ಲಾಲ್ಬಾಗ್ ಫಲಪುಷ್ಪ ಪ್ರದರ್ಶನ: ಪ್ರವೇಶ ದುಬಾರಿ
ಬೆಂಗಳೂರು, ಜುಲೈ31: ಈ ಬಾರಿ ಲಾಲ್ಬಾಗ್ನಲ್ಲಿ ಫಲಪುಷ್ಪ ಪ್ರದರ್ಶನ ಆ.4ರಿಂದ ಆರಂಭವಾಗಲಿದೆ. ಪ್ರವೇಶ ಶುಲ್ಕವನ್ನು 70 ರೂ.ಗೆ ಏರಿಸಲಾಗಿದೆ.
ದರ ಏರಿಕೆಯು ರಜೆ ಮತ್ತು ವಾರದ ಎಲ್ಲಾ ದಿನಗಳಿಗೆ ಅನ್ವಯವಾಗಲಿದೆ. ಮಕ್ಕಳಿಗೆ ಎಲ್ಲಾ ದಿನಗಳಲ್ಲೂ 20 ರೂ. ನಿಗದಿಯಾಗಿದೆ. ಮನರಂಜೆನಗೂ ತೆರಿಗೆ ಅನ್ವಯವಾಗುವುದರಿಂದ ಮೈಸೂರು ಉದ್ಯಾನ ಕಲಾಸಂಘದ ಪದಾಧಿಕಾರಿಗಳು ಹಾಗೂ ರಾಜ್ಯ ತೋಟಗಾರಿಕೆ ಇಲಾಖೆ ಅಧಿಕಾರಿಗಳ ನೇತೃತ್ವದಲ್ಲಿ ಇತ್ತೀಚೆಗೆ ನಡೆದ ಫಲಪುಷ್ಪ ಪ್ರದರ್ಶನದ ಪೂರ್ವಭಾವಿ ಸಭೆಯಲ್ಲಿ ಶುಲ್ಕ ಹೆಚ್ಚಳದ ಕುರಿತು ನಿರ್ಣಯ ಕೈಗೊಳ್ಳಲಾಗಿದೆ.
ಪ್ರತಿ ವರ್ಷ ಶುಲ್ಕವನ್ನು ಏರಿಸಲಾಗುತ್ತದೆ. ಅದಕ್ಕೆ ತಕ್ಕಂತೆ ಸೌಲಭ್ಯಗಳನ್ನು ಒದಗಿಸುತ್ತಿಲ್ಲ, ಪ್ರದರ್ಶನದ ವೇಳೆ ನಡೆಯುವ ಅವ್ಯವಸ್ಥೆಗಳ ಬಗೆಗೂ ಆಯೋಜಕರು ಹೆಚ್ಚು ಗಮನಹರಿಸುತ್ತಿಲ್ಲ ಎಂದು ಸಾರ್ವಜನಿಕರು ಆರೋಪಿಸುತ್ತಿದ್ದಾರೆ. ಈ ಬಾರಿ ಲಾಲ್ ಬಾಗ್ ಫ್ಲವರ್ ಶೋ ಇನ್ನುಷ್ಟು ಆಕರ್ಷಕವಾಗಿರಲಿದೆ. ಭಾರತೀಯ ಸೇನೆಯ ಸಾಮರ್ಥ್ಯವನ್ನು ಬಿಂಬಿಸುವ ಪುಷ್ಪ ಪ್ರದರ್ಶನ ಇದಾಗಿರಲಿದೆ.

ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಸಸ್ಯಕಾಶಿ ಲಾಲ್ಬಾಗ್ನಲ್ಲಿ ನಡೆಯಲಿರುವ ಫಲಪುಷ್ಪ ಪ್ರದರ್ಶನದಲ್ಲಿ ರಕ್ಷಣಾ ಇಲಾಖೆಯ ಮೂರು ವಿಭಾಗಗಳಾದ ವಾಯುಸೇನೆ, ಭೂ ಸೇನೆ ಹಾಗೂ ನೌಕಾಪಡೆಯ ಸಾಧನೆ, ಸಾಮರ್ಥ್ಯ ಹಾಗೂ ನೌಕಾಪಡೆಯ ಶೌರ್ಯ ಅನಾವರಣಗೊಳ್ಳಲಿದೆ.
ಕಾಷ್ಟ್ರಕವಿ ಕುವೆಂಪು ಹಾಗೂ ಬಾಹುಬಲಿಯನ್ನು ನಿರ್ಮಿಸಿ ಜನರ ಗಮನಸೆಳೆದಿದ್ದ ತೋಟಗಾರಿಕೆ ಇಲಾಖೆ ದೇಶದ ರಕ್ಷಣೆಗಾಗಿ ಬಲಿದಾನ ಮಾಡಿದ ಹುತಾತ್ಮರ ಜೀವನದ ಸಂಪೂರ್ಣ ವಿವರಗಳನ್ನು ಗಾಜಿನ ಮನೆಯಲ್ಲಿ ಪ್ರದರ್ಶಿಸಲಿದೆ. ಈ ಕುರಿತು ಮೈಸೂರು ಉದ್ಯಾನ ಕಲಾಸಂಘ ಹಾಗೂ ತೋಟಗಾರಿಕೆ ಇಲಾಖೆಯ ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ.
-
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
ವಲಸೆ ಕಾರ್ಮಿಕರಿಂದಾಗಿ ಉದ್ಯೋಗ ನಷ್ಟವಾಗುತ್ತಿರುವ ಬಗ್ಗೆ ಅಧಿಕೃತ ದೂರು ಸಲ್ಲಿಕೆಯಾಗಿಲ್ಲ: ಕಾರ್ಮಿಕ ಇಲಾಖೆ ಸ್ಪಷ್ಟನೆ -
ಯುಗಾದಿ, ರಂಜಾನ್ ಹಬ್ಬಕ್ಕೆ 2000 ವಿಶೇಷ ಬಸ್: ಮುಂಗಡ ಟಿಕೆಟ್ ಗೆ ರಿಯಾಯ್ತಿ ಘೋಷಿಸಿದ KSRTC -
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
ರೈತರ ಹಿತಾಸಕ್ತಿಗೆ ಧಕ್ಕೆಯಿಲ್ಲ: 1 ರೂಪಾಯಿಗೆ ಲೀಟರ್ ಹಾಲು ವಿವಾದಕ್ಕೆ ಸ್ಪಷ್ಟನೆ ಕೊಟ್ಟ FlipKart -
Ragi Mudde: ಕರ್ನಾಟಕದ ರಾಗಿ ಮುದ್ದೆ ಸವಿಯಬೇಕು: ಮಂಡ್ಯದಲ್ಲಿ ಬಯಕೆ ಬಿಚ್ಚಿಟ್ಟ ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ -
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ












Click it and Unblock the Notifications