ದೇವೇಗೌಡ ಪೆಟ್ರೋಲ್ ಬಂಕ್ ಬಳಿ ಮೇಲ್ಸೇತುವೆ ಉದ್ಘಾಟನೆಗೆ ಸಿದ್ಧ
ಕಿತ್ತೂರು ರಾಣಿ ಚೆನ್ನಮ್ಮ ವೃತ್ತ(ದೇವೇಗೌಡ ಪೆಟ್ರೋಲ್ ಬಂಕ್ ಬಳಿ)ದ ಬಳಿಯ ಮೇಲ್ಸೇತುವೆ ಕೊನೆಗೂ ಸಿದ್ಧವಾಗಿದೆ. ಜನವರಿ 31, 2017ಕ್ಕೆ ಮುಖ್ಯಮಂತ್ರಿಗಳಿಂದ ಉದ್ಘಾಟನೆಯಾಗಲಿದೆ ಎಂದು ಮೇಯರ್ ಜಿ ಪದ್ಮಾವತಿ ಘೋಷಿಸಿದ್ದಾರೆ.
ಬೆಂಗಳೂರು, ಡಿಸೆಂಬರ್ 20: ಕಿತ್ತೂರು ರಾಣಿ ಚೆನ್ನಮ್ಮ ವೃತ್ತ(ದೇವೇಗೌಡ ಪೆಟ್ರೋಲ್ ಬಂಕ್ ಬಳಿ)ದ ಬಳಿಯ ಮೇಲ್ಸೇತುವೆ ಕೊನೆಗೂ ಸಿದ್ಧವಾಗಿದೆ. ಜನವರಿ 31, 2017ಕ್ಕೆ ಮುಖ್ಯಮಂತ್ರಿಗಳಿಂದ ಉದ್ಘಾಟನೆಯಾಗಲಿದೆ ಎಂದು ಮೇಯರ್ ಜಿ ಪದ್ಮಾವತಿ ಘೋಷಿಸಿದ್ದಾರೆ.
ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್, ಬಿಬಿಎಂಪಿ ಮೇಯರ್ ಪದ್ಮಾವತಿ ಮುಂತಾದವರು ಸೋಮವಾರ ದೇವೇಗೌಡ ಪೆಟ್ರೋಲ್ ಬಂಕ್ (ಕಿತ್ತೂರು ರಾಣಿ ಸರ್ಕಲ್) ಫ್ಲೈ ಓವರ್ ಕಾಮಗಾರಿಯನ್ನು ಪರಿಶೀಲನೆ ನಡೆಸಿದರು.[ಇದು ದೇವೇಗೌಡ ಪೆಟ್ರೋಲ್ ಬಂಕ್ ಫ್ಲೈ ಓವರ್ ಕಥೆ...ವ್ಯಥೆ ]
ಕೆ.ಜೆ.ಜಾರ್ಜ್: '2017ರ ಜನವರಿ 31ಕ್ಕೆ ಈ ಫ್ಲೈ ಓವರ್ ಅನ್ನು ಸಾರ್ವಜನಿಕ ಸಂಚಾರಕ್ಕೆ ಮುಕ್ತಗೊಳಿಸಲಾಗುತ್ತದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟನೆ ಮಾಡಲಿದ್ದಾರೆ. ಸಂಚಾರ ಮಾರ್ಗ ಬದಲಾಯಿಸಿ ಕಾಮಗಾರಿ ನಡೆಸಬೇಕಾಗಿದ್ದರಿಂದ ವಿಳಂಬವಾಗಿದೆ' ಎಂದರು.

ಎಂ. ವೆಂಕಟರಾವ್ ಇನ್ಫ್ರಾಸ್ಟ್ರಕ್ಚರ್ ಸಂಸ್ಥೆಗೆ ಬಿಬಿಎಂಪಿ ಕಾಮಗಾರಿಯ ಗುತ್ತಿಗೆ ನೀಡಿದೆ. ಟೆಂಡರ್ ನಲ್ಲಿ ಹಾಕಿದ್ದ ಷರತ್ತಿನ ಅನ್ವಯ 18 ತಿಂಗಳಿನಲ್ಲಿ ಕಾಮಗಾರಿ ಪೂರ್ಣಗೊಳ್ಳಬೇಕಾಗಿತ್ತು. ಆದರೆ, ಕಾಮಗಾರಿ ವಿಳಂಬವಾಗಿದ್ದರಿಂದ 2016ರ ಡಿಸೆಂಬರ್ ಬಂದರೂ ಕಾಮಗಾರಿ ಇನ್ನೂ ಪೂರ್ಣಗೊಂಡಿಲ್ಲ. ಕೊನೆಗೂ ಜನವರಿ ತಿಂಗಳೊಳಗೆ ಸಂಚಾರ ಮುಕ್ತಗೊಳಿಸಲು ಸಂಸ್ಥೆ ಸಿದ್ಧವಾಗಿದೆ.

ಫ್ಲೈ ಓವರ್ ಆರಂಭವಾದ ಮೇಲೆ ದೇವೇಗೌಡ ಪೆಟ್ರೋಲ್ ಬಂಕ್ ಬಳಿಯ ವಾಹನ ಸಂಚಾರ ದಟ್ಟಣೆ ಶೇ 65ರಷ್ಟು ಕಡಿಮೆಯಾಗಲಿದೆ.
@shamsundar_sk @CMofKarnataka OMG! finally..The 352-mt-long &17-mt-wide flyover took nearly 5 years to build..#ItHappensOnlyinIndia
— S.B.HIREMATH (@HiremathSidhu) December 19, 2016
ಕದಿರೇನಹಳ್ಳಿ ಮೂಲಕ ರಿಂಗ್ ರಸ್ತೆಯಲ್ಲಿ ಬರುವ ವಾಹನಗಳು ಫ್ಲೈ ಓವರ್ ಮೇಲೆ ಸಾಗಲಿವೆ. ಪದ್ಮನಾಭನಗರ, ಉತ್ತರಹಳ್ಳಿ ಕಡೆಗೆ ಹೋಗುವ ವಾಹನಗಳು ಕೆಳಗೆ ಸಂಚರಿಸಲಿವೆ.
-
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
ತಿಂಗಳಿಗೆ 50 ಸಾವಿರ ಸಂಬಳ ಇದೆಯಾ? 2026ರಲ್ಲಿ ಬೆಂಗಳೂರಿನಂತಹ ಮಹಾನಗರದಲ್ಲಿ ಜೀವನ ವೆಚ್ಚ ಎಷ್ಟಾಗುತ್ತೆ ಗೊತ್ತಾ? ಇಲ್ಲಿದೆ ಮಾಹಿತಿ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಲಂಡನ್ ಮೆಟ್ರೋಗಿಂತ ಬೆಂಗಳೂರಿನ 'ನಮ್ಮ ಮೆಟ್ರೋ' ಬೆಸ್ಟ್: Viral ಪೋಸ್ಟ್ನಲ್ಲಿ ಅಚ್ಚರಿಯ ಸತ್ಯ ಬಿಚ್ಚಿಟ್ಟ ಯುವತಿ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಉನ್ನತ ಶಿಕ್ಷಣಕ್ಕೆ ಭಾರತದ ಯಾವ ನಗರ ಬೆಸ್ಟ್? QS ರ್ಯಾಂಕಿಂಗ್ ಪಟ್ಟಿಯಲ್ಲಿದೆ ಬೆಂಗಳೂರು ಸೇರಿದಂತೆ 4 ನಗರಗಳ ಹೆಸರು -
ಯುದ್ಧದ ಬಿಸಿ: ಬೆಂಗಳೂರಿಗೆ ಅರಬ್ ರಾಷ್ಟ್ರಗಳ ವಿಮಾನ ಸಂಚಾರ ಕಡಿತ; ರಾಜ್ಯ ಟ್ರಾವೆಲ್ಸ್ ಮಾಲೀಕರಲ್ಲಿ ಆತಂಕ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್












Click it and Unblock the Notifications