ರಾಜ್ಯದಲ್ಲಿ ಮದ್ಯದಂಗಡಿ ಓಪನ್ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಾಚರಣೆ
ಬೆಂಗಳೂರು, ಮೇ 4: ದೇಶಾದ್ಯಂತ ಮದ್ಯದಂಗಡಿ ತೆರೆಯಲಾಗಿದೆ. ಸುಮಾರು 40 ದಿನದ ಲಾಕ್ಡೌನ್ ಬಳಿಕ ಮದ್ಯದ ಮಾರಾಟ ಮಾಡಲಾಗುತ್ತಿದ್ದು, ದೇಶದ ಹಲವು ಕಡೆ ಮದ್ಯ ಪ್ರಿಯರು ಸಂಭ್ರಮಿಸಿದ್ದಾರೆ.
ಮದ್ಯ ಮಾರಾಟಕ್ಕೆ ಅವಕಾಶ ನೀಡುತ್ತಿದ್ದಂತೆ ನಿರೀಕ್ಷೆಗೂ ಮೀರಿದ ಜನರು ಮದ್ಯ ಖರೀದಿ ಮಾಡಲು ಮುಗಿಬಿದ್ದಿದ್ದಾರೆ. ಬೆಳಿಗ್ಗೆಯಿಂದಲೇ ಕ್ಯೂನಲ್ಲಿ ನಿಂತು ಎಣ್ಣೆ ಖರೀದಿ ಮಾಡಿದ್ದಾರೆ. ಬಹುತೇಕ ಎಲ್ಲ ಮದ್ಯದಂಗಡಿಗಳ ಮುಂದೆ ನೂರಾರು ಜನರು ಸಾಲುಗಟ್ಟಿ ನಿಂತಿದ್ದರು.
ಮದ್ಯದಂಗಡಿ ಓಪನ್ ಆಗಿದ್ದಕ್ಕೆ ಕರ್ನಾಟಕದ ಹಲವು ಕಡೆ ಪಟಾಕಿ ಸಿಡಿಸಿ ಸಂಭ್ರಮಿಸಿದ್ದಾರೆ. ಕೋಲಾರದ ಹಳ್ಳಿಯೊಂದರಲ್ಲಿ ವ್ಯಕ್ತಿಯೊಬ್ಬ ಪಟಾಕಿ ಕೈಯಲ್ಲಿ ಹಿಡಿದು ಸಾಲಿನಲ್ಲಿ ನಿಂತಿದ್ದರು, ಮದ್ಯದಂಗಡಿ ತೆರೆಯುತ್ತಿದ್ದಂತೆ ಪಟಾಕಿ ಸಿಡಿಸಿ ಜೈಕಾರ ಹಾಕಿದ್ದಾನೆ.

ಕೋಲಾರದಲ್ಲಿ ಮಾತ್ರವಲ್ಲ, ಇನ್ನು ಹಲವು ಕಡೆ ಮದ್ಯಪ್ರಿಯರು ಅಂಗಡಿ ಮುಂದೆ ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡಿದ್ದಾರೆ.
Wine Shop reopening - Crackers fest
— .... (@ynakg2) May 4, 2020
Celebration of life. Some place in #Karnataka. #IndiaFightsCorona pic.twitter.com/FtXh2OTG8g
ಲಾಕ್ಡೌನ್ ಘೋಷಣೆಯಾದ ಸಂದರ್ಭದಿಂದಲೂ ಮದ್ಯದಂಗಡಿ ಓಪನ್ ಮಾಡಲು ಮದ್ಯಪ್ರಿಯರು ಬೇಡಿಕೆಯಿಟ್ಟಿದ್ದರು. ಇನ್ನು ದೇಶದ ಆರ್ಥಿಕತೆ ಕುಸಿತ ಕಂಡಿದ್ದರಿಂದ ಮದ್ಯ ಮಾರಾಟ ಮಾಡುವುದು ಅನಿವಾರ್ಯ ಎಂದು ರಾಜ್ಯ ಸರ್ಕಾರ ಹಾಗೂ ವಿರೋಧ ಪಕ್ಷಗಳು ಅಭಿಪ್ರಾಯ ವ್ಯಕ್ತಪಡಿಸಿದ್ದವು.
ಅಂತಿಮವಾಗಿ, ರಾಜ್ಯ ಸರ್ಕಾರಗಳ ಬೇಡಿಕೆ ಮಣಿದ ಕೇಂದ್ರ ಸರ್ಕಾರ, ಕೆಲವೊಂದು ಷರತ್ತು ವಿಧಿಸಿ, ಮಾರ್ಗಸೂಚಿಗಳನ್ನು ಹೊರಡಿಸಿ ಮದ್ಯ ಮಾರಾಟಕ್ಕೆ ಅನುಮತಿ ನೀಡಿದೆ.
-
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
Nora Fatehi: ಕನ್ನಡ ಹಾಡಿನಿಂದ ವಿವಾದಕ್ಕೆ ಸಿಲುಕಿರುವ ಬಾಲಿವುಡ್ನ ಡ್ಯಾನ್ಸ್ ಕ್ವೀನ್ ನೋರಾ ಫತೇಹಿ ಅಸಲಿ ಕಥೆ ಇದು -
March 18 Horoscope: ಧನ, ಆರೋಗ್ಯ, ಉದ್ಯೋಗದ ಭವಿಷ್ಯ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Bengaluru Rent: ಬೆಂಗಳೂರಲ್ಲಿ ನಾನ್ವೆಜ್ ಪ್ರಿಯರಿಗೆ ಶಾಕ್: ಮಾಂಸಾಹಾರಿಗಳಿಗೆ ಸಿಗ್ತಿಲ್ಲ ನಗರದಲ್ಲಿ ಬಾಡಿಗೆ ಮನೆ -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್ -
Karnataka Rain Alert: ರಾಜ್ಯದ ಹಲವೆಡೆ ಆಲಿಕಲ್ಲು ಮಳೆ, ಮಿನಿ ಕಾಶ್ಮೀರದಂತಾದ ರಸ್ತೆಗಳು; ಇನ್ನೆಷ್ಟು ದಿನ ವರುಣನ ಆರ್ಭಣ?












Click it and Unblock the Notifications