Get Updates
Get notified of breaking news, exclusive insights, and must-see stories!

ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಹೊಸ ಕಟ್ಟಡ; ವಿಶೇಷತೆಗಳು

ಬೆಂಗಳೂರು, ನವೆಂಬರ್ 27 : ಬೆಂಗಳೂರಿನ ಮಡಿವಾಳದಲ್ಲಿ ನೂತನವಾಗಿ ನಿರ್ಮಾಣ ಮಾಡಲಾಗಿರುವ ನ್ಯಾಯ ವಿಜ್ಞಾನ ಪ್ರಯೋಗಾಲಯವನ್ನು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಉದ್ಘಾಟಿಸಿದ್ದಾರೆ. ಅತ್ಯಾಧುನಿಕ ತಂತ್ರಜ್ಞಾನಗಳನ್ನು ಪ್ರಯೋಗಾಲಯ ಒಳಗೊಂಡಿದೆ.

ಶುಕ್ರವಾರ ಬಿಟಿಎಂ ಲೇಔಟ್ ಲೇಔಟ್ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಮಡಿವಾಳದಲ್ಲಿ ನೂತನವಾಗಿ ನಿರ್ಮಿಸಿರುವ ನ್ಯಾಯ ವಿಜ್ಞಾನ ಪ್ರಯೋಗಾಲಯ ಲೋಕಾರ್ಪಣೆ ಮಾಡಲಾಯಿತು. ಗೃಹ ಸಚಿವ ಬಸವರಾಜ ಬೊಮ್ಮಾಯಿ, ಶಾಸಕ ರಾಮಲಿಂಗಾ ರೆಡ್ಡಿ ಮುಂತಾದವರು ಉಪಸ್ಥಿತರಿದ್ದರು.

2019ರ ಮೇ ತಿಂಗಳಿನಲ್ಲಿ ನೂತನ ಕಟ್ಟಡ ಕಾಮಗಾರಿಯನ್ನು ಆರಂಭಿಸಲಾಗಿತ್ತು. ಸುಮಾರು 25 ಕೋಟಿ ರೂ. ವೆಚ್ಚದ ಕಾಮಗಾರಿಯನ್ನು ಕೇವಲ 18 ತಿಂಗಳಿನಲ್ಲಿ ಪೂರ್ಣಗೊಳಿಸಲಾಗಿದೆ. ಪೊಲೀಸ್ ಸಮುದಾಯ ಭವನದ ನಿರ್ಮಾಣಕ್ಕೂ ಶಂಕು ಸ್ಥಾಪನೆ ಮಾಡಲಾಗಿದೆ.

Forensic Lab New Building Inaugurated

ನೂತನ ಕಟ್ಟಡದಲ್ಲಿ ಡಿಎನ್‌ಎ, ನಾರ್ಕೊಟಿಕ್, ಸೈಬರ್, ಕೆಮಿಕಲ್, ಬ್ಯಾಲಸ್ಟಿಕ್‌ಗೆ ಪ್ರತ್ಯೇಕ ಪ್ರಯೋಗಾಲಯಗಳಿವೆ. ಸುಳ್ಳುಪತ್ತೆ ಪರೀಕ್ಷೆಗಾಗಿ ಇರುವ ಪ್ರಯೋಗಾಲಯವೂ ಇದರ ಆವರಣದಲ್ಲಿಯೇ ಇದೆ. ಸೈಬರ್ ಅಪರಾಧಗಳನ್ನು ಪತ್ತೆ ಹಚ್ಚಲು ಮೊಬೈಲ್, ಆಡಿಯೋ, ವಿಡಿಯೋ ವಿಭಾಗವನ್ನು ಸ್ಥಾಪಿಸಲಾಗಿದೆ.

Forensic Lab New Building Inaugurated

ಎರಡು ಮಹಡಿಗಳ ಕಟ್ಟಡದಲ್ಲಿ ವಿವಿಧ 10 ಪ್ರಯೋಗಾಲಯ ಇದೆ. ಹೊಸ ಕಟ್ಟಡ ಮತ್ತು ನೂತನ ತಂತ್ರಜ್ಞಾನದಿಂದಾಗಿ ವಿಧಿ ವಿಜ್ಞಾನ ಪ್ರಯೋಗಾಲಯದಲ್ಲಿ ಬಾಕಿ ಉಳಿದಿರುವ ಪ್ರಕರಣಗಳ ಶೀಘ್ರ ವಿಲೇವಾರಿ ಆಗುವ ವಿಶ್ವಾಸವಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+