ಗೌರಿ-ಕಲ್ಬುರ್ಗಿ ಹತ್ಯೆಗೆ ಒಂದೇ ಪಿಸ್ತೂಲು ಬಳಕೆ, ಎಸ್ ಐಟಿಯಿಂದ ಖಾತ್ರಿ
ಬೆಂಗಳೂರು, ಜೂನ್ 8 : ಪತ್ರಕರ್ತೆ ಗೌರಿ ಲಂಕೇಶ್ ಹಾಗೂ ಚಿಂತಕ ಎಂ.ಎಂ.ಕಲ್ಬುರ್ಗಿ ಇಬ್ಬರೂ ಹತ್ಯೆಯಾಗಿದ್ದು ಒಂದೇ ಪಿಸ್ತೂಲಿನಿಂದ ಎಂಬುದನ್ನು ಕರ್ನಾಟಕ ವಿಧಿವಿಜ್ಞಾನ ಪ್ರಯೋಗಾಲಯ ಖಾತ್ರಿ ಪಡಿಸಿದೆ ಎಂದು ವಿಶೇಷ ತನಿಖಾ ದಳದ ಮೂಲಗಳು ಪಿಟಿಐ ಸುದ್ದಿ ಸಂಸ್ಥೆಗೆ ತಿಳಿಸಿವೆ. ಎರಡೂ ಕೊಲೆಗಳ ಮಧ್ಯೆ ನಂಟಿದೆ ಎಂದು ಮೊದಲ ಬಾರಿಗೆ ಅಧಿಕೃತವಾಗಿ ಖಾತ್ರಿ ಪಟ್ಟಿದೆ.
ಎಪ್ಪತ್ತೇಳು ವರ್ಷದ ಕಲ್ಬುರ್ಗಿ ಧಾರವಾಡದ ಅವರ ಮನೆಯ ಬಳಿಯೇ ಮೂರು ವರ್ಷದ ಹಿಂದೆ ಹತ್ಯೆಯಾಗಿದ್ದರು. ಗೌರಿ ಲಂಕೇಶ್ ರ ಬೆಂಗಳೂರಿನ ರಾಜರಾಜೇಶ್ವರಿ ನಗರದ ಮನೆಯ ಬಳಿ ಕಳೆದ ವರ್ಷ ಸೆಪ್ಟೆಂಬರ್ ನಲ್ಲಿ ಕೊಲೆ ಮಾಡಲಾಗಿತ್ತು.
ಎರಡೂ ಪ್ರಕರಣದಲ್ಲಿ ಗುಂಡು ಹಾರಿಸಿರುವುದು ಒಂದೇ ಮಾದರಿ ನಾಡ ಪಿಸ್ತೂಲಿನಿಂದ ಎಂದು ವರದಿಗಳು ಹೇಳಿವೆ. ಈ ಬಗ್ಗೆ ಹಿಂದೆಯೇ ಚರ್ಚೆ ಆಗಿತ್ತು. ಆದರೆ ಮೊದಲ ಬಾರಿಗೆ ವಿಶೇಷ ತನಿಖಾ ದಳದ ಅಧಿಕಾರಿಗಳು ಅಧಿಕೃತವಾಗಿ ಖಾತ್ರಿ ಪಡಿಸಿದ್ದಾರೆ.

ಮದ್ದೂರಿನ ಕೆ.ಟಿ.ನವೀನ್ ಕುಮಾರ್ ನನ್ನು ಗೌರಿ ಲಂಕೇಶ್ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿ ಮಾಡಲಾಗಿದೆ. ಚಿಂತಕ ಪ್ರೊ.ಕೆ.ಎಸ್.ಭಗವಾನ್ ಹತ್ಯೆಗೆ ಕೂಡ ಸಂಚು ಮಾಡಲಾಗಿತ್ತು ಎಂಬುದನ್ನು ಆತ ಒಪ್ಪಿಕೊಂಡಿದ್ದಾನೆ.
ಇನ್ನು ಇದೀಗ ಸೆರೆ ಹಿಡಿದಿರುವ ಇತರ ಆರೋಪಿಗಳು ಹಾಗೂ ಸನಾತನ ಸಂಸ್ಥೆ ಜತೆಗೆ ನಂಟು ಇರುವ ಬಗ್ಗೆ ಚರ್ಚೆ ಆಗುತ್ತಿದೆ. ಆ ಸಂಸ್ಥೆಯನ್ನು ನಿಷೇಧಿಸಬೇಕು ಹಾಗೂ ಸನಾತನ ಸಂಸ್ಥೆಯ ಕಾರ್ಯಕ್ರಮಗಳನ್ನು ನಡೆಸಲು ಸ್ಥಳಾವಕಾಶ ನೀಡುತ್ತಿರುವ ಪ್ರಮುಖ ಸಮುದಾಯದ ಮಠಗಳು ಇನ್ನಾದರೂ ಅಂಥದ್ದಕ್ಕೆ ಅವಕಾಶ ನೀಡಬಾರದು ಎಂದು ಪ್ರಗತಿಪರ ಚಿಂತಕರು ಆಗ್ರಹಿಸಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications