ಯಶವಂತಪುರ ರೈಲು ನಿಲ್ದಾಣ, ನಮ್ಮ ಮೆಟ್ರೋ ಸಂಪರ್ಕಿಸಲು ಫ್ಲೈ ಓವರ್
ಬೆಂಗಳೂರು, ಡಿಸೆಂಬರ್ 16 : ಯಶವಂತಪುರ ರೈಲು ನಿಲ್ದಾಣ ಬೆಂಗಳೂರು ನಗರದ ಹೆಚ್ಚು ಜನಸಂದಣಿ ಇರುವ 2ನೇ ನಿಲ್ದಾಣವಾಗಿದೆ. ರೈಲ್ವೆ ನಿಲ್ದಾಣದ ಸಮೀಪವೇ ಈಗ ನಮ್ಮ ಮೆಟ್ರೋ ರೈಲು ಸಂಚಾರ ನಡೆಸುತ್ತಿದೆ.
ರೈಲ್ವೆ ನಿಲ್ದಾಣದಿಂದ ನಮ್ಮ ಮೆಟ್ರೋ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸಲು ಫ್ಲೈ ಓವರ್ ನಿರ್ಮಾಣ ಮಾಡಲಾಗುತ್ತಿದೆ. ಇದರಿಂದಾಗಿ ಜನರು ರಾಷ್ಟ್ರೀಯ ಹೆದ್ದಾರಿಯನ್ನು ದಾಟಿ ಹರಸಾಹಸ ಪಟ್ಟು ಮೆಟ್ರೋ ನಿಲ್ದಾಣ ತಲುಪುವುದುದಕ್ಕೆ ತಡೆ ಬೀಳಲಿದೆ.
ಯಶವಂತಪುರ ರೈಲು ನಿಲ್ದಾಣದ ಮುಖ್ಯ ದ್ವಾರದಿಂದ ನಮ್ಮ ಮೆಟ್ರೋ ನಿಲ್ದಾಣಕ್ಕೆ ಸಂಪರ್ಕಿಸಲು ಪಾದಚಾರಿ ಮೇಲ್ಸೆತುವೆ ನಿರ್ಮಾಣ ಮಾಡಲಾಗುತ್ತದೆ. ರೈಲ್ವೆ ನಿಲ್ದಾಣದಿಂದ ಮೆಟ್ರೋ ನಿಲ್ದಾಣ ಸುಮಾರು 2 ಕಿ.ಮೀ. ದೂರದಲ್ಲಿದೆ.

ಬಿಎಂಆರ್ಸಿಎಲ್ ಫ್ಲೈ ಓವರ್ ನಿರ್ಮಾಣ ಮಾಡಲಿದ್ದು, ನೈಋತ್ಯ ರೈಲ್ವೆ ಸೇತುವೆ ನಿರ್ಮಾಣ ಮಾಡಲು ಒಪ್ಪಿಗೆ ನೀಡಿದೆ. 2014ರಲ್ಲಿ ನಮ್ಮ ಮೆಟ್ರೋ ಸೇವೆ ಯಶವಂತಪುರ ಮಾರ್ಗದಲ್ಲಿ ಆರಂಭವಾಗಿದ್ದು, 5 ವರ್ಷಗಳ ಬಳಿಕ ಪಾದಚಾರಿ ಮಾರ್ಗ ನಿರ್ಮಾಣ ಮಾಡಲಾಗುತ್ತಿದೆ.
ಫ್ಲೈ ಓವರ್ ಬಂದು ಸೇರುವ ಜಾಗದಲ್ಲಿ ಫ್ಲಾಟ್ ಫಾರ್ಮ್ ಟಿಕೆಟ್ ಕೌಂಟರ್ ನಿರ್ಮಾಣ ಮಾಡಬೇಕು ಎಂದು ಪ್ರಯಾಣಿಕರು ಒತ್ತಾಯಿಸುತ್ತಿದ್ದಾರೆ. ಸೇತುವೆ ನಿರ್ಮಾಣ ಮಾಡಲು ಎಷ್ಟು ವೆಚ್ಚವಾಗಲಿದೆ? ಎಂಬುದು ಇನ್ನೂ ಅಂತಿಮಗೊಂಡಿಲ್ಲ.
ಪ್ರತಿನಿತ್ಯ ಸುಮಾರು 1 ಲಕ್ಷ ಪ್ರಯಾಣಿಕರು ಯಶವಂತಪುರ ರೈಲು ನಿಲ್ದಾಣಕ್ಕೆ ಭೇಟಿ ನೀಡುತ್ತಾರೆ.ರೈಲು ನಿಲ್ದಾಣ ಹಲವು ಮೂಲ ಸೌಕರ್ಯಗಳ ಕೊರತೆ ಎದುರಿಸುತ್ತಿತ್ತು. ಈಗ 2 ಹಂತದಲ್ಲಿ ನಿಲ್ದಾಣವನ್ನು ಅಭಿವೃದ್ಧಿ ಮಾಡಲಾಗುತ್ತಿದೆ.
ಮೊದಲ ಹಂತದಲ್ಲಿ 15 ಕೋಟಿ ವೆಚ್ಚದಲ್ಲಿ ವಿಮಾನ ನಿಲ್ದಾಣ ಮಾದರಿಯ ಪ್ರವೇಶ ದ್ವಾರವನ್ನು ನಿರ್ಮಿಸಲಾಗುತ್ತಿದೆ. ಆಟೋ, ಕ್ಯಾಬ್, ಬೈಕ್ಗಳಿಗೆ ಪ್ರತ್ಯೇಕ ಪಾರ್ಕಿಂಗ್ ವ್ಯವಸ್ಥೆಯನ್ನು ಮಾಡಲಾಗುತ್ತಿದೆ.
-
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು












Click it and Unblock the Notifications