ಬೆಂಗಳೂರಲ್ಲಿ ಪಟಾಕಿ ಸಿಡಿಸುವಾಗ ಗ್ಯಾಸ್ ಪೈಪ್ಲೈನ್ಗೆ ಡ್ಯಾಮೇಜ್, ಬೆಂಕಿ!
ಬೆಂಗಳೂರಲ್ಲಿ ದೀಪಾವಳಿ ಮುಗಿದರೂ, ದೀಪಾವಳಿ ಸಂಭ್ರಮ ಮುಂದುವರಿದಿದೆ. ಅಲ್ಲದೇ ಪಟಾಕಿ ಹೊಡೆಯುವುದು ಹಾಗೂ ಅದರಿಂದ ದುರಂತಗಳು ಸಂಭವಿಸುವುದು ಸಹ ಮುಂದುವರಿದಿದೆ. ಇದೀಗ ಬೆಂಗಳೂರಲ್ಲಿ ಪಟಾಕಿಯಿಂದ ಬಹುದೊಡ್ಡ ದುರಂತವೊಂದು ಕುದಲೆಳೆಯ ಅಂತರದಲ್ಲಿ ಮಿಸ್ ಆಗಿದೆ. ಬೆಂಗಳೂರಲ್ಲಿ ಪಟಾಕಿ ಹೊಡೆಯುವಾಗ ಗ್ಯಾಸ್ ಪೈಪ್ಲೈನ್ಗೆ ಹಾನಿಯಾಗಿದೆ. ಮುಂದೇನಾಯ್ತು ಎನ್ನುವ ವಿವರ ಇಲ್ಲಿದೆ.
ಬೆಂಗಳೂರಲ್ಲಿ ಈ ಬಾರಿ ದೀಪಾವಳಿ ಹಲವು ದುರಂತಗಳನ್ನೇ ಸೃಷ್ಟಿ ಮಾಡಿದೆ. ಬಿಬಿಎಂಪಿ (ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ) ಹಾಗೂ ಸರ್ಕಾರ ನೀಡಿದ ಯಾವುದೇ ಮಾರ್ಗಸೂಚಿಗಳು ಸಹ ಪಾಲನೆಯಾಗಿಲ್ಲ. ಇದರ ನಡುವೆ ಗೇಲ್ ಗ್ಯಾಸ್ ಪೈಪ್ಲೈನ್ಗೆ ಹಾನಿಯಾಗಿರುವುದು ವರದಿಯಾಗಿದೆ.

ಹೌದು, ವೈಟ್ಫೀಲ್ಡ್ನ ಅಥಾಶ್ರೀ ರಸ್ತೆಯಲ್ಲಿ ಈ ದುರಂತ ಸಂಭವಿಸಿದೆ. ಈ ಭಾಗದಲ್ಲಿ ಪಟಾಕಿ ಹೊಡೆಯುವಾಗ ಗೇಲ್ ಗ್ಯಾಸ್ ಪೈಪ್ಲೈನ್ಗೆ ಹಾನಿಯಾಗಿದ್ದು, ಬೆಂಕಿ ಕಾಣಿಸಿಕೊಂಡಿದೆ. ಸ್ಥಳೀಯರು ಹಾಗೂ ಇಲ್ಲಿನ ಭದ್ರತಾ ಸಿಬ್ಬಂದಿ ಕೂಡಲೇ ಎಚ್ಚೆತ್ತುಕೊಂಡು ಸಂಭವಿಸಬಹುದಾಗಿದ್ದ ದೊಡ್ಡ ದುರಂತವನ್ನು ತಪ್ಪಿಸಿದ್ದಾರೆ. ಇದೀಗ ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.
ಬೆಂಗಳೂರಿನ ವಿವಿಧ ಭಾಗದಲ್ಲಿ ಗೇಲ್ ಗ್ಯಾಸ್ ಪೈಪ್ಲೈನ್ಗಳನ್ನು ಅಳವಡಿಸಲಾಗಿದೆ. ಈ ಪೈಪ್ಗಳನ್ನು ಅಳವಡಿಸುವಾಗಲೇ ಸಾಕಷ್ಟು ಮುಂಜಾಗ್ರತೆ ತೆಗೆದುಕೊಳ್ಳಲಾಗುತ್ತದೆ. ಅಲ್ಲದೇ ಗ್ಯಾಸ್ ಪೈಪ್ಲೈನ್ ಹಾದು ಹೋಗುವ ಜಾಗದಲ್ಲಿ ಎಚ್ಚೆರಿಕೆಯ ನಾಮಫಲಕಗಳನ್ನು ಅಳವಡಿಸಲಾಗಿದೆ. ಇದರ ಹೊರತಾಗಿಯೂ ಜನ ನಿರ್ಲಕ್ಷ್ಯ ಮಾಡುವುದು ಮುಂದುವರಿಸಿದ್ದಾರೆ.
ದೀಪಾವಳಿ ವೇಳೆ ಪಟಾಕಿ ಸಿಡಿಸುವಾಗ ಈ ದುರಂತ ನಡೆದಿದೆ. ಗ್ಯಾಸ್ ಪೈಪ್ಲೈನ್ ಹಾದು ಹೋಗುವ ಮಾರ್ಗದಲ್ಲಿ ಇಲ್ಲಿ ಪಟಾಕಿ ಸಿಡಿಸಬಾರದು ಎಂದು ಸ್ಪಷ್ಟವಾಗಿ ಬರೆದಿದ್ದರೂ, ಜನ ಕ್ಯಾರೇ ಎನ್ನುತ್ತಿಲ್ಲ.
ಕಾಗದದಲ್ಲೇ ಉಳಿದ ಪಟಾಕಿ ನಿಯಮ: ಇನ್ನು ಈ ದೀಪಾವಳಿ ಸಮಯದಲ್ಲಿ ರಾಜ್ಯ ಸರ್ಕಾರ ಹಾಗೂ ಬಿಬಿಎಂಪಿಯು ಹಲವು ಮಾರ್ಗಸೂಚಿಗಳನ್ನು ಪ್ರಕಟಿಸಿತ್ತು. ಆದರೆ, ಇದೆಲ್ಲ ಕೇವಲ ಕಾಗದಕ್ಕೆ ಸೀಮಿತವಾಗಿದೆ. ಅಂದರೆ, ಈ ಮಾರ್ಗಸೂಚಿಗಳನ್ನು ಅನುಷ್ಠಾನ ಮಾಡುವುದರಲ್ಲಿ ಪಾಲಿಕೆ ಹಾಗೂ ಸರ್ಕಾರ ವಿಫಲವಾಗಿದೆ ಅಂತಲೇ ಹೇಳಲಾಗ್ತಿದೆ.
ಹಸಿರು ಪಟಾಕಿಗಳನ್ನು ಮಾತ್ರ ಸಿಡಿಸಬೇಕು. ರಾತ್ರಿ 8ರಿಂದ 10ರ ವರೆಗೆ ಮಾತ್ರ ಪಟಾಕಿ ಸಿಡಿಸಬೇಕು ಎನ್ನುವುದು ಸೇರಿದಂತೆ ಹಲವು ಷರತ್ತುಗಳನ್ನು ವಿಧಿಸಲಾಗಿತ್ತು. ಆದರೆ, ಆ ನಿಯಮಗಳನ್ನೆಲ್ಲ ಗಾಳಿಗೆ ತೂರಲಾಗಿದೆ. ಪಟಾಕಿ ಹೊಡೆಯುವಾಗ ಹಲವರಿಗೆ ಗಾಯಗಳಾಗಿವೆ.
25ಕ್ಕೂ ಹೆಚ್ಚು ಜನರ ಕಣ್ಣಿಗೆ ಹಾನಿ: ದೀಪವಾಳಿ ಸಮಯದಲ್ಲಿ ಪಟಾಕಿ ದುರಂತವನ್ನು ತಪ್ಪಿಸುವ ನಿಟ್ಟಿನಲ್ಲಿ ಬಿಬಿಎಂಪಿ, ಆರೋಗ್ಯ ಇಲಾಖೆ ಹಾಗೂ ಸ್ವಯಂ ಸೇವಾ ಸಂಸ್ಥೆಗಳು ಜಾಗೃತಿ ಮೂಡಿಸಿದ ಹೊರತಾಗಿಯೂ ಈ ಬಾರಿಯೂ ಪಟಾಕಿ ದುರಂತಗಳು ಮುಂದುವರಿದಿವೆ. ಈ ಬಾರಿ ಪಟಾಕಿ ದುರಂತದಿಂದಲೇ 25ಕ್ಕೂ ಹೆಚ್ಚು ಜನರ ಕಣ್ಣಿಗೆ ಹಾನಿಯಾಗಿದೆ ಎಂದು ವರದಿಯಾಗಿದೆ.
ಅಲ್ಲದೇ ನಿರಂತರವಾಗಿ ಪಟಾಕಿ ಸಿಡಿಸುತ್ತಿರುವುದರಿಂದಾಗಿ ಬೆಂಗಳೂರಲ್ಲಿ ವಾಯುಮಾಲಿನ್ಯ ಪ್ರಮಾಣ ಗಣನೀಯವಾಗಿ ಹೆಚ್ಚಳವಾಗಿದೆ. ಬೆಂಗಳೂರಲ್ಲಿ ಪಟಾಕಿಯಿಂದ ರಸ್ತೆಗಳಲ್ಲಿ ಕಸದ ರಾಶಿ ತುಂಬಿಕೊಂಡಿದ್ದು, ಈ ಕಸ ವಿಲೇವಾರಿಗೆ ಪೌರಕಾರ್ಮಿಕರು ಪರದಾಡುತ್ತಿದ್ದಾರೆ.
-
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Piped Gas: ಬೆಂಗಳೂರಿಗರಿಗೆ ತಲುಪದ ಪೈಪ್ಡ್ ಗ್ಯಾಸ್: ಮಹತ್ವಾಕಾಂಕ್ಷಿ ಯೋಜನೆಗೆ ವಿಘ್ನಗಳ ಸರಮಾಲೆ -
Gold Rate Today: ಬಂಗಾರ ಪ್ರಿಯರಿಗೆ ಸಿಹಿಸುದ್ದಿ: ಇಂದೂ ಇಳಿಕೆ ಕಂಡ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರಗಳು ಹೀಗಿವೆ -
ಎಲೆಕ್ಷನ್ ಇವತ್ತೇ ನಡೆದರೆ ತಮಿಳುನಾಡು, ಕೇರಳಂ, ಪಶ್ಚಿಮ ಬಂಗಾಳದಲ್ಲಿ ಯಾರಿಗೆ ಗೆಲುವು? ಸಮೀಕ್ಷೆ ನೀಡಿದ ಮಾಹಿತಿ ಇಲ್ಲಿದೆ -
ಟೀಂ ಇಂಡಿಯಾ ಕ್ರಿಕೆಟರ್ ಕುಲದೀಪ್ ಯಾದವ್ ಕೈಹಿಡಿದ ವಂಶಿಕಾ ಚಡ್ಡಾ ಯಾರು? -
Bengaluru: 1 ತಿಂಗಳು ಬದುಕೋಕೆ ಇಷ್ಟೊಂದು ಖರ್ಚಾಗುತ್ತಾ? ಯುವತಿಯ ಪೋಸ್ಟ್ ಕಂಡು ಬೆಚ್ಚಿಬಿದ್ದ ನೆಟ್ಟಿಗರು -
Amala Paul: ಡೇಟಿಂಗ್ನಲ್ಲೇ ಗರ್ಭಿಣಿಯಾದೆ, ಆತುರದಲ್ಲಿ ಎರಡನೇ ಮದುವೆ ಆಯ್ತು: ಹೆಬ್ಬುಲಿ ನಟಿ ಅಮಲಾ ಪೌಲ್ -
Oscars 2026: ಮೈಕಲ್ ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ: ಪ್ರಶಸ್ತಿ ವಿಜೇತರ ಪಟ್ಟಿ ಇಲ್ಲಿದೆ -
SSLC ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಹಾಲ್ ಟಿಕೆಟ್ ತೋರಿಸಿದ್ರೆ KSRTC ಬಸ್ಸುಗಳಲ್ಲಿ ಉಚಿತ ಪ್ರಯಾಣ












Click it and Unblock the Notifications