ಪಟಾಕಿ ಹಚ್ಚಿ ಸರ್ಕಾರದ ವಿರುದ್ಧ ಪ್ರತಿಭಟಿಸಿದ ವಾಟಾಳ್!

ಬೆಂಗಳೂರು, ನವೆಂಬರ್ 09: ಕೋವಿಡ್ ಹಿನ್ನಲೆಯಲ್ಲಿ ಈ ಬಾರಿಯ ದೀಪಾವಳಿ ಹಬ್ಬದಲ್ಲಿ ಪಟಾಕಿ ಸಿಡಿಸದಂತೆ ಕರ್ನಾಟಕ ಸರ್ಕಾರ ಸೂಚನೆ ನೀಡಿದೆ. ಹಸಿರು ಪಟಾಕಿಗಳನ್ನು ಮಾತ್ರ ಹಚ್ಚಬೇಕು ಎಂದು ಸುತ್ತೋಲೆ ಹೊರಡಿಸಿದೆ.

ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಕರ್ನಾಟಕ ಸರ್ಕಾರದ ನಿರ್ಧಾರವನ್ನು ಖಂಡಿಸಿದ್ದಾರೆ. ಸರ್ಕಾರದ ವಿರುದ್ಧ ಮೈಸೂರು ಬ್ಯಾಂಕ್ ವೃತ್ತದಲ್ಲಿ ಪಟಾಕಿ ಸಿಡಿಸಿ ಅವರು ಪ್ರತಿಭಟನೆ ನಡೆಸಿದ್ದಾರೆ.

Firecracker Ban Vatal Nagaraj Protest Against Govt

"ಮೂರು ದಿನ ಪಟಾಕಿ ಹೊಡೆದರೆ ಏನೂ ಆಗುವುದಿಲ್ಲ. ಪಟಾಕಿ ಹೊಗೆಯಿಂದಲೇ ಕೊರೊನಾ ಬರುತ್ತದೆ ಎಂದು ಹೇಳಿದ್ದು ಯಾರು?. ವೈಜ್ಞಾನಿಕವಾಗಿ ಯಾವ ದೇಶ ಈ ಬಗ್ಗೆ ಸಂಶೋಧನೆ ನಡೆಸಿದೆ?" ಎಂದು ವಾಟಾಳ್ ನಾಗರಾಜ್ ಪ್ರಶ್ನಿಸಿದರು.

Firecracker Ban Vatal Nagaraj Protest Against Govt

"ಪಟಾಕಿಯಿಂದ ಕೊರೊನಾ ಬರುತ್ತದೆ ಎಂದು ಹೇಳಿದ ಮುಖ್ಯಮಂತ್ರಿ ದೇಶದಲ್ಲಿ ಯಡಿಯೂರಪ್ಪ ಅವರೊಬ್ಬರೇ. ದೀಪಾವಳಿಗೆ ಪಟಾಕಿ ಹೊಡೆಯಬೇಕು. ಪಟಾಕಿ ಹೊಡೆಯಲು ಸಂಪೂರ್ಣ ಬೆಂಬಲವಿದೆ" ಎಂದು ವಾಟಾಳ್ ನಾಗರಾಜ್ ಹೇಳಿದರು.

ಕರ್ನಾಟಕ ಸರ್ಕಾರ ಸುಪ್ರೀಂಕೋರ್ಟ್ ನಿರ್ದೇಶದಂತೆ ದೀಪಾವಳಿ ಸಂದರ್ಭದಲ್ಲಿ ಹಸಿರು ಪಟಾಕಿಗಳನ್ನು ಮಾತ್ರ ಹಚ್ಚಬೇಕು ಎಂದು ಮಾರ್ಗಸೂಚಿ ಹೊರಡಿಸಿದೆ. ಸಂಬಂಧಪಟ್ಟ ಇಲಾಖೆಯಿಂದ ಪರವಾನಗಿ ಪಡೆದ ಮಾರಾಟಗಾರರು ಮಾತ್ರ ಹಸಿರು ಪಟಾಕಿ ಮಾರಾಟ ಮಾಡಬಹುದು ಎಂದು ಹೇಳಿದೆ.

ಮುಖ್ಯಮಂತ್ರಿ ಯಡಿಯೂರಪ್ಪ ಟ್ವೀಟ್

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+