Fire Outbreak At BBMP Office: ಬಿಬಿಎಂಪಿ ಕಚೇರಿಯಲ್ಲಿ ಬೆಂಕಿ ಅವಘಡ: 7 ಮಂದಿಗೆ ಗಾಯ
ಬಿಬಿಎಂಪಿ ಮುಖ್ಯ ಕಚೇರಿಯ ಆವರಣ ಕಟ್ಟದಲ್ಲಿ ಬೆಂಕಿ ದುರಂತ ಸಂಭವಿಸಿದ್ದು, ಘಟನೆಯಲ್ಲಿ ಏಳು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಬಿಬಿಎಂಪಿ ಕಚೇರಿ ಆವರಣದಲ್ಲಿರುವ ಗುಣನಿಯಂತ್ರಣ ವಿಭಾಗದ ಪ್ರಯೋಗಾಲಯ ಮತ್ತು ಕಚೇರಿ ಕಟ್ಟಡಕ್ಕೆ ಬೆಂಕಿ ಬಿದ್ದಿದೆ.
ಸದ್ಯ ಬೆಂಕಿ ಹತೋಟಿಗೆ ಬಂದಿದ್ದೆ, ಅಗ್ನಿ ಶಾಮಕ ದಳ ಸ್ಥಳಕ್ಕಾಗಮಿಸಿ ಬೆಂಕಿ ನಂದಿಸುವಲ್ಲಿ ಕೆಲಸ ಮಾಡುತ್ತಿದೆ. ಬೆಂಕಿ ಬಿದ್ದು ಅರ್ಧಗಂಟೆಯಾದರೂ ಅಗ್ನಿ ಶಾಮಕ ದಳ ಸ್ಥಳಕ್ಕೆ ಆಗಮಿಸಿರಲಿಲ್ಲ ಎಂದು ಘಟನೆಯಲ್ಲಿ ಹೇಳಲಾಗಿದೆ. ಗ್ಯಾಸ್ನಿಂದ ಬೆಂಕಿ ಅವಘಡ ಸಂಭವಿಸಿದೆ ಎಂದು ಪ್ರಾಥಮಿಕ ವರದಿಯಲ್ಲಿ ಹೇಳಲಾಗಿದೆ.

ಘಟನೆಯಲ್ಲಿ ಸಾವಿರಾರು ಕೋಟಿ ವ್ಯವಹಾರದ ದಾಖಲೆಗಳೆಲ್ಲ ಸುಟ್ಟು ಬೂದಿಯಾಗಿವೆ ಎಂದು ಹೇಳಲಾಗಿದೆ. ಬೆಂಕಿ ಇಡೀ ಕಟ್ಟಡಕ್ಕೆ ವ್ಯಾಪಿಸಿದ್ದರಿಂದ ದಟ್ಟ ಹೊಗೆ ಆವರಿಸಿತ್ತು, ಅಗ್ನಿ ಶಾಮಕ ಸಿಬ್ಬಂದಿ ಬೆಂಕಿಯನ್ನು ಹತೋಟಿಗೆ ತರಲು ಸಾಕಷ್ಟು ಶ್ರಮಿಸಬೇಕಾಯಿತು. ಸತತ ಅರ್ಧಗಂಟೆಯ ಕಾರ್ಯಾಚರಣೆ ಬಳಿಕೆ ಬೆಂಕಿ ತಹಬದಿಗೆ ಬಂದಿದೆ. ಪೊಲೀಸರು ಕೂಡ ಅಗ್ನಿಶಾಮಕ ಸಿಬ್ಬಂದಿ ಜೊತೆ ಬೆಂಕಿ ಆರಿಸಲು ಶ್ರಮಿಸಿದರು.
BBMP’s quality control cell catches fire. #Bengaluru pic.twitter.com/ORXx0KmOec
— Naveen Menezes (@naveenm01) August 11, 2023
ಬಿಬಿಎಂಪಿ ವಿಶೇಷ ಆಯುಕ್ತ (ಹಣಕಾಸು) ಜಯರಾಂ ರಾಯಪುರ ಮಾತನಾಡಿ, ಅಗ್ನಿ ಅವಘಡದಲ್ಲಿ ದಾಖಲೆಗಳ ಕೊಠಡಿಗೆ ಹಾನಿಯಾಗದ ಕಾರಣ ಯಾವುದೇ ಅಧಿಕೃತ ದಾಖಲೆಗಳು ನಾಶವಾಗಿಲ್ಲ ಎಂದು ಹೇಳಿದ್ದಾರೆ.
ಸಂತ್ರಸ್ತರನ್ನು ತಕ್ಷಣದ ವೈದ್ಯಕೀಯ ಮಧ್ಯಸ್ಥಿಕೆಗಾಗಿ ಸೇಂಟ್ ಮಾರ್ಥಾಸ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಮತ್ತು ವಿಕ್ಟೋರಿಯಾ ಆಸ್ಪತ್ರೆಯ ಸುಟ್ಟಗಾಯಗಳ ವಾರ್ಡ್ಗೆ ಸ್ಥಳಾಂತರಿಸಲಾಗುವುದು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹೇಳಿದ್ದಾರೆ.
ವಿಕ್ಟೋರಿಯಾ ಆಸ್ಪತ್ರೆಯ ವೈದ್ಯರು ಪರೀಕ್ಷಿಸಿದ ನಂತರವೇ ನಮಗೆ ಸುಟ್ಟ ಗಾಯಗಳ ಪ್ರಮಾಣ ತಿಳಿಯಲಿದೆ, ಎಂದು ಸುದ್ದಿಗಾರರಿಗೆ ತಿಳಿಸಿದರು. ಬೆಂಕಿ ಅನಾಹುತಕ್ಕೆ ಕಾರಣವೇನು ಎಂದು ಕೇಳಿದಾಗ, ವಿದ್ಯುತ್ ನಿರೀಕ್ಷಕರು ಪರಿಶೀಲನೆ ನಡೆಸಿದ ನಂತರ ತಿಳಿಯಲಿದೆ ಎಂದರು.
-
Karnataka Heatwave: ಕಲಬರಗಿಯಲ್ಲಿ 44 ಡಿಸೆ ತಾಪಮಾನ, 12 ಜಿಲ್ಲೆಗಳಿಗೆ ಮಹತ್ವದ ಎಚ್ಚರಿಕೆ: ಐಎಂಡಿ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
CBSE 10ನೇ ತರಗತಿ ಫಲಿತಾಂಶ 2026: ದಕ್ಷಿಣ ಭಾರತದ ವಿದ್ಯಾರ್ಥಿಗಳದ್ದೇ ಮೇಲುಗೈ, ಶೇ. 98.91ರಷ್ಟು ಸಾಧನೆ ಮಾಡಿದ ಬೆಂಗಳೂರು -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್











Click it and Unblock the Notifications