ಡಿಕೆಶಿ ಆರೋಗ್ಯಕ್ಕಾಗಿ 1001 ತೆಂಗಿನಕಾಯಿ ಒಡೆದ ಬೆಂಬಲಿಗರು
ಬೆಂಗಳೂರು, ಆಗಸ್ಟ್.27: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(ಕೆಪಿಸಿಸಿ) ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಕೊರೊನಾವೈರಸ್ ಸೋಂಕಿನಿಂದ ಆದಷ್ಟು ಬೇಗ ಗುಣಮುಖರಾಗಲಿ ಎಂದು ಬೆಂಬಲಿಗರು ದೇವರ ಮೊರೆ ಹೋಗಿದ್ದಾರೆ.
Recommended Video
ಬೆಂಗಳೂರಿನ ವೈಯಾಲಿಕಾವಲ್ ನಲ್ಲಿರುವ ತಿರುಮಲ ತಿರುಪತಿ ದೇವಸ್ಥಾನದ ಎದುರಿನಲ್ಲಿ ನೆರೆದ ಡಿಕೆಶಿ ಬೆಂಬಲಿಗರು 1001 ತೆಂಗಿನಕಾಯಿ ಒಡೆದು ಪ್ರಾರ್ಥಿಸಿದರು. ಕಾಂಗ್ರೆಸ್ ಅಧ್ಯಕ್ಷರ ಆರೋಗ್ಯದಲ್ಲಿ ಚೇತರಿಕೆ ಕಂಡು ಬರಲಿ ಎಂದು ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು.
ಕೊರೊನಾ ವೈರಸ್ಗೆ ತುತ್ತಾಗಿರುವ ಡಿ.ಕೆ. ಶಿವಕುಮಾರ್ ಆರೋಗ್ಯದ ಅಪ್ಡೇಟ್
ತಿರುಮಲ ತಿರುಪತಿ ದೇವಸ್ಥಾನದ ಎದುರಿನಲ್ಲಿ 1001 ತೆಂಗಿನಕಾಯಿಗಳನ್ನು ಒಡೆಯುತ್ತಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಇನ್ನೊಂದು ಕಡೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆರೋಗ್ಯ ಸ್ಥಿತಿಯಲ್ಲಿ ಚೇತರಿಕೆ ಕಂಡು ಬಂದಿದೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.
ಆಗಸ್ಟ್.25ರಂದು ಕೊವಿಡ್-19 ಪಾಸಿಟಿವ್ ವರದಿ:
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಜ್ವರ ಮತ್ತು ಬೆನ್ನುನೋವು ಕಾಣಿಸಿಕೊಂಡಿತ್ತು. ಈ ಹಿನ್ನೆಲೆ ಆಗಸ್ಟ್.23ರಂದು ಸ್ವತಃ ಡಿಕೆಶಿಯವರು ಕೊರೊನಾವೈರಸ್ ಸೋಂಕಿನ ತಪಾಸಣೆಗೆ ಒಳಗಾಗಿದ್ದರು. ಅದಾಗಿ ಎರಡು ದಿನಗಳಲ್ಲೇ ಅಂದರೆ ಆಗಸ್ಟ್.25ರಂದು ಬಂದ ವೈದ್ಯಕೀಯ ವರದಿಯಲ್ಲಿ ಡಿ.ಕೆ.ಶಿವಕುಮಾರ್ ಅವರಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ದೃಢಪಟ್ಟಿತ್ತು. ವೈದ್ಯಕೀಯ ವರದಿ ಹೊರ ಬರುತ್ತಿದ್ದಂತೆ ಡಿಕೆಶಿ ಬೆಂಗಳೂರಿನ ಸುಗುಣ ಆಸ್ಪತ್ರೆಗೆ ದಾಖಲಾಗಿದ್ದರು.
. @KPCCPresident who has tested positive , his followers praying Shivakumar's speedy recovery and were seen breaking 1001 coconuts Infront of TTD temple , Vaiyyalikaval of Bengaluru @santwana99 @NewIndianXpress pic.twitter.com/WLCQ4Lwewz
— Ashwini M Sripad (@AshwiniMS_TNIE) August 27, 2020
ಸುಗುಣ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ.ಆರ್.ರವೀಂದ್ರ ನೇತೃತ್ವದಲ್ಲಿ ವಿವಿಧ ವಿಭಾಗಗಳ ತಜ್ಞರ ವಿಶೇಷ ತಂಡವು ಡಿ.ಕೆ.ಶಿವಕುಮಾರ್ ಅವರ ಆರೋಗ್ಯ ಸ್ಥಿತಿಯ ಮೇಲೆ ನಿಗಾ ವಹಿಸಿದೆ ಎಂದು ತಿಳಿದು ಬಂದಿದೆ.