ಪ್ರವಾಹದ ಭೀತಿ ಎದುರಿಸಿದ್ದ ಬೆಂಗಳೂರಿಗೆ ಶುಭ ಸುದ್ದಿ
ಬೆಂಗಳೂರು, ಜೂನ್ 04: ಕರ್ನಾಟಕ ನೈಸರ್ಗಿಕ ನಿರ್ವಹಣಾ ಕೇಂದ್ರದಿಂದ ಸೋಮವಾರದಂದು ಬೆಂಗಳೂರಿಗರಿಗೆ ಶುಭ ಸುದ್ದಿ ಸಿಕ್ಕಿದೆ. ಹವಾಮಾನ ಕೇಂದ್ರ(KSNMDC) ನೀಡಿದ್ದ 24 ಗಂಟೆಗಳ ಪ್ರವಾಹ ಎಚ್ಚರಿಕೆಯನ್ನು ಹಿಂಪಡೆಯಲಾಗಿದೆ.
ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಸತತ ಮಳೆ ಸುರಿದಿದ್ದರಿಂದ ಪ್ರವಾಹ ಭೀತಿ ಎದುರಾಗಲಿದೆ, ಈ ಬಗ್ಗೆ ಸೂಕ್ತ ವ್ಯವಸ್ಥೆ ಮಾಡಿಕೊಳ್ಳಿ ಎಂದು ಹವಾಮಾನ ಕೇಂದ್ರದಿಂದ ಭಾನುವಾರದಂದು ಮುನ್ಸೂಚನೆ ನೀಡಲಾಗಿತ್ತು.
ಆದರೆ, ಬುಧವಾರ(ಜೂನ್ 06) ದ ತನಕ ಯಾವುದೇ ಪ್ರವಾಹ ಭೀತಿ ಇಲ್ಲ ಎಂದು ಕೆಎಸ್ಎನ್ ಡಿಎಂ ಕೇಂದ್ರದ ಯೋಜನಾ ವಿಜ್ಞಾನಿ ಶುಭ ಅವಿನಾಶ್ ಅವರು ಹೇಳಿದ್ದಾರೆ.

ಭಾನುವಾರದಂದು ಕೆಎಸ್ಎನ್ ಡಿಎಂ ಕೇಂದ್ರ ನೀಡಿದ್ದ ಎಚ್ಚರಿಕೆಯಿಂದ ಅಗ್ನಿಶಾಮಕ ದಳ ಹಾಗೂ ತುರ್ತು ಸೇವಾ ತಂಡ, ಟ್ರಾಫಿಕ್ ಪೊಲೀಸ್, ಬಿಬಿಎಂಪಿ ಅಲರ್ಟ್ ಆಗಿತ್ತು. ನೈಸರ್ಗಿಕ ವಿಕೋಪದ ಸಂದರ್ಭದಲ್ಲಿ ತೆಗೆದುಕೊಳ್ಳಬಹುದಾದ ಕ್ರಮಗಳ ಬಗ್ಗೆ ಚರ್ಚಿಸಲಾಗಿತ್ತು.
ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಕೂಡಾ ಬೆಂಗಳೂರು ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಗಾಳಿ, ಗುಡುಗು ಸಹಿತ ಭಾರಿ ಮಳೆಯ ಮುನ್ಸೂಚನೆ ನೀಡಿತ್ತು.
24hrs☔️Map of #BBMP from 8.30am of 3rd June 2018 to 8.30am of 4th June 2018, Highest 18.5mm☔️@Bangalore_West_Rajamahal Guttahalli pic.twitter.com/15wIlz9iXP
— KSNDMC (@KarnatakaSNDMC) June 4, 2018
2017ರಲ್ಲಿ ಬೆಂಗಳೂರು ತತ್ತರಿಸುವಂಥ ಮಳೆ ಬಿದ್ದಿತ್ತು. ಈ ಬಗ್ಗೆ ಸರಿಯಾದ ಮುನ್ಸೂಚನೆ ನೀಡದ ಹವಾಮಾನ ಕೇಂದ್ರ (ಐಎಂಡಿ) ಬಗ್ಗೆ ಬಿಬಿಎಂಪಿ ಕಿಡಿಕಾರಿತ್ತು.
24hrs☔️Map of #Karnataka from 8.30am of 3rd June 2018 to 8.30am of 4th June 2018, Highest 117mm ☔️@Shimoga_Nidige pic.twitter.com/fEJguUP0Hq
— KSNDMC (@KarnatakaSNDMC) June 4, 2018
ರಾಜರಾಜೇಶ್ವರಿ ನಗರ, ಬೆಂಗಳೂರಿನ ಪೂರ್ವ ಮತ್ತು ದಕ್ಷಿಣ ವಲಯ, ಮಹದೇವಪುರ ವಲಯ, ಬೊಮ್ಮನಹಳ್ಳಿ ವಲಯಗಳ ಜನಭಾರಿ ಸಮಸ್ಯೆ ಎದುರಿಸಲಿದ್ದಾರೆ, ನಗರದ ತಗ್ಗು ಪ್ರದೇಶಕ್ಕೆ ಭಾರಿ ನೀರು ನುಗ್ಗಿ ಜನಜೀವನ ಅಸ್ಥವ್ಯಸ್ತಗೊಳ್ಳಬಹುದು ಎಂದು ರಾಷ್ಟ್ರೀಯ ವಿಪತ್ತು ನಿಗಾ ಸಂಸ್ಥೆ ಹೇಳಿದ್ದನ್ನು ಇಲ್ಲಿ ಸ್ಮರಿಸಬಹುದು.
-
LPG Crisis: ಎಲ್ಪಿಜಿ ಬಿಕ್ಕಟ್ಟಿನ ಸುಳಿಯಲ್ಲಿ ಭಾರತದ ಪ್ರಮುಖ ನಗರಗಳು: ದರ್ಶಿನಿಗಳು ಬಂದ್, ಪಿಜಿಗಳಲ್ಲಿ ಮೆನು ಚೇಂಜ್ -
Cylinder Shortage: ರಾಜ್ಯದಲ್ಲಿ ಅನಿಲ ಪೂರೈಕೆ ಸಮಸ್ಯೆಗೆ ಮುಕ್ತಿ? ಸಚಿವ ಮುನಿಯಪ್ಪ ಮಹತ್ವ ಮಾಹಿತಿ -
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ












Click it and Unblock the Notifications