ಒಂದು ಮರ ಕಡಿದಲ್ಲಿ ಹತ್ತು ಗಿಡ ನೆಡುತ್ತೇವೆ
ಬೆಂಗಳೂರು, ಜು.25: ಬೆಂಗಳೂರು ಮಹಾನಗರದಲ್ಲಿ ನಗರೀಕರಣಕ್ಕಾಗಿ ಕಡಿಯಲಾಗುವ ಒಂದು ಮರದ ಬದಲಿಗೆ 10 ಗಿಡಗಳನ್ನು ನೆಡೆಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ವಿಧಾನ ಪರಿಷತ್ ಸದಸ್ಯರಾದ ವಿ. ಸೋಮಣ್ಣ ಅವರು ಮರಗಳ ರಕ್ಷಣೆಗೆ ಸರ್ಕಾರ ತೆಗೆದುಕೊಂಡಿರುವ ಕ್ರಮಗಳೇನು ಎಂಬ ಪ್ರಶ್ನೆಗೆ ಉತ್ತರಿಸಿದ ಅವರು ಬೆಂಗಳೂರು ಮಹಾನಗರದಲ್ಲಿ ರಸ್ತೆ ಅಗಲೀಕರಣ, ಮೆಟ್ರೋ ಕಾಮಗಾರಿ ಹಾಗೂ ಅಭಿವೃದ್ಧಿ ಕಾಮಗಾರಿಗಳಿಗಾಗಿ ಮರಗಳನ್ನು ತೆರವುಗೊಳಿಸಬೇಕಾಗುತ್ತದೆ ಎಂದರು.[ಬೆಂಗಳೂರಿನಲ್ಲಿರುವುದು 14 ಲಕ್ಷ ಮರಗಳು ಮಾತ್ರ]

2010 ನೇ ಸಾಲಿನಿಂದ ಇಲ್ಲಿಯವರೆಗೆ ಪಾಲಿಕೆಯ ವತಿಯಿಂದ 7853 ಹಾಗೂ ಬೆಂಗಳೂರು ಮೆಟ್ರೋ ರೈಲು ನಿಗಮದ ವತಿಯಿಂದ ವಿವಿಧ ಜಾತಿಯ1428 ಮರಗಳನ್ನು ಕಡಿಯಲಾಗಿದೆ. ಹೀಗೆ ತೆರವುಗೊಳಿಸಿದ ಮರಗಳ ಮಾರಾಟದಿಂದ ಪಾಲಿಕೆಗೆ 54,81,344 ರೂ. ಹಾಗೂ ಬೆಂಗಳೂರು ಮೆಟ್ರೋ ರೈಲು ನಿಗಮಕ್ಕೆ 2,29,082 ರೂ. ಆದಾಯ ಬಂದಿದೆ. ಹಾಗೆಯೇ 2012-13 ನೇ ಸಾಲಿಗೆ 1,77,324 ಗಿಡಗಳನ್ನು ಪರ್ಯಾಯವಾಗಿ ನೆಡಲಾಗಿದೆ ಎಂದು ತಿಳಿಸಿದರು.[ಎಸಿ ಸಿಟಿ ಬೆಂಗಳೂರು ಆಗಲಿದೆ ಬೆಂಗಾಡು!]
ಅಭಿವೃದ್ಧಿ ಕಾರ್ಯಗಳಿಗಾಗಿ ಮರಗಳನ್ನು ತೆಗೆಯಬೇಕಾಗುತ್ತದೆ. ಆದರೆ ಒಂದು ಮರದ ಬದಲಿಗೆ 10 ಗಿಡಗಳನ್ನು ನೆಡಲಾಗುತ್ತಿದೆ. ರಸ್ತೆಗಳಲ್ಲಿ ನೆಡಲಾಗುವ ಗಿಡಗಳಿಗೆ ರಕ್ಷಣೆಯಿಲ್ಲದೆ ನೆಟ್ಟ ಗಿಡಗಳಲ್ಲಿ ಶೇಕಡಾ 40 ರಷ್ಟು ಮಾತ್ರ ಉಳಿದುಕೊಳ್ಳುತ್ತವೆ. ಹಸಿರು ಇದ್ದರೆ ಆರೋಗ್ಯ ಕೂಡ ಹೆಚ್ಚುತ್ತದೆ. ಆದ್ದರಿಂದ ನೆಟ್ಟ ಗಿಡಗಳ ರಕ್ಷಣೆಗೆ ಹೆಚ್ಚು ಗಮನ ಹರಿಸುವಂತೆ ಬಿಬಿಎಂಪಿ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಮಾಹಿತಿ ನೀಡಿದರು.
ಅಲ್ಲದೇ ಬಿಬಿಎಂಪಿ ಯಲ್ಲಿ ಕೆಲಸವಿಲ್ಲದಿದ್ದರೂ ಕಾರ್ಯನಿರ್ವಹಿಸುತ್ತಿರುವ ಅರಣ್ಯ ಅಧಿಕಾರಿಗಳನ್ನು ಮಾತೃ ಇಲಾಖೆಗೆ ಕಳುಹಿಸುವ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.[ಬಿಬಿಎಂಪಿಯಲ್ಲಿ ಅಲಿಬಾಬಾ ಮತ್ತು 40 ಕಳ್ಳರು]
-
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications