ಬೆಂಗಳೂರು: ಜೂನ್ 11 ರಂದು ಅಂಕಿತ ಪ್ರಕಾಶನದ ಐದು ಪುಸ್ತಕ ಬಿಡುಗಡೆ
ಬೆಂಗಳೂರು, ಜೂನ್ 7: ಕನ್ನಡದ ಉತ್ತಮ ಪುಸ್ತಕಗಳನ್ನು ನೀಡುವಲ್ಲಿ ಎಂದಿಗೂ ಮುಂಚೂಣಿಯಲ್ಲಿರುವ ಅಂಕಿತ ಪ್ರಕಾಶನ, ಇದೇ ಭಾನುವಾರ ಹಿರೇಮಗಳೂರು ಕಣ್ಣನ್ ಸೇರಿದಂತೆ ಖ್ಯಾತ ಲೇಖಕರ ಐದು ಪುಸ್ತಕಗಳನ್ನು ಸಹೃದಯಿಗಳ ಕೈಗೆ ಒಪ್ಪಿಸುತ್ತಿದೆ.
ಬಸವನಗುಡಿಯ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ವರ್ಲ್ಡ್ ಕಲ್ಚರ್ ನ ವಾಡಿಯಾ ಸಭಾಂಗಣದಲ್ಲಿ ಜೂನ್ 11 ರಂದು ಬೆಳಗ್ಗೆ 10 ಗಂಟೆಗೆ ಪುಸ್ತಕಗಳು ಲೋಕಾರ್ಪಣೆಗೊಳ್ಳಲಿವೆ.[ಕ್ರೂರತ್ವದ ವಿರುದ್ಧ ಸಾತ್ವಿಕ ಅಭಿಯಾನ: #BeefFest vs #MilkFest]

ಖ್ಯಾತ ವಾಗ್ಮಿ, ಕನ್ನಡ ಪುರೋಹಿತ ಎಂದೇ ಖ್ಯಾತಿ ಪಡೆದ ಹಿರೇಮಗಳೂರು ಕಣ್ಣನ್ ಅವರ 'ಕಣ್ಣನ್ ನೋಟ', ವೈ.ಎನ್. ಗುಂಡೂರಾವ್ ಸಂಪಾದಿಸಿದ 'ಚೌರಸುಖ' , ದೊಡ್ಡೇರಿ ವೆಂಕಟಗಿರಿರಾವ್ ಅವರ ಮೂರು ಕಾದಂಬರಿಗಳಾದ 'ಅವದಾನ', 'ಸಂಪ್ರದಾನ', 'ದೃಷ್ಟಿದಾನ' ಪುಸ್ತಕಗಳು ಬಿಡುಗಡೆಯಾಗಲಿವೆ.
ಖ್ಯಾತ ಸಾಹಿತಿ ಡಾ.ಎಚ್.ಎಸ್.ವೆಂಕಟೇಶಮೂರ್ತಿಯವರು ಕೃತಿಗಳನ್ನು ಲೋಕಾರ್ಪಣೆಗೊಳಿಸಲಿದ್ದು, ಚಿಂತಕ, ಪತ್ರಕರ್ತ ಎನ್. ಎಸ್.ಶ್ರೀಧರಮೂರ್ತಿ, ಖ್ಯಾತ ಹಾಸ್ಯ ಭಾಷಣಕಾರ ವೈ.ವಿ.ಗುಂಡೂರಾವ್, ಹಿರೇಮಗಳೂರು ಕಣ್ಣನ್, ವೈ.ಎನ್.ಗುಂಡೂರಾವ್, ಅನುರಾಧಾ ರಾವ್ ಉಪಸ್ಥಿತರಿರಲಿದ್ದಾರೆ.

ಸಾಹಿತ್ಯ ಪ್ರೇಮಿಗಳು ಭಾನುವಾರ ಬೆಳಗ್ಗೆ 9:30 ಕ್ಕೇ ವಾಡಿಯಾ ಸಭಾಂಗಣಕ್ಕೆ ಬಂದು, ಸಾಹಿತಿಗಳೊಂದಿಗೆ ಉಪಹಾರ ಸ್ವೀಕರಿಸಿ, ಪುಸ್ತಕ ಬಿಡುಗಡೆಯನ್ನು ಕಣ್ತುಂಬಿಸಿಕೊಳ್ಳಬಹುದು.
-
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ












Click it and Unblock the Notifications