ಪ್ರವಾಹದ ಭೀತಿ ಎದುರಿಸಿದ್ದ ಬೆಂಗಳೂರಿಗೆ ಶುಭ ಸುದ್ದಿ
ಬೆಂಗಳೂರು, ಜೂನ್ 04: ಕರ್ನಾಟಕ ನೈಸರ್ಗಿಕ ನಿರ್ವಹಣಾ ಕೇಂದ್ರದಿಂದ ಸೋಮವಾರದಂದು ಬೆಂಗಳೂರಿಗರಿಗೆ ಶುಭ ಸುದ್ದಿ ಸಿಕ್ಕಿದೆ. ಹವಾಮಾನ ಕೇಂದ್ರ(KSNMDC) ನೀಡಿದ್ದ 24 ಗಂಟೆಗಳ ಪ್ರವಾಹ ಎಚ್ಚರಿಕೆಯನ್ನು ಹಿಂಪಡೆಯಲಾಗಿದೆ.
ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಸತತ ಮಳೆ ಸುರಿದಿದ್ದರಿಂದ ಪ್ರವಾಹ ಭೀತಿ ಎದುರಾಗಲಿದೆ, ಈ ಬಗ್ಗೆ ಸೂಕ್ತ ವ್ಯವಸ್ಥೆ ಮಾಡಿಕೊಳ್ಳಿ ಎಂದು ಹವಾಮಾನ ಕೇಂದ್ರದಿಂದ ಭಾನುವಾರದಂದು ಮುನ್ಸೂಚನೆ ನೀಡಲಾಗಿತ್ತು.
ಆದರೆ, ಬುಧವಾರ(ಜೂನ್ 06) ದ ತನಕ ಯಾವುದೇ ಪ್ರವಾಹ ಭೀತಿ ಇಲ್ಲ ಎಂದು ಕೆಎಸ್ಎನ್ ಡಿಎಂ ಕೇಂದ್ರದ ಯೋಜನಾ ವಿಜ್ಞಾನಿ ಶುಭ ಅವಿನಾಶ್ ಅವರು ಹೇಳಿದ್ದಾರೆ.

ಭಾನುವಾರದಂದು ಕೆಎಸ್ಎನ್ ಡಿಎಂ ಕೇಂದ್ರ ನೀಡಿದ್ದ ಎಚ್ಚರಿಕೆಯಿಂದ ಅಗ್ನಿಶಾಮಕ ದಳ ಹಾಗೂ ತುರ್ತು ಸೇವಾ ತಂಡ, ಟ್ರಾಫಿಕ್ ಪೊಲೀಸ್, ಬಿಬಿಎಂಪಿ ಅಲರ್ಟ್ ಆಗಿತ್ತು. ನೈಸರ್ಗಿಕ ವಿಕೋಪದ ಸಂದರ್ಭದಲ್ಲಿ ತೆಗೆದುಕೊಳ್ಳಬಹುದಾದ ಕ್ರಮಗಳ ಬಗ್ಗೆ ಚರ್ಚಿಸಲಾಗಿತ್ತು.
ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಕೂಡಾ ಬೆಂಗಳೂರು ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಗಾಳಿ, ಗುಡುಗು ಸಹಿತ ಭಾರಿ ಮಳೆಯ ಮುನ್ಸೂಚನೆ ನೀಡಿತ್ತು.
24hrs☔️Map of #BBMP from 8.30am of 3rd June 2018 to 8.30am of 4th June 2018, Highest 18.5mm☔️@Bangalore_West_Rajamahal Guttahalli pic.twitter.com/15wIlz9iXP
— KSNDMC (@KarnatakaSNDMC) June 4, 2018
2017ರಲ್ಲಿ ಬೆಂಗಳೂರು ತತ್ತರಿಸುವಂಥ ಮಳೆ ಬಿದ್ದಿತ್ತು. ಈ ಬಗ್ಗೆ ಸರಿಯಾದ ಮುನ್ಸೂಚನೆ ನೀಡದ ಹವಾಮಾನ ಕೇಂದ್ರ (ಐಎಂಡಿ) ಬಗ್ಗೆ ಬಿಬಿಎಂಪಿ ಕಿಡಿಕಾರಿತ್ತು.
24hrs☔️Map of #Karnataka from 8.30am of 3rd June 2018 to 8.30am of 4th June 2018, Highest 117mm ☔️@Shimoga_Nidige pic.twitter.com/fEJguUP0Hq
— KSNDMC (@KarnatakaSNDMC) June 4, 2018
ರಾಜರಾಜೇಶ್ವರಿ ನಗರ, ಬೆಂಗಳೂರಿನ ಪೂರ್ವ ಮತ್ತು ದಕ್ಷಿಣ ವಲಯ, ಮಹದೇವಪುರ ವಲಯ, ಬೊಮ್ಮನಹಳ್ಳಿ ವಲಯಗಳ ಜನಭಾರಿ ಸಮಸ್ಯೆ ಎದುರಿಸಲಿದ್ದಾರೆ, ನಗರದ ತಗ್ಗು ಪ್ರದೇಶಕ್ಕೆ ಭಾರಿ ನೀರು ನುಗ್ಗಿ ಜನಜೀವನ ಅಸ್ಥವ್ಯಸ್ತಗೊಳ್ಳಬಹುದು ಎಂದು ರಾಷ್ಟ್ರೀಯ ವಿಪತ್ತು ನಿಗಾ ಸಂಸ್ಥೆ ಹೇಳಿದ್ದನ್ನು ಇಲ್ಲಿ ಸ್ಮರಿಸಬಹುದು.
-
AI ಎಫೆಕ್ಟ್: 2026ರಲ್ಲೂ ಮುಂದುವರಿದ ಉದ್ಯೋಗ ಕಡಿತ; ಯಾವ್ಯಾವ ಕಂಪನಿಗಳಿಂದ ಎಷ್ಟು ವಜಾ? ಪಟ್ಟಿ ಇಲ್ಲಿದೆ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್












Click it and Unblock the Notifications