Breaking: ಬೆಂಗಳೂರಿನಲ್ಲೂ ವ್ಯಕ್ತಿಗೆ ಕಾಣಿಸಿಕೊಂಡ ಮಂಕಿಪಾಕ್ಸ್ ಲಕ್ಷಣ
ಬೆಂಗಳೂರು, ಜುಲೈ 30: ಬೆಂಗಳೂರಿಗೆ ಆಗಮಿಸಿದ್ದ ಆಫ್ರಿಕನ್ ಪ್ರಜೆಯಲ್ಲಿ ಮಂಕಿಪಾಕ್ಸ್ ಸೋಂಕಿನ ಲಕ್ಷಣಗಳು ಕಂಡು ಬಂದಿದ್ದು, ಅವರ ರಕ್ತದ ಮಾದರಿಯನ್ನು ಕರ್ನಾಟಕ ಆರೋಗ್ಯ ಅಧಿಕಾರಿಗಳು ಪುಣೆಯ ರಾಷ್ಟ್ರೀಯ ವೈರಾಲಜಿ ಸಂಸ್ಥೆಗೆ (ಎನ್ಐವಿ) ಕಳುಹಿಸಿದ್ದಾರೆ.
ಶಂಕಿತ ಮಂಕಿಪಾಕ್ಸ್ ರೋಗಿಯು ಆಫ್ರಿಕನ್ ಪ್ರಜೆ ಎಂದು ಹೇಳಲಾಗಿದ್ದು, ಕಳೆದ ಜುಲೈ 4ರಂದು ಮೂತ್ರಪಿಂಡ ಕಸಿ ಮಾಡುವುದಕ್ಕಾಗಿ ಬಂದಿದ್ದರು ಎಂದು ತಿಳಿದು ಬಂದಿದೆ. ಈ ಬೆಳವಣಿಗೆಯು ಬೆಂಗಳೂರಿಗರಲ್ಲಿ ಆತಂಕವನ್ನು ಸೃಷ್ಟಿಸಿದೆ.

"ಆಫ್ರಿಕನ್ ಪ್ರಜೆ ಇಥಿಯೋಪಿಯಾದಿಂದ ಖಾಸಗಿ ಆಸ್ಪತ್ರೆಯಲ್ಲಿ ಮೂತ್ರಪಿಂಡ ಚಿಕಿತ್ಸೆಗಾಗಿ ಬೆಂಗಳೂರಿಗೆ ಬಂದಿದ್ದರು. ಆಗ ಅವರಲ್ಲಿ ಮಂಕಿಪಾಕ್ಸ್ ರೋಗದ ಲಕ್ಷಣಗಳು ಕಾಣಿಸಿರಲಿಲ್ಲ. ಆದರೆ ಈಗ ಅವರ ಮಾದರಿಗಳನ್ನು ಕಳುಹಿಸಲಾಗಿದ್ದು, ವರದಿ ಬಂದ ನಂತರವೇ ದೃಢೀಕರಿಸಬಹುದು," ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಆರೋಗ್ಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಹಳದಿ ಜ್ವರದ ಪ್ರಮಾಣಪತ್ರ ಕಡ್ಡಾಯ:
ದಕ್ಷಿಣ ಅಮೆರಿಕಾ ಮತ್ತು ಆಫ್ರಿಕನ್ ರಾಷ್ಟ್ರಗಳಿಂದ ಆಗಮಿಸುವ ಎಲ್ಲರೂ ಹಳದಿ ಜ್ವರ ಲಸಿಕೆ ಪ್ರಮಾಣಪತ್ರಗಳನ್ನು ಹೊಂದಿರುವುದನ್ನು ಕೇಂದ್ರ ಸರ್ಕಾರ ಈಗಾಗಲೇ ಕಡ್ಡಾಯಗೊಳಿಸಿದೆ. ಅದರಂತೆ ಇತ್ತೀಚಿಗೆ ಬ್ರೆಜಿಲ್ನಿಂದ ಬೆಂಗಳೂರಿಗೆ ಆಗಮಿಸಿದ ಪ್ರಯಾಣಿಕನೊಬ್ಬ ಹಳದಿ ಜ್ವರ ಪ್ರಮಾಣಪತ್ರವನ್ನು ಹೊಂದಿರಲಿಲ್ಲ, ಆದ್ದರಿಂದ ಆತನನ್ನು ಜಯನಗರದ ಜನರಲ್ ಆಸ್ಪತ್ರೆಯಲ್ಲಿ ಪ್ರತ್ಯೇಕವಾಗಿ ಇರಿಸಲಾಗಿದೆ.
ಬಿಬಿಎಂಪಿ ವಿಶೇಷ ಆಯುಕ್ತ ಡಾ.ಕೆ.ವಿ.ತ್ರಿಲೋಕ್ ಚಂದ್ರ ಮಾತನಾಡಿ, "ಈ ಸಂಬಂಧ ಪ್ರಯಾಣಿಕರಿಗೆ ರೋಗಲಕ್ಷಣಗಳು ಕಾಣಿಸಿಕೊಂಡಿದ್ದರಿಂದ ಮಾದರಿಗಳನ್ನು ಕಳೆದ ವಾರ ಪುಣೆಯ ಎನ್ಐವಿಗೆ ಕಳುಹಿಸಲಾಗಿದ್ದು, ಅವರನ್ನು ಖಾಸಗಿ ಆಸ್ಪತ್ರೆಯಲ್ಲಿ ಇರಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಮಂಕಿಪಾಕ್ಸ್ ರೋಗಿಗಳಲ್ಲಿ ಮೈ-ಕೈ ನೋವು ಮತ್ತು ದದ್ದು:
ಮಂಕಿಪಾಕ್ಸ್ ಹೊಂದಿರುವ ಸೋಂಕಿತರಲ್ಲಿ ಸಾಮಾನ್ಯವಾಗಿ ಜ್ವರ, ಮೈ-ಕೈ ನೋವು ಮತ್ತು ದದ್ದುಗಳಂತಹ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ. ಈ ಸೋಂಕಿತರಲ್ಲಿ ಬಹುಪಾಲು ಮಂದಿಯು ಒಂದು ವಾರದಲ್ಲೇ ಚೇತರಿಸಿಕೊಂಡಿದ್ದಾರೆ. 1958ರಲ್ಲಿ ಮೊದಲ ಬಾರಿಗೆ ಮಂಗಗಳಲ್ಲಿ ಈ ಸೋಂಕು ಪತ್ತೆಯಾಗಿದ್ದು, ಹೀಗಾಗಿ ಇದನ್ನು ಮಂಕಿಪಾಕ್ಸ್ ಎಂದು ಕರೆಯಲಾಗುತ್ತದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
AI ಮೂಲಕ ಬರುವ ಉದ್ಯೋಗ ಅರ್ಜಿಗಳಿಂದ ಬೆಂಗಳೂರು ಉದ್ಯಮಿ ಬೇಸರ: 'ಅರ್ಜಿಗಳು ಜಾಸ್ತಿ, ಅರ್ಹತೆ ಕಡಿಮೆ’ -
RCB Vs SRH: ಎಸ್ಆರ್ಎಚ್ ವಿರುದ್ಧದ ಐಪಿಎಲ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕಿಂಗ್ ಕುರಿತು ಆರ್ಸಿಬಿ ಬಿಗ್ ಅಪ್ಡೇಟ್ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಜೋಶ್ ಹ್ಯಾಜಲ್ವುಡ್ ಔಟ್, 7 ಕೋಟಿಯ ಆಟಗಾರನಿಗಿಲ್ಲ ಸ್ಥಾನ; ಅಶ್ವಿನ್ ಹೇಳಿದ ಆರ್ಸಿಬಿ ಸಂಭಾವ್ಯ ಪ್ಲೇಯಿಂಗ್ 11 ಇಲ್ಲಿದೆ -
ತಿಂಗಳಿಗೆ 50 ಸಾವಿರ ಸಂಬಳ ಇದೆಯಾ? 2026ರಲ್ಲಿ ಬೆಂಗಳೂರಿನಂತಹ ಮಹಾನಗರದಲ್ಲಿ ಜೀವನ ವೆಚ್ಚ ಎಷ್ಟಾಗುತ್ತೆ ಗೊತ್ತಾ? ಇಲ್ಲಿದೆ ಮಾಹಿತಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್












Click it and Unblock the Notifications