ಸಿಟಿ ರೈಲು ನಿಲ್ದಾಣದ ಬಳಿ ಪಾದಚಾರಿ ಸೇತುವೆ ಶೀಘ್ರ ಬಳಕೆಗೆ
ಬೆಂಗಳೂರು, ಜು.4: ನಗರದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣ ಹಾಗೂ ಮೆಟ್ರೋ ನಿಲ್ದಾಣದ ನಡುವಿನ ಪಾದಚಾರಿ ಮಾರ್ಗ ಕಾಮಗಾರಿ ಪೂರ್ಣಗೊಂಡಿದ್ದು ಉದ್ಘಾಟನೆಗೆ ಸಿದ್ಧವಾಗಿದೆ.
ಸಿಟಿ ರೈಲು ನಿಲ್ದಾಣ ಹಾಗೂ ಮೆಟ್ರೋ ನಿಲ್ದಾಣಗಳನ್ನು ಸಂಪರ್ಕಿಸುವ ಪಾದಚಾರಿ ಸೇತುವೆ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು, ಇದೇ ತಿಂಗಳಲ್ಲಿ ಅಥವಾ ಮುಂದಿನ ತಿಂಗಳಲ್ಲಿ ಉದ್ಘಾಟನೆಯಾಗುವ ಸಾಧ್ಯತೆ ಇದೆ. ಭಾರತೀಯ ರೈಲ್ವೆ ಇಲಾಖೆ ಹಾಗೂ ಬಿಎಂಆರ್ಸಿಎಲ್ ನಡುವೆ ಸಮನ್ವಯ ಕೊರತೆಯಿಂದ ಹಾಗೂ ತಾಂತ್ರಿಕ ಅಡಚಣೆಯಿಂದ ಕಾಮಗಾರಿ ಆಮೆಗತಿಯಲ್ಲಿ ಸಾಗಿತ್ತು.
ಮೆಟ್ರೋ ಆರು ಬೋಗಿ ರೈಲಿನ ಸೇವೆ ಆರಂಭವಾದರೂ ಒಂದು ಸಾರಿಗೆಯಿಂದ ಮತ್ತೊಂದು ಸಾರಿಗೆಯ ನಡುವಿನ ಸಂಪರ್ಕವನ್ನು ಅಭಿವೃದ್ಧಿಪಡಿಸಲು ಸಾಧ್ಯವಾಗುತ್ತಿಲ್ಲ ಎಂಬ ಮಾತುಗಳೂ ಕೇಳಿಬರುತ್ತಿದೆ. ಜೂನ್ನಲ್ಲೇ ಸೇತುವೆ ಉದ್ಘಾಟನೆಗೊಳ್ಳಬೇಕಿತ್ತು.

ಆದರೆ ಮೆಟ್ಟಿಲಿನ ಕಾಮಗಾರಿ ಬಾಕಿಯಾಗಿದ್ದರಿಂದ ಉದ್ಘಾಟನೆ ಸಾಧ್ಯವಾಗಿಲ್ಲ , ಈ ಕಾಮಗಾರಿಯನ್ನು ಬೇಗನೆ ಮುಗಿಸಿ ಜುಲೈ ಅಂತ್ಯದಲ್ಲಿ ಅಥವಾ ಆಗಸ್ಟ್ ನಲ್ಲಿ ಜನಸಂಚಾರಕ್ಕೆ ಮುಕ್ತಗೊಳಿಸುವ ಗುರಿ ಹೊಂದಲಾಗಿದೆ.
ಮೆಟ್ರೋ ನಿಲ್ದಾಣದಿಂದ ಹೊರ ಬಂದು ಕೆಎಸ್ಆರ್ ನಿಲ್ದಾಣ ತಲುಪಲು 450 ಮೀಟರ್ ಉದ್ದದ ಕಚ್ಛಾರಸ್ತೆಯಲ್ಲಿ ನಡೆಯಬೇಕು.
ಅಲ್ಲಿ ಮೆಟ್ಟಿಲು ಹತ್ತಿ ಕೆಎಸ್ಆರ್ ರೈಲು ನಿಲ್ದಾಣದ ಸ್ಕೈವಾಕ್ ಏರಬೇಕು. ಈ ಸ್ಕೈವಾಕ್ ಪ್ಲಾಟ್ಫಾರಂ 10ಕ್ಕೆ ಸಂಪರ್ಕ ಕಲ್ಪಿಸುತ್ತದೆ. 250 ಮೀಟರ್ ಉದ್ದದ ಸೇತುವೆ ಶೇ.90ರಷ್ಟು ಕಾಮಗಾರಿ ಪೂರ್ಣಗೊಂಡಿದೆ.
-
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Karnataka Heatwave: ಕಲಬರಗಿಯಲ್ಲಿ 44 ಡಿಸೆ ತಾಪಮಾನ, 12 ಜಿಲ್ಲೆಗಳಿಗೆ ಮಹತ್ವದ ಎಚ್ಚರಿಕೆ: ಐಎಂಡಿ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ












Click it and Unblock the Notifications