ಪರಿಹಾರ ಸಾಕಾಗಲ್ಲ ಹೆಚ್ಚಿನ ಪರಿಹಾರ ಕೊಡಿ: ಸಿದ್ದರಾಮಯ್ಯ ಒತ್ತಾಯ
ಬೆಂಗಳೂರು, ಅಕ್ಟೋಬರ್ 05: ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ ಪ್ರವಾಹ ಮಧ್ಯಂತರ ಪರಿಹಾರ ಕಡಿಮೆಯಾಯಿತು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆಕ್ಷೇಪ ಎತ್ತಿದ್ದಾರೆ.
ರಾಜ್ಯದಲ್ಲಿ ನಷ್ಟವಾಗಿರುವುದು 38000 ಕೋಟಿ ಬೇಡಿಕೆ ಇಟ್ಟಿದ್ದು 5000 ಕೋಟಿ ಈಗ ಬಿಡುಗಡೆ ಮಾಡಿರುವುದು 1200 ಇದು ಸಾಖಾಗುವುದಿಲ್ಲ ಇನ್ನೂ ಹೆಚ್ಚಿನ ಹಣವನ್ನು ಬಿಡುಗಡೆ ಮಾಡಬೇಕು ಎಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.
ಕೇಂದ್ರದಿಂದ ಪ್ರವಾಹ ಪರಿಹಾರ; ತೇಪೆ ಹಚ್ಚಿದ ರಾಜ್ಯ ಬಿಜೆಪಿ ಘಟಕ
ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರವಿದ್ದಾಗ 16000 ಕೋಟಿ ಹಣವನ್ನು ಬಿಡುಗಡೆ ಮಾಡಲಾಗಿತ್ತು. ಈಗ ಕೇವಲ 1200 ಕೋಟಿ ಹಣ ಬಿಡುಗಡೆ ಮಾಡಲಾಗಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಯಡಿಯೂರಪ್ಪ ಅವರು 'ಸರ್ಕಾರದ ಖಜಾನೆ ಖಾಲಿ ಆಗಿದೆ' ಎಂದಿರುವ ಬಗ್ಗೆ ಮಾತನಾಡಿದ ಸಿದ್ದರಾಮಯ್ಯ, 'ಯಡಿಯೂರಪ್ಪ ಅವರಿಗೆ ಹಣಕಾಸು ಜ್ಞಾನವಿಲ್ಲವೆಂದು ಕಾಣುತ್ತದೆ. ಸರ್ಕಾರದ ಖಜಾನೆ ಖಾಲಿ ಆಗುವುದಿಲ್ಲ, ತೆರಿಗೆ ವಸೂಲಿ ನಿಲ್ಲಿಸಿದರಷ್ಟೆ ಖಜಾನೆ ಖಾಲಿ ಆಗುತ್ತದೆ' ಎಂದು ಸಿದ್ದರಾಮಯ್ಯ ಹೇಳಿದರು.
ಬಿಡುಗಡೆಯಾಗಿರುವ ಪರಿಹಾರ ಹಣ ಮೊದಲು ಖರ್ಚು ಮಾಡಿ : ನಳಿನ್ ಕುಮಾರ್
ಹಲವು ಒತ್ತಾಯ, ಪ್ರತಿಭಟನೆಗಳ ಬಳಿಕ ನಿನ್ನೆ ಕೇಂದ್ರ ಸರ್ಕಾರವು ರಾಜ್ಯದ ನೆರೆ ಪರಿಹಾರಕ್ಕೆ ಎನ್ಡಿಆರ್ಎಫ್ ನಿಧಿಯಿಂದ 1200 ಕೋಟಿ ಹಣ ಬಿಡುಗಡೆ ಮಾಡಿದೆ.