ಪ್ರವೀಣ್ ಗೋಡ್ಖಿಂಡಿಗೆ ‘ಝೆಡ್ಎಂಆರ್’ ಸಂಗೀತ ಪ್ರಶಸ್ತಿಯ ಗರಿ
ಬೆಂಗಳೂರು, ಮೇ 17 : ಸುರಮಣಿ, ನಾದನಿಧಿ ಹೀಗೆ ಹಲವು ಪ್ರಶಸ್ತಿ ಪುರಸ್ಕಾರಗಳಿಗೆ ಭಾಜನರಾಗಿರುವ ಖ್ಯಾತ ಕೊಳಲು ವಾದಕ ಪ್ರವೀಣ್ ಗೋಡ್ಖಿಂಡಿ ಅವರಿಗೆ ಮತ್ತೊಂದು ಪ್ರತಿಷ್ಠಿತ ಪ್ರಶಸ್ತಿ ಒಲಿದಿದೆ.
ಅಂತಾರಾಷ್ಟ್ರೀಯ ಮಟ್ಟದ 'ಝೆಡ್ಎಂಆರ್ ಮ್ಯೂಜಿಕ್ ಅವಾರ್ಡ್'ನ (ಝೆಡ್ಎಂಆರ್ ಸಂಗೀತ ಪ್ರಶಸ್ತಿ) ಗರಿ ಗೋಡ್ಖಿಂಡಿ ಅವರ ಮುಡಿಗೇರಿದೆ. ಪ್ರವೀಣ್ ಅವರಿಗೆ ಅಭಿನಂದನೆಗಳು.
'ಝೋನ್ ಮ್ಯೂಸಿಕ್ ರಿಪೋರ್ಟರ್ (Zone Music Reporter)' ಅಮೆರಿಕಾದ ಪ್ರತಿಷ್ಠಿತ ಸಂಗೀತ ಸಂಸ್ಥೆ ಪ್ರತಿವರ್ಷ ವಿಶ್ವದ ಖ್ಯಾತ ಸಂಗೀತ ವಿದ್ವಾಂಸರಿಗೆ ಹಲವು ವಿಭಾಗಗಳಲ್ಲಿ ಪ್ರಶಸ್ತಿಯನ್ನು ನೀಡುತ್ತಿದೆ. [ಪಂಡಿತ್ ಗೋಡ್ಖಿಂಡಿರಿಂದ ವಿಶಿಷ್ಟ ಸಂಗೀತ ಸಾಹಸ ಘೋಷಣೆ]

'ಬೆಸ್ಟ್ ಕಾನ್ಟೆಂಪ್ರರಿ ಇನ್ಸ್ಟ್ರುಮೆಂಟಲ್ ಆಲ್ಬಂ' (ಅತ್ಯುತ್ತಮ ಸಮಕಾಲೀನ ವಾದ್ಯ ಸಂಗೀತ ಆಲ್ಬಂ) ವಿಭಾಗದಲ್ಲಿ ಪ್ರವೀಣ್ ಗೋಡ್ಖಿಂಡಿ ಅವರ 'ಇಮ್ಯಾಜಿನಿಂಗ್ಸ್' ಎಂಬ ವಾದ್ಯ ಸಂಗೀತದ ಆಲ್ಬಂಗೆ 2015ನೇ ಸಾಲಿನ 'ಝೆಡ್ಎಂಆರ್ ಸಂಗೀತ ಪ್ರಶಸ್ತಿ' ನೀಡಿ ಗೌರವಿಸಿದೆ. ಒಟ್ಟು 13 ವಿಭಾಗಗಳಲ್ಲಿ ಪ್ರಶಸ್ತಿ ನೀಡಲಾಗುತ್ತದೆ.
ಈ ಆಲ್ಬಂನಲ್ಲಿ ಪ್ರವೀಣ್ ಗೋಡ್ಖಿಂಡಿ ಅವರ ಜತೆ ವಿದೇಶಿ ಖ್ಯಾತ ಸಂಗೀತಗಾರರಾದ ಪೌಲ್ ಆಡಮ್ಸ್, ಡೇವಿಡ್ ಹಾಫ್ಮ್ಯಾನ್ ಮತ್ತು ಎಲಿಜಬೆತ್ ಗೇರ್ ಅವರ ಸಂಗೀತ ಸಹಯೋಗವಿದೆ. [ಕಾರು ಚಾಲಕನ ಸಂಗೀತ ಪ್ರತಿಭೆಗೆ ತಲೆದೂಗಿದ ಕಲಾಂ]
ಮಾಹಿತಿಗೆ ಸಂಪರ್ಕಿಸಿ : +91-9845329954
More From
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications