ಬೆಳ್ಳಂದೂರು ಕೆರೆಯಲ್ಲಿ ಮತ್ತೆ ಬೆಂಕಿ:ಆತಂಕದಲ್ಲಿ ದಿನ ಕಳೆದ ನಾಗರಿಕರು
ಬೆಂಗಳೂರು, ಫೆಬ್ರವರಿ 2 : ಬೆಳ್ಳಂದೂರು ಕೆರೆಯಲ್ಲಿ ಮತ್ತೆ ಬೆಂಕಿ ಕಾಣಿಸಿಕೊಂಡಿದ್ದು ನಾಗರಿಕರು ಆತಂಕಕ್ಕೀಡಾಗಿದ್ದಾರೆ. ಜನವರಿ 19ರಂದು ಬೆಂಕಿ ಕಾಣಿಸಿಕೊಂಡಿತ್ತು ಅದನ್ನು ನಂದಿಸಲು ಅಗ್ನಿಶಾಮಕ ಸಿಬ್ಬಂದಿ ನಾಗರಿಕರು ಹರಸಾಹಸ ಪಟ್ಟಿದ್ದರು. ಈಗ ಈ ಸ್ಥಳದಿಂದ ಸುಮಾರು 10-15 ಮೀಟರ್ ದೂರದಲ್ಲಿ ಮತ್ತೆ ಬೆಂಕಿ ಕಾಣಿಸಿಕೊಂಡಿದೆ.
ಬೆಂಕಿ ನಂದಿಸಲು 12 ಅಗ್ನಿಶಾಮಕ ವಾಹನಗಳು ಸಂಜೆ 5ರ ವೇಳೆಗೆ ಸ್ಥಳಕ್ಕೆ ಬಂದವು. ಆದರೆ, ಬೆಂಕಿ ಬಿದ್ದ ಸ್ಥಳಕ್ಕೆ ತ್ವರಿತಗತಿಯಲ್ಲಿ ಹೋಗಲು ಸಾಧ್ಯವಾಗಲಿಲ್ಲ. ಈ ಪ್ರದೇಶವು ರಕ್ಷಣಾ ಇಲಾಖೆಗೆ ಸೇರಿದ್ದರಿಂದ ಅನುಮತಿ ಪಡೆಯುವುದು ಅಗತ್ಯವಿತ್ತು. ಸಂಜೆ 6ಕ್ಕೆ ಬೆಂಕಿಯನ್ನು ನಂದಿಸಲಾಯಿತು.
ಕೆಲವು ದಿನಗಳಿಂದ ಗಾಳಿಯ ತೀವ್ರತೆ ಕಡಿಮೆಯಾಗಿದೆ. ಹೀಗಾಗಿ ಬೇಗನೇ ಬೆಂಕಿ ನಂದಿಸಲು ಸಾಧ್ಯವಾಯಿತು. ಯಂತ್ರಗಳ ಕೊರತೆಯಿಂದಾಗಿ ಕಳೆ ಮತ್ತು ಹುಲ್ಲನ್ನು ತೆರವುಗೊಳಿಸಲು ಸಾಧ್ಯವಾಗಿಲ್ಲ. ಕಳೆ ಕೀಳುವ ಯಂತ್ರದ ಮೂಲಕ ಕೆಲಸ ಮಾಡಿಸಲು ಉದ್ದೇಶಿಸಲಾಗಿದೆ. ಆದರೆ, ಯಂತ್ರದ ಮಾಲೀಕರು ಕಾಲಾವಕಾಶ ಕೋರಿದ್ದಾರೆ ಎಂದು ಬಿಡಿಎ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಎನ್ ಜಿಟಿಯಲ್ಲಿ ವಿಚಾರಣೆ: ವರ್ತೂರು ಕೆರೆಯ ಅತಿಕ್ರಮ ಹಾಗೂ ಮಾಲಿನ್ಯಕ್ಕೆ ಸಂಬಂಧಿಸಿದ ವಿಚಾರಣೆಯನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯು ಶುಕ್ರವಾರ ವಿಚಾರಣೆ ನಡೆಸಲಿದೆ. ಸ್ಥಳೀಯರು ಸ್ಥಾಪಿಸಿಕೊಂಡ ವರ್ತೂರು ಕೆರೆ ತಂಡ ಮತ್ತು ವೈಟ್ ಫೀಲ್ಡ್ ರೈಸಿಂಗ್ ಸಂಘಟನೆಯು ರಾಜ್ಯ ಸರ್ಕಾರ ಮತ್ತು ಸ್ಥಳೀಯ ಪ್ರಾಧಿಕಾರದ ವಿರುದ್ಧ 2017ರ ಡಿಸೆಂಬರ್ ನಲ್ಲಿ ದಾವೆ ಹೂಡಿದ್ದರು.
ಹುಲ್ಲುಕತ್ತರಿಸುವುದಕ್ಕೆ ನಿಷೇಧ: ಈ ಹಿಂದಿನ ಬೆಂಕಿ ಅವಘಡದ ಬಗ್ಗೆ ಸಮಗ್ರ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಒಣ ಹುಲ್ಲಿಗೆ ಆಕಸ್ಮಿಕವಾಗಿ ಬೆಂಕಿ ಹತ್ತಿದೆಯೇ ಅಥವಾ ಯಾರಾದರೂ ಬೆಂಕಿ ಹಚ್ಚುತ್ತಿದ್ದಾರೆಯೇ ಎಂಬ ಬಗ್ಗೆ ಪರಿಶೀಲಿಸಬೇಕಿದೆ.
ಇದು ಮತ್ತೊಮ್ಮೆ ಪುನರಾವರ್ತನೆಯಾದರೆ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳುತ್ತೇವೆ. ಕೆರೆ ಬಳಿಯ ಹುಲ್ಲು ಕತ್ತರಿಸುವುದನ್ನು ನಿಷೇಧಿಸುತ್ತೇವೆ ಎಂದು ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಮಹೇಂದ್ರ ಜೈನ್ ತಿಳಿಸಿದ್ದಾರೆ.
-
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ












Click it and Unblock the Notifications