ಬೆಂಗಳೂರಿನ ನೆನಪು ಬಿಚ್ಚಿಟ್ಟ ಗಾಯಕ ರಘು, ನಟಿ ರಶ್ಮಿಕಾ
ಬೆಂಗಳೂರು, ಜುಲೈ 12: ಗಾಯಕ ರಘು ದೀಕ್ಷಿತ್ ಹಾಗೂ ನಟಿ ರಶ್ಮಿಕಾ ಮಂದಣ್ಣ ಅವರು ಬೆಂಗಳೂರಿನೊಂದಿಗಿನ ತಮ್ಮ ಹಳೆ ನೆನಪುಗಳನ್ನು ಬಿಚ್ಚಿಟ್ಟಿದ್ದಾರೆ.
ಕಳೆದ ಕೆಲವು ವರ್ಷಗಳಲ್ಲಿ ಬೆಂಗಳೂರು ಸಾಕಷ್ಟು ಬದಲಾಗಿದೆ. ಕಳೆದ ಹಲವಾರು ವರ್ಷಗಳಿಂದ ಇಲ್ಲಿ ವಾಸಿಸುತ್ತಿರುವವರನ್ನು ಆ ಬಗ್ಗೆ ಕೇಳಬೇಕು. ನಗರದ ಬಗ್ಗೆ ಮಾತನಾಡುವ ಅವರ ಮಾತಿನಲ್ಲಿ ಗತ ಕಾಲದ ಸ್ಮರಣೆಯಿರುತ್ತದೆ.
ನಗರದ ಈ ಬದಲಾವಣೆಯನ್ನು ಅವರು ಸ್ವಾಗತಿಸಿದ್ದಾರೆ. #FlirtWithYourCity ಅಭಿಯಾನದಲ್ಲಿ ಬೆಂಗಳೂರು ನಗರದ ಬಗ್ಗೆ ಈ ಇಬ್ಬರು ಖ್ಯಾತನಾಮರು ಸಂಭಾಷಣೆ ನಡೆಸುವಾಗ ನಗರದ ಬದಲಾವಣೆಯೊಂದಿಗೆ ಹೇಗೆ ಫ್ಲರ್ಟ್ ಮಾಡಿದ್ದಾರೆ ಎಂಬುದನ್ನು ನಾವು ತಿಳಿಯೋಣ.

ಗಾಯಕ ರಘು ದೀಕ್ಷಿತ್ ನೆನಪುಗಳನ್ನು ಹಂಚಿಕೊಳ್ಳುತ್ತಾ, "ನಾವು ಬೆಂಗಳೂರಿಗೆ ಬಂದಂದಿನಿಂದ ಅಂದರೆ ಸುಮಾರು 20 ವರ್ಷಗಳಿಗೂ ಹಿಂದಿನಿಂದ ಕೃಷ್ಣ ರಾಜೇಂದ್ರ ಹೂವಿನ ಮಾರುಕಟ್ಟೆಯಲ್ಲಿ ಮಾರಾಟಗಾರರ ಮಧ್ಯ ಕುಳಿತಿದ್ದೇವೆ.
ಕಳೆದ ಹಲವಾರು ವರ್ಷಗಳಿಂದ ಅದೆಷ್ಟೋ ಜನ ಬಂದು ನೆಲೆಸಿದ್ದಾರೆ. ನನ್ನ ಪ್ರಕಾರ ಇಲ್ಲಿನ ಹೂವುಗಳು ನಗರವನ್ನು ಅತ್ಯುತ್ತಮವಾಗಿ ಪ್ರತಿನಿಧಿಸುತ್ತವೆ.
ನಗರ ಬಿಇಎಲ್ ರಸ್ತೆಯಲ್ಲಿರುವ ರಾಮಯ್ಯ ಕಾಲೇಜಿನಲ್ಲಿ ಪದವಿ ಪಡೆದಿರುವ ನಟಿ ರಶ್ಮಿಕಾ ಮಂದಣ್ಣ, ಆ ರಸ್ತೆಯ ಬಗ್ಗೆ ಪ್ರೇಮ ವ್ಯಕ್ತಪಡಿಸುತ್ತಾ, "2014ರಿಂದ ನಾನಿಲ್ಲಿ ವಾಸಿಸುತ್ತಿದ್ದೇನೆ. ನನ್ನ ಕುಟುಂಬ ನನ್ನ ಬಗ್ಗೆ ಭೀತಿಯಿಂದಿತ್ತು. ಹಿಂದೆ ಈ ಪ್ರದೇಶ ಅಭಿವೃದ್ಧಿಯಿಂದ ದೂರ ಉಳಿದಿತ್ತು. ಹೀಗಾಗಿ ಜನ ಇಲ್ಲಿ ವಾಸಿಸಲು ಹಿಂಜರಿಯುತ್ತಿದ್ದರು.
ಕಾಲ ಕಳೆದಂತೆ ಬೆಂಗಳೂರು ನಗರ ಮಹಿಳೆಯರಿಗೂ ಸೇರಿದಂತೆ ಎಲ್ಲರಿಗೂ ಸುರಕ್ಷಿತ ನಗರವಾಗಿ ಬದಲಾಗಿದೆ. ರಾತ್ರಿ ವೇಳೆಯೂ ಹೆಣ್ಣುಮಕ್ಕಳು ಭೀತಿಯಿಲ್ಲದೆ ಓಡಾಡುವುದೇ ಇದಕ್ಕೆ ಸಾಕ್ಷಿ. ಇಲ್ಲಿ ಜೀವಿಸುವುದು ನಿಜಕ್ಕೂ ಹೆಮ್ಮೆ!" ಎಂದರು.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ..












Click it and Unblock the Notifications