Get Updates
Get notified of breaking news, exclusive insights, and must-see stories!

ಎಲೆಕ್ಟ್ರಾನಿಕ್ ಸಿಟಿಯಲ್ಲಿ ಚಿರತೆ ಲಾಕ್: ಐಟಿ ಕಂಪನಿಗಳ ಪಕ್ಕದಲ್ಲೇ ಅಬ್ಬರಿಸುತ್ತಿದ್ದ ವ್ಯಾಘ್ರ!

ಬೆಂಗಳೂರಿನ ಐಟಿ ತವರು ಎಲೆಕ್ಟ್ರಾನಿಕ್ ಸಿಟಿಯಲ್ಲಿ ಚಿರತೆ ಓಡಾಡುತ್ತಾ ಜನರಿಗೆ ತುಂಬಾ ಟೆನ್ಷನ್ ಆಗಿತ್ತು. ಅದರಲ್ಲೂ ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ಟೋಲ್ ಬಳಿಯೇ ಚಿರತೆಯ ಓಡಾಟ ಕಂಡು ಜನರು ಬೆಚ್ಚಿಬಿದ್ದಿದ್ದರು. ಯಾವಾಗ ಚಿರತೆ ಸೆರೆ ಹಿಡಿಯುತ್ತಾರೆ? ಎನ್ನುವ ಚಿಂತೆ ಕೂಡ ಕಾಡುತ್ತಿತ್ತು. ಅರಣ್ಯ ಇಲಾಖೆ ಕೂಡ ಎಲೆಕ್ಟ್ರಾನಿಕ್ ಸಿಟಿಯಲ್ಲಿ ಓಡಾಡುತ್ತಿರುವ ಚಿರತೆ ಸೆರೆ ಹಿಡಿಯಲು ಅಲರ್ಟ್ ಆಗಿತ್ತು. ಅದರಲ್ಲೂ ಎಲೆಕ್ಟ್ರಾನಿಕ್ ಸಿಟಿ ಭಾಗದ ಹೆಲಿಪ್ಯಾಡ್ ಸಮೀಪದಲ್ಲೇ ಆಘಾತಕಾರಿ ವಿಚಾರ ಒಂದು ಬಯಲಾಗಿದೆ!

ಎಲೆಕ್ಟ್ರಾನಿಕ್ ಸಿಟಿಯಲ್ಲಿ ಲಕ್ಷಾಂತರ ಕೋಟಿ ರೂಪಾಯಿ ಆದಾಯ ತರುವ ಕಂಪನಿಗಳು ಇವೆ. ಇನ್ಫೋಸಿಸ್, ವಿಪ್ರೋ, ಸಿಮೆನ್ಸ್, ಎಚ್‌ಸಿಎಲ್ ಹೀಗೆ ನೂರಾರು ಕಂಪನಿಗಳು ಎಲೆಕ್ಟ್ರಾನಿಕ್ ಸಿಟಿಯಲ್ಲಿ ಹುಟ್ಟಿಕೊಂಡಿವೆ. ಹೀಗಿದ್ದರೂ ಎಲೆಕ್ಟ್ರಾನಿಕ್ ಸಿಟಿ ಸುತ್ತಮುತ್ತಲ ಜಾಗದಲ್ಲಿ ಈಗ ಕೂಡ ಹಸಿರು, ಹಸಿರು ವಾತಾವರಣ ಇದೆ. ಬೆಂಗಳೂರಿನ ಹೊರ ವಲಯದ ಎಲೆಕ್ಟ್ರಾನಿಕ್ ಸಿಟಿಯಲ್ಲಿ ಖಾಲಿ ಜಾಗಗಳು ಸಾಕಷ್ಟು ಇವೆ. ಅದೇ ರೀತಿ ಎಲೆಕ್ಟ್ರಾನಿಕ್ ಸಿಟಿಯ ಹೆಲಿಪ್ಯಾಡ್ ಪ್ರದೇಶದಲ್ಲಿ ಸಾಕಷ್ಟು ಮರ & ಗಿಡ ತುಂಬಿ ಹೋಗಿವೆ. ಇದರ ಜೊತೆಗೆ ಪೊದೆಗಳು ಕೂಡ ಇವೆ. ಹೀಗೆ ಖಾಲಿ ಇದ್ದ ಜಾಗದಲ್ಲೇ ಚಿರತೆ ಒಂದು ಸೇರಿಕೊಂಡಿತ್ತು!

Forest Department Caught Leopard In Cage At Electronic City

ಹೆಲಿಕಾಪ್ಟರ್ ಇರುವ ಜಾಗದಲ್ಲಿ ಚಿರತೆ!

ಚಿರತೆ ಮೊದಲಿಗೆ ಆನೇಕಲ್‌ನ ಜಿಗಣಿ ಸಮೀಪದ ಕ್ಯಾಲಸನಹಳ್ಳಿಯ ಲೇಔಟ್ ಒಂದರ ಬಳಿ ಓಡಾಟ ನಡೆಸಿತ್ತು. ಹೀಗೆ ಲೇಔಟ್ ಬಳಿ ಚಿರತೆ ಓಡಾಡುತ್ತಿದೆ ಎಂಬುದು ಸಿಸಿ ಕ್ಯಾಮೆರಾದಲ್ಲಿ ಕೂಡ ರೆಕಾರ್ಡ್ ಆಗಿತ್ತು. ಅದೇ ಚಿರತೆ ಕೊನೆಗೆ ಎಲೆಕ್ಟ್ರಾನಿಕ್ ಸಿಟಿ ಪ್ರದೇಶಕ್ಕೂ ನುಗ್ಗಿಬಿಟ್ಟಿದೆ ಎನ್ನುವ ಮಾಹಿತಿ ಸಿಕ್ಕಿತ್ತು. ಯಾಕಂದ್ರೆ ಕೆಲವೇ ದಿನಗಳ ಹಿಂದೆ ಚಿರತೆ ಒಂದು ರೋಡ್‌ನಲ್ಲಿ ಓಡಾಟ ನಡೆಸಿದ್ದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ದಾಖಲಾಗಿತ್ತು. ಇದರ ಜಾಡನ್ನು ಹಿಡಿದ ಅರಣ್ಯ ಇಲಾಖೆ ಅಧಿಕಾರಿಗಳು, ಹುಡುಕಾಟ ನಡೆಸಿದ ಪರಿಣಾಮ ಇದೀಗ ಹೆಲಿಪ್ಯಾಡ್‌ನ ಪೊದೆಯಲ್ಲಿ ಚಿರತೆ ಬೋನಿಗೆ ಬಿದ್ದು ಲಾಕ್ ಆಗಿದೆ.

20 ವರ್ಷದಲ್ಲಿ ಕಾಡು ನಾಶ

ಬೆಂಗಳೂರು ದೊಡ್ಡದಾಗಿ ಬೆಳೆದಂತೆಲ್ಲಾ ಕಾಡು ನಾಶವಾಗುತ್ತಿದೆ. ಅದರಲ್ಲೂ ಈ ಮಹಾನಗರಿ ಬೆಂಗಳೂರು ಬೆಳೆಸಲು, ಕಳೆದ 20 ವರ್ಷಗಳಲ್ಲಿ ಬೆಂಗಳೂರು ಹೊರ ವಲಯದ ಕಾಡುಗಳನ್ನೂ ನಾಶ ಮಾಡಲಾಗಿದೆ. ಇದರ ಪರಿಣಾಮ ಕಾಡು ಪ್ರಾಣಿಗಳು ನಗರಕ್ಕೆ ಬಂದು ಕಾಟ ಕೊಡುತ್ತಿವೆ. ಕಳೆದ ಕೆಲವು ವರ್ಷಗಳಿಂದ ಹೀಗೆ ಚಿರತೆಗಳ ಹಾವಳಿಗೆ ಬೆಂಗಳೂರಿಗರು ಬೆಚ್ಚಿದ್ದಾರೆ. ಪರಿಸ್ಥಿತಿ ಕೈಮೀರಿದರೆ ಹೇಗಪ್ಪಾ ಎಂಬ ಚಿಂತೆಯಲ್ಲಿದ್ದಾರೆ ಕನ್ನಡಿಗರು. ಈ ಸಮಯದಲ್ಲಿ ನೇರವಾಗಿ ಚಿರತೆ ಎಲೆಕ್ಟ್ರಾನಿಕ್ ಸಿಟಿಗೆ ಎಂಟ್ರಿ ಕೊಟ್ಟು ಭಯವೂ ಮೂಡಿಸಿತ್ತು. ಆದರೆ ಇದೀಗ ಚಿರತೆ ಸೆರೆ ಹಿಡಿದು ಬನ್ನೇರುಘಟ್ಟಕ್ಕೆ ಕರೆದುಕೊಂಡು ಹೋಗಲಾಗಿದೆ.

ಚಿರತೆಗೆ ಬನ್ನೇರುಘಟ್ಟ ಜೈವಿಕ ಉದ್ಯಾನದಲ್ಲಿ ಚಿಕಿತ್ಸೆ ನೀಡಿದ ನಂತರ ಅದನ್ನು ಕಾಡಿಗೂ ಬಿಡುವ ಬಗ್ಗೆ ಅರಣ್ಯ ಇಲಾಖೆ ಅಧಿಕಾರಿಗಳು ಇದೀಗ ಚಿಂತನೆ ನಡೆಸಿದ್ದಾರೆ. ಮತ್ತೊಂದು ಕಡೆ ಎಲೆಕ್ಟ್ರಾನಿಕ್ ಸಿಟಿ ಸುತ್ತಮುತ್ತ ಇರುವ ಜನರು ನಿಟ್ಟುಸಿರು ಬಿಟ್ಟಿದ್ದಾರೆ. ಹಾಗೇ, ಚಿರತೆಗಳು ಮತ್ತೆ ಈ ಪ್ರದೇಶದ ಕಡೆಗೆ ಹೆಜ್ಜೆ ಇಡದಂತೆ ಕ್ರಮ ಕೈಗೊಳ್ಳಲು ಚಿಂತನೆ ನಡೆದಿದೆ. ಅಲ್ಲದೆ ಪೊದೆ ರೀತಿ ಇರುವ ಜಾಗಗಳನ್ನ ಸ್ವಚ್ಛಗೊಳಿಸುವ ಕಾರ್ಯ ಕೂಡ ಆರಂಭವಾಗಲಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+