಂಕಿ ಅವಘಡ ಸಂಭವಿಸಿತ್ತು. ರಾಜಾಜಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿತ್ತು. ಚಾರ್ಜ್ ಹಾಕುವಾಗ ಶರ್ಟ್ ಸರ್ಕ್ಯೂಟ್ ಆಗಿ ಈ ಅವಘಡ ಸಂಭವಿಸಿದೆ ಎಂಬ ಶಂಕೆ ವ್ಯಕ್ತ ಆಗಿದ್ದು, ಕ್ವಾಲಿಟಿ ಇಲ್ಲದೆ ಇರುವ ಬ್ಯಾಟರಿಯಿಂದ ನಡೆದಿದೆ ಎನ್ನಲಾಗಿದೆ.
ಬಟ್ಟೆ ಕಾರ್ಖಾನೆಗೆ ಬೆಂಕಿ: ಕಳೆದ ಕೆಲವು ವಾರಗಳ ಹಿಂದೆಯಷ್ಟೇ ಬಟ್ಟೆ ಕಾರ್ಖಾನೆ ಬೆಂಕಿಗಾಹುತಿಯಾದ ಘಟನೆ ಆನೇಕಲ್ ಬಳಿ ನಡೆದಿತ್ತು.
ಇಡೀ ಕೈಗಾರಿಕಾ ಪ್ರದೇಶವು ಹೊಗೆಯಿಂದ ಕೂಡಿದ್ದು, ಅಕ್ಕಪಕ್ಕದಲ್ಲಿ ಬೆಂಕಿ ಆವರಿಸಿದೆ. ಪರಿಣಾಮ ಕೋಟಿಗಟ್ಟಲೆ ಹಾನಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದರು.
ಮಹದೇವಪುರ ಬಳಿಯ ಬೈಕ್ ಶೋರೂಂವೊಂದರಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಕನಿಷ್ಠ 50ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳು ಸುಟ್ಟ ಭಸ್ಮವಾಗಿವೆ ಎಂದು ಪೊಲೀಸರು ಮಾಹಿತಿ ನೀಡಿದ್ದರು. ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗಿದೆ. ಇನ್ನು ಈ ಘಟನೆಯಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಬೈಕ್ಗಳು ಸುಟ್ಟು ಭಸ್ಮವಾಗಿದ್ದವು.
ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸಿದ್ದಾರೆ. ಪಕ್ಕದಲ್ಲೇ ಇದ್ದ ಮತ್ತೊಂದು ಶೋರೂಂಗೂ ಬೆಂಕಿ ವ್ಯಾಪಿಸಿದೆ. ಕೂಡಲೇ ಎಚ್ಚೆತ್ತ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದರು. ಶೋರೂಂ ಮುಚ್ಚಿರುವಾಗ ಈ ಅವಘಡ ಸಂಭವಿಸಿದೆ. ಕಟ್ಟಡದಿಂದ ದಟ್ಟ ಹೊಗೆ ಹೊರಡುತ್ತಿರುವುದನ್ನು ನೋಡಿದ ಸ್ಥಳೀಯ ನಿವಾಸಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದರಯ. ಈ ಬಗ್ಗೆ ಮಹದೇವಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications