ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಪಟಾಕಿ ಹಚ್ಚಿ ಸರ್ಕಾರದ ವಿರುದ್ಧ ಪ್ರತಿಭಟಿಸಿದ ವಾಟಾಳ್!

|
Google Oneindia Kannada News

ಬೆಂಗಳೂರು, ನವೆಂಬರ್ 09: ಕೋವಿಡ್ ಹಿನ್ನಲೆಯಲ್ಲಿ ಈ ಬಾರಿಯ ದೀಪಾವಳಿ ಹಬ್ಬದಲ್ಲಿ ಪಟಾಕಿ ಸಿಡಿಸದಂತೆ ಕರ್ನಾಟಕ ಸರ್ಕಾರ ಸೂಚನೆ ನೀಡಿದೆ. ಹಸಿರು ಪಟಾಕಿಗಳನ್ನು ಮಾತ್ರ ಹಚ್ಚಬೇಕು ಎಂದು ಸುತ್ತೋಲೆ ಹೊರಡಿಸಿದೆ.

ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಕರ್ನಾಟಕ ಸರ್ಕಾರದ ನಿರ್ಧಾರವನ್ನು ಖಂಡಿಸಿದ್ದಾರೆ. ಸರ್ಕಾರದ ವಿರುದ್ಧ ಮೈಸೂರು ಬ್ಯಾಂಕ್ ವೃತ್ತದಲ್ಲಿ ಪಟಾಕಿ ಸಿಡಿಸಿ ಅವರು ಪ್ರತಿಭಟನೆ ನಡೆಸಿದ್ದಾರೆ.

ದೀಪಾವಳಿ ಪಟಾಕಿ ಮಳಿಗೆ ತೆರೆಯಲು ಮಾರ್ಗಸೂಚಿ ಬಿಡುಗಡೆದೀಪಾವಳಿ ಪಟಾಕಿ ಮಳಿಗೆ ತೆರೆಯಲು ಮಾರ್ಗಸೂಚಿ ಬಿಡುಗಡೆ

Firecracker Ban Vatal Nagaraj Protest Against Govt

"ಮೂರು ದಿನ ಪಟಾಕಿ ಹೊಡೆದರೆ ಏನೂ ಆಗುವುದಿಲ್ಲ. ಪಟಾಕಿ ಹೊಗೆಯಿಂದಲೇ ಕೊರೊನಾ ಬರುತ್ತದೆ ಎಂದು ಹೇಳಿದ್ದು ಯಾರು?. ವೈಜ್ಞಾನಿಕವಾಗಿ ಯಾವ ದೇಶ ಈ ಬಗ್ಗೆ ಸಂಶೋಧನೆ ನಡೆಸಿದೆ?" ಎಂದು ವಾಟಾಳ್ ನಾಗರಾಜ್ ಪ್ರಶ್ನಿಸಿದರು.

ರಾಜಸ್ಥಾನದಲ್ಲಿ ಪಟಾಕಿ ಮಾರಾಟ ನಿಷೇಧಿಸಿದ ಸರ್ಕಾರ ರಾಜಸ್ಥಾನದಲ್ಲಿ ಪಟಾಕಿ ಮಾರಾಟ ನಿಷೇಧಿಸಿದ ಸರ್ಕಾರ

Firecracker Ban Vatal Nagaraj Protest Against Govt

"ಪಟಾಕಿಯಿಂದ ಕೊರೊನಾ ಬರುತ್ತದೆ ಎಂದು ಹೇಳಿದ ಮುಖ್ಯಮಂತ್ರಿ ದೇಶದಲ್ಲಿ ಯಡಿಯೂರಪ್ಪ ಅವರೊಬ್ಬರೇ. ದೀಪಾವಳಿಗೆ ಪಟಾಕಿ ಹೊಡೆಯಬೇಕು. ಪಟಾಕಿ ಹೊಡೆಯಲು ಸಂಪೂರ್ಣ ಬೆಂಬಲವಿದೆ" ಎಂದು ವಾಟಾಳ್ ನಾಗರಾಜ್ ಹೇಳಿದರು.

ಭಾರತದಲ್ಲಿ ಪಟಾಕಿ ಹಚ್ಚಿದ್ರೆ, ಚೀನಾದಲ್ಲಿ ಈ ಸಲ ಬೆಂಕಿ ಬೀಳುತ್ತೆ! ಭಾರತದಲ್ಲಿ ಪಟಾಕಿ ಹಚ್ಚಿದ್ರೆ, ಚೀನಾದಲ್ಲಿ ಈ ಸಲ ಬೆಂಕಿ ಬೀಳುತ್ತೆ!

ಕರ್ನಾಟಕ ಸರ್ಕಾರ ಸುಪ್ರೀಂಕೋರ್ಟ್ ನಿರ್ದೇಶದಂತೆ ದೀಪಾವಳಿ ಸಂದರ್ಭದಲ್ಲಿ ಹಸಿರು ಪಟಾಕಿಗಳನ್ನು ಮಾತ್ರ ಹಚ್ಚಬೇಕು ಎಂದು ಮಾರ್ಗಸೂಚಿ ಹೊರಡಿಸಿದೆ. ಸಂಬಂಧಪಟ್ಟ ಇಲಾಖೆಯಿಂದ ಪರವಾನಗಿ ಪಡೆದ ಮಾರಾಟಗಾರರು ಮಾತ್ರ ಹಸಿರು ಪಟಾಕಿ ಮಾರಾಟ ಮಾಡಬಹುದು ಎಂದು ಹೇಳಿದೆ.

Recommended Video

BJP ಸಿಬಿಐ ನಾ miss use ಮಾಡ್ತಿದಾರೆ!! | Oneindia Kannada

ಮುಖ್ಯಮಂತ್ರಿ ಯಡಿಯೂರಪ್ಪ ಟ್ವೀಟ್

English summary
Kannada Chaluvali Vatal Paksha leader Vatal Nagaraj protest aganist Karnataka government decision of ban of firecracker on Deepavali. Government only allowed green crackers for festival.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X