BMTC Bus: ಎಂಜಿ ರಸ್ತೆಯಲ್ಲಿ ಸುಟ್ಟು ಕರಕಲಾದ ಬಸ್
ಬೆಂಗಳೂರು, ಜುಲೈ 09: ಬೆಂಗಳೂರಿನಲ್ಲಿ ಎಂಜಿ ರಸ್ತೆಯಲ್ಲಿ ಮಂಗಳವಾರ ಅಗ್ನಿ ಅವಘಡ ಸಂಭವಿಸಿದೆ. ಎಂದಿನಂತೆ ಪ್ರಯಾಣಿಕರಿಗೆ ಸೇವೆ ನೀಡುತ್ತಿದ್ದ ಬಿಎಂಟಿಸಿ ಬಸ್ನಲ್ಲಿ ದಿಢೀರ್ ಬೆಂಕಿ ಹೊತ್ತಿಕೊಂಡ ಘಟನೆ ನಡೆದಿದೆ.
ಬೆಂಗಳೂರಿನ ಎಂಜಿ ರಸ್ತೆಯ ಅನೀಲ್ ಕುಂಬ್ಳೆ ವೃತ್ತದಲ್ಲಿ ಮಂಗಳವಾರ ಬೆಳಗ್ಗೆ ಬಿಎಂಟಿಸಿ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬಿಎಂಟಿಸಿ ಬಸ್ ಮಾರ್ಗ 144E ನಲ್ಲಿ ಎಂದಿನಂತೆ ಸಂಚಾರ ನಡೆಸಿತ್ತು. ಪ್ರಯಾಣಿಕರು ಬಸ್ನಲ್ಲಿ ತುಂಬಿದ್ದರು. ಈ ವೇಳೆ ಬಸ್ ಎಂಜಿನಲ್ಲಿ ಬೆಂಕಿ ಕಾನಿಸಿಕೊಂಡದನ್ನು ಚಾಲಕ ಗಮನಿಸಿದ್ದಾರೆ.

ನೋಡ ನೋಡುತ್ತಿದ್ದಂತೆ ಹೊಗೆ ಜೊತೆಗೆ ಬೆಂಕಿ ಬಸ್ ಅನ್ನು ಸಂಪೂರ್ಣವಾಗಿ ಆವರಿಸಲು ಶುರುವಾಗಿದೆ. ನಿಮಿಷಗಳಲ್ಲೇ ಇಡೀ ಬಸ್ಗೆ ಬೆಂಕಿ ಹೊತ್ತಿಕೊಂಡಿದೆ. ಎಂಜಿ ರಸ್ತೆಯಲ್ಲಿ ಏನಾಯಿತು ಎಂದು ನೋಡುವಷ್ಟರಲ್ಲಿ ಬೆಂಕಿಗೆ ಬಸ್ ಆಹುತಿ ಆಗಿದೆ.
ಇಂಜಿನ್ನಲ್ಲಿ ಹೊಗೆ, ಬೆಂಕಿ ಕಾಣಿಸುತ್ತಿದ್ದಂತೆ ತುಂಬಿಕೊಂಡಿದ್ದ ಪ್ರಯಾಣಿಕರನ್ನು ಸುರಕ್ಷಿತವಾಗಿ ಇಳಿಸಲಾಗಿದೆ. ಚಾಲಕ ಮತ್ತು ನಿರ್ವಾಹಕರ ಸಮಯ ಪ್ರಜ್ಞೆಯಿಂದಾಗಿ ಅದೃಷ್ಟವಶಾತ್ ಯಾರಿಗೆ ತೊಂದರೆ ಆಗಿಲ್ಲ ಎನ್ನಲಾಗಿದೆ. ಸದ್ಯ ಬಸ್ ಭಾಗಶಃ ಸುಟ್ಟು ಕರಕಲಾಗಿದೆ.
ದಿಢೀರ್ ಬೆಂಕಿ ಹೊತ್ತಿಕೊಳ್ಳಲು ಕಾರಣವೇನು?, ಬೇಸಿಗೆ ಆದರೆ ಬಿಸಿಲಿಗೆ ಈ ರೀತಿ ಆಗಬಹುದು ಎನ್ನಬಹುದಾಗಿತ್ತು. ಅದರೆ ಮಳೆಗಾದಲ್ಲಿ ಇಂಜಿನ್ನಲ್ಲಿ ಹೀಗೆ ಆಗಲು ಕಾರಣ, ಎಲ್ಲ ಕುರಿತು ಅಧಿಕಾರಿಗಳು ತನಿಖೆ ನಡೆಸಲಿದ್ದಾರೆ.
-
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ












Click it and Unblock the Notifications