ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಹಿರಿಯ ಶಾಸಕ ಅಂಗಾರ ನಿರ್ಲಕ್ಷ್ಯ: ಬಿಜೆಪಿಗೆ ಹೋರಾಟದ ಎಚ್ಚರಿಕೆ

|
Google Oneindia Kannada News

ಬೆಂಗಳೂರು, ಆಗಸ್ಟ್ 28: ಆರು ಬಾರಿ ಶಾಸಕರಾಗಿರುವ ಬಿಜೆಪಿಯ ಹಿರಿಯ ಶಾಸಕ ಎಸ್.ಅಂಗಾರ ಅವರಿಗೆ ಸಚಿವ ಸ್ಥಾನ ನೀಡದೇ ಇರುವ ಬಗ್ಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಎಸ್.ಅಂಗಾರ ಅವರಿಗೆ ಸಚಿವ ಸ್ಥಾನ ನೀಡದಿದ್ದರೆ ಪ್ರತಿಭಟನೆ ನಡೆಸುವುದಾಗಿ ಕರ್ನಾಟಕ ಗಡಿ ಹೋರಾಟ ಸಮಿತಿಯು ಬಿಜೆಪಿಗೆ ಎಚ್ಚರಿಕೆ ನೀಡಿದೆ. ಸರಳ, ಸಜ್ಜನ ರಾಜಕಾರಣಿಗೆ ಸಂಪುಟ ಸ್ಥಾನ ನೀಡದೇ ಇರುವುದನ್ನು ಸಂಘಟನೆ ಖಂಡಿಸಿದೆ.

ತಮ್ಮ ವಿರುದ್ಧದ ಟೀಕೆಗಳಿಗೆ ತಕ್ಕ ಉತ್ತರ ಕೊಟ್ಟ ಲಕ್ಷ್ಮಣ ಸವದಿತಮ್ಮ ವಿರುದ್ಧದ ಟೀಕೆಗಳಿಗೆ ತಕ್ಕ ಉತ್ತರ ಕೊಟ್ಟ ಲಕ್ಷ್ಮಣ ಸವದಿ

ಒಂದು ವೇಳೆ ಅಂಗಾರ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳದೇ ಇದ್ದರೆ ಬಿಜೆಪಿ ವರಿಷ್ಠರ ವಿರುದ್ಧ ಸುಳ್ಯಾ ಮತ್ತು ಕಾಸರಗೋಡು ಗಡಿನಾಡು ಕನ್ನಡಿಗರೊಂದಿಗೆ ಉಗ್ರ ಹೋರಾಟ ಅನಿವಾರ್ಯವಾಗುತ್ತದೆ ಎಂದು ರಾಜ್ಯಾಧ್ಯಕ್ಷ ಪ್ರೊ.ಬಿ.ಕೆ.ರಾ. ರಾವ್ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.

Followers demand cabinet post for BJP MLA S Angara

ಆರು ಬಾರಿ ಬಿಜೆಪಿಯಿಂದ ಆರಿಸಿ ಬಂದಿರುವ ಎಸ್.ಅಂಗಾರ ಅವರಿಗೆ ಸಚಿವ ಸ್ಥಾನ ಸಿಗುವ ಗಟ್ಟಿ ನಿರೀಕ್ಷೆ ಇತ್ತು. ಆದರೆ ಅದು ಸುಳ್ಳಾಗಿದೆ. ಅಂಗಾರ ಅವರು ಈ ಬಗ್ಗೆ ಬಹಿರಂಗವಾಗಿ ಅಸಮಾಧಾನ ಹೊರ ಹಾಕದಿದ್ದರೂ ಸಹ ಅವರ ಬೆಂಬಲಿಗರಿಗೆ ಇದು ಬೇಸರ ಮೂಡಿಸಿದೆ.

ಹೆಚ್ಚಿದ ಅಸಮಾಧಾನ: ಹೈಕಮಾಂಡ್‌ನಿಂದ ಬಂತು ಖಡಕ್ ಆದೇಶಹೆಚ್ಚಿದ ಅಸಮಾಧಾನ: ಹೈಕಮಾಂಡ್‌ನಿಂದ ಬಂತು ಖಡಕ್ ಆದೇಶ

ಬಿಜೆಪಿಯ ಭದ್ರ ಕೋಟೆ ಕರಾವಳಿಯನ್ನು ಸಂಪುಟ ವಿಸ್ತರಣೆ ಸಮಯ ಬಿಜೆಪಿಯು ನಿರ್ಲಕ್ಷ್ಯ ಮಾಡಿದೆ ಎಂದು ಕರಾವಳಿ ಬಿಜೆಪಿ ಮುಖಂಡರು ಸಹ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

English summary
BJP senior MLA S Angara followers demand their MLA must be given minster post. They warn of protest against BJP if not minister post given.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X