ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಹೊಸ ಕಟ್ಟಡ; ವಿಶೇಷತೆಗಳು
ಬೆಂಗಳೂರು, ನವೆಂಬರ್ 27 : ಬೆಂಗಳೂರಿನ ಮಡಿವಾಳದಲ್ಲಿ ನೂತನವಾಗಿ ನಿರ್ಮಾಣ ಮಾಡಲಾಗಿರುವ ನ್ಯಾಯ ವಿಜ್ಞಾನ ಪ್ರಯೋಗಾಲಯವನ್ನು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಉದ್ಘಾಟಿಸಿದ್ದಾರೆ. ಅತ್ಯಾಧುನಿಕ ತಂತ್ರಜ್ಞಾನಗಳನ್ನು ಪ್ರಯೋಗಾಲಯ ಒಳಗೊಂಡಿದೆ.
ಶುಕ್ರವಾರ ಬಿಟಿಎಂ ಲೇಔಟ್ ಲೇಔಟ್ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಮಡಿವಾಳದಲ್ಲಿ ನೂತನವಾಗಿ ನಿರ್ಮಿಸಿರುವ ನ್ಯಾಯ ವಿಜ್ಞಾನ ಪ್ರಯೋಗಾಲಯ ಲೋಕಾರ್ಪಣೆ ಮಾಡಲಾಯಿತು. ಗೃಹ ಸಚಿವ ಬಸವರಾಜ ಬೊಮ್ಮಾಯಿ, ಶಾಸಕ ರಾಮಲಿಂಗಾ ರೆಡ್ಡಿ ಮುಂತಾದವರು ಉಪಸ್ಥಿತರಿದ್ದರು.
2019ರ ಮೇ ತಿಂಗಳಿನಲ್ಲಿ ನೂತನ ಕಟ್ಟಡ ಕಾಮಗಾರಿಯನ್ನು ಆರಂಭಿಸಲಾಗಿತ್ತು. ಸುಮಾರು 25 ಕೋಟಿ ರೂ. ವೆಚ್ಚದ ಕಾಮಗಾರಿಯನ್ನು ಕೇವಲ 18 ತಿಂಗಳಿನಲ್ಲಿ ಪೂರ್ಣಗೊಳಿಸಲಾಗಿದೆ. ಪೊಲೀಸ್ ಸಮುದಾಯ ಭವನದ ನಿರ್ಮಾಣಕ್ಕೂ ಶಂಕು ಸ್ಥಾಪನೆ ಮಾಡಲಾಗಿದೆ.

ನೂತನ ಕಟ್ಟಡದಲ್ಲಿ ಡಿಎನ್ಎ, ನಾರ್ಕೊಟಿಕ್, ಸೈಬರ್, ಕೆಮಿಕಲ್, ಬ್ಯಾಲಸ್ಟಿಕ್ಗೆ ಪ್ರತ್ಯೇಕ ಪ್ರಯೋಗಾಲಯಗಳಿವೆ. ಸುಳ್ಳುಪತ್ತೆ ಪರೀಕ್ಷೆಗಾಗಿ ಇರುವ ಪ್ರಯೋಗಾಲಯವೂ ಇದರ ಆವರಣದಲ್ಲಿಯೇ ಇದೆ. ಸೈಬರ್ ಅಪರಾಧಗಳನ್ನು ಪತ್ತೆ ಹಚ್ಚಲು ಮೊಬೈಲ್, ಆಡಿಯೋ, ವಿಡಿಯೋ ವಿಭಾಗವನ್ನು ಸ್ಥಾಪಿಸಲಾಗಿದೆ.

ಎರಡು ಮಹಡಿಗಳ ಕಟ್ಟಡದಲ್ಲಿ ವಿವಿಧ 10 ಪ್ರಯೋಗಾಲಯ ಇದೆ. ಹೊಸ ಕಟ್ಟಡ ಮತ್ತು ನೂತನ ತಂತ್ರಜ್ಞಾನದಿಂದಾಗಿ ವಿಧಿ ವಿಜ್ಞಾನ ಪ್ರಯೋಗಾಲಯದಲ್ಲಿ ಬಾಕಿ ಉಳಿದಿರುವ ಪ್ರಕರಣಗಳ ಶೀಘ್ರ ವಿಲೇವಾರಿ ಆಗುವ ವಿಶ್ವಾಸವಿದೆ.
Hon’ble CM in the presence of HM inaugurated state of art State Forensic Lab at Madivala. It’s equipped with DNA, Narcotic, Cyber, chemical & Ballastic labs. A major step in the direction of scientific investigations. pic.twitter.com/a9udKvFcut
— DGP KARNATAKA (@DgpKarnataka) November 27, 2020
-
Karnataka Weather: ಕಲಬುರಗಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ 39 ಡಿಗ್ರಿ ದಾಟಿದ ತಾಪಮಾನ -
ಬಳ್ಳಾರಿ ಹಾಸ್ಟೆಲ್ ಹಲ್ಲೆ ಪ್ರಕರಣ: ತಲೆಮರೆಸಿಕೊಂಡಿದ್ದ ಅಪ್ರಾಪ್ತ ಆರೋಪಿ ಪೊಲೀಸ್ ವಶಕ್ಕೆ -
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ












Click it and Unblock the Notifications