ಹಿಂದಿ ಹೇರಲು ಹೊರಟ ಬೆಂಗಳೂರು ಐಐಎಂ ವಿರುದ್ಧ ಪ್ರತಿಭಟನೆ
ಬೆಂಗಳೂರು, ಫೆಬ್ರವರಿ 01: ಬ್ಯಾಂಕು, ರೈಲ್ವೆ ನಿಲ್ದಾಣ, ಮೆಟ್ರೊ, ಅಂಚೆ ಕಚೇರಿ ಎಲ್ಲೆಡೆ ಆದ ಮೇಲೆ ಈಗ ಕಾಲೇಜುಗಳಲ್ಲೂ ಹಿಂದಿ ಹೇರಲು ಪ್ರಯತ್ನಿಸಲಾಗುತ್ತಿದೆ. ಆದರೆ ಇದನ್ನು ವಿದ್ಯಾರ್ಥಿಗಳೇ ವಿರೋಧಿಸುತ್ತಿದ್ದಾರೆ.
ನಗರದ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೆಜ್ಮೆಂಟ್ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಅಲ್ಲಿನ ಆಡಳಿತ ಮಂಡಳಿ ಹಿಂದಿಯಲ್ಲಿ ಹೆಸರು ಬರೆದು ಕೊಡುವಂತೆ ಕೇಳಿದೆ. ಅಂಕಪಟ್ಟಿಯಲ್ಲಿ ವಿದ್ಯಾರ್ಥಿಗಳ ಮಾಹಿತಿಯನ್ನು ಹಿಂದಿಯಲ್ಲಿ ಮುದ್ರಿಸುವ ಉದ್ದೇಶದಿಂದ ಹೀಗೆ ಕೇಳಲಾಗಿತ್ತಂತೆ ಆದರೆ ಅದಕ್ಕೆ ವಿದ್ಯಾರ್ಥಿಗಳು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಜನವರಿ 29ರಂದು ಕಾಲೇಜು ವಿದ್ಯಾರ್ಥಿಗಳಿಗೆ ಇ-ಮೇಲ್ ಮಾಡಿದ್ದ ಕಾಲೇಜು ಆಡಳಿತ, ವಿದ್ಯಾರ್ಥಿಗಳು ತಮ್ಮ ಹೆಸರುಗಳನ್ನು ಹಿಂದಿಯಲ್ಲಿ ಬುಧವಾರದ ಒಳಗೆ ಬರೆದು ಮೇಲ್ ಮಾಡುವಂತೆ ಕೇಳಿತ್ತು, ಹೆಸರುಗಳನ್ನು ಅಂಕಪಟ್ಟಿಯಲ್ಲಿ ನಮೂದಿಸುವ ಕಾರಣ ಸರಿಯಾಗಿ ಬರೆದುಕೊಡುವಂತೆ ಸೂಚಿಸಿತ್ತು' ಈ ಮೇಲ್ ಕ್ಯಾಂಪಸ್ನಲ್ಲಿ ಚರ್ಚೆ ಹುಟ್ಟುಹಾಕಿದೆ.

ವಿದ್ಯಾರ್ಥಿಗಳು ಕಾಲೇಜು ಆಡಳಿತ ಮಂಡಳಿಯ ನಿರ್ಧಾರಕ್ಕೆ ವಿರೋಧ ವ್ಯಕ್ತಪಡಿಸಿದ್ದು, ನಾವು ಓದು ಮುಗಿಸಿ ಅರ್ಜಿಯನ್ನು ಹಿಂದಿಯಲ್ಲಿ ಹಾಕುತ್ತೇವೆಯೇ. ಹಿಂದಿ ಹೆಸರು ಹೊಂದಿದ ಮಾರ್ಕ್ಸ್ ಕಾರ್ಡ್ ಇಟ್ಟುಕೊಂಡು ಹೊರ ದೇಶದ ಕಂಪೆನಿಗಳಲ್ಲಿ ಕೆಲಸಕ್ಕೆ ಅರ್ಜಿ ಹಾಕುವುದು ಹೇಗೆ? ಎಂದು ವಿದ್ಯಾರ್ಥಿಗಳು ಆಡಳಿತವನ್ನು ಪ್ರಶ್ನಿಸಿದ್ದಾರೆ.
ಕಾಲೇಜು ಆಡಳಿತ ಮಂಡಳಿಯು, 'ಅಂಕಪಟ್ಟಿಯು ಇಂಗ್ಲಿಷ್ ಮತ್ತು ಹಿಂದಿ ಎರಡೂ ಭಾಷೆಯಲ್ಲಿ ಇರಲಿದೆ ಎಂದು ಸಮಜಾಯಿಷಿ ನೀಡಿದೆ'. ಆದರೆ ಇದಕ್ಕೂ ವಿದ್ಯಾರ್ಥಿಗಳು ಆಕ್ಷೇಪ ವ್ಯಕ್ತಪಡಿಸಿದ್ದು, ಹಾಗೆ ಮಾಡುವುದಿದ್ದರೆ ಇಂಗ್ಲಿಷ್ ಜೊತೆಗೆ ನಮ್ಮ ಪ್ರಾದೇಶಿಕ ಭಾಷೆಯಲ್ಲೆ ನಮ್ಮ ಹೆಸರು ಮುದ್ರಿಸಿ ಎಂದು ಪಟ್ಟು ಹಿಡಿದಿದ್ದಾರೆ.
ಈಗ ವಿಷಯ ಕ್ಯಾಂಪಸ್ ಬಿಟ್ಟು ಹೊರಗೆ ಬಂದಿದ್ದು, ಹಲವು ಕನ್ನಡ ಪರ ಸಂಘಟನೆಗಳ ಕಿವಿಗೂ ಬಿದ್ದಿದೆ. ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣದಲ್ಲಿಯೂ ಈ ಬಗ್ಗೆ ಧ್ವನಿ ಎತ್ತಿದ್ದು, ಆಡಳಿತ ಮಂಡಳಿ ಇನ್ನಾದರೂ ಬುದ್ಧಿ ಕಲಿಯುತ್ತದೆಯೊ ನೋಡಬೇಕು.
-
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ












Click it and Unblock the Notifications