ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರು ತೊರೆದ ಮಾಜಿ ಸಿಎಂ ಸಿದ್ದರಾಮಯ್ಯ!

|
Google Oneindia Kannada News

ಬೆಂಗಳೂರು, ಡಿಸೆಂಬರ್ 18: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಂದಿನ ನಾಲ್ಕೈದು ದಿನಗಳ ಕಾಲ ಬೆಂಗಳೂರಿನಿಂದ ಅನಾಮದೇಯ ಸ್ಥಳಕ್ಕೆ ತೆರಳಲಿದ್ದಾರೆ. ಕಳೆದ ವಾರ ಅವರು ಬೆಂಗಳೂರಿನ ವೇಗಾಸ್ ಆಸ್ಪತ್ರೆಯಲ್ಲಿ ಹೃದಯದ ಆಂಜಿಯೋಪ್ಲಾಸ್ಟಿ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡು ಸೋಮವಾರ ಮನೆ ಸೇರಿದ್ದರು.

ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿರುವ ಸಿದ್ದರಾಮಯ್ಯ ಅವರಿಗೆ ಇನ್ನೂ ಕೆಲಕಾಲ ವಿಶ್ರಾಂತಿಯನ್ನು ವೈದ್ಯರು ಸೂಚಿಸಿದ್ದರು. ಆದರೆ, ಅವರ ಅಭಿಮಾನಿಗಳು, ಬೆಂಬಲಿಗರು, ಹಿತೈಸಿಗಳು ಅವರನ್ನು ಭೇಟಿಯಾಗಲು ತಂಡೋಪತಂಡವಾಗಿ ಬರುತ್ತಿರುವುದರಿಂದ ಅವರಿಗೆ ಪೂರ್ಣ ಪ್ರಮಾಣದ ವಿಶ್ರಾಂತಿ ಸಿಗುತ್ತಿಲ್ಲ.

ಆಸ್ಪತ್ರೆಯಿಂದ ಮಾಜಿ ಸಿಎಂ ಸಿದ್ದರಾಮಯ್ಯ ಡಿಸ್ಚಾರ್ಜ್ಆಸ್ಪತ್ರೆಯಿಂದ ಮಾಜಿ ಸಿಎಂ ಸಿದ್ದರಾಮಯ್ಯ ಡಿಸ್ಚಾರ್ಜ್

ಅವರು ಬೆಂಗಳೂರು ತೊರೆದು ನಾಲ್ಕೈದು ದಿನ ಬೆಂಗಳೂರಿನಿಂದ ಹೊರಗಡೆ ಸಂಪೂರ್ಣ ವಿಶ್ರಾಂತಿ ಪಡೆಯಲಿದ್ದಾರೆ. ಹೀಗಾಗಿ ಸಿದ್ದರಾಮಯ್ಯ ಅವರು ಸಾರ್ವಜನಿಕರಿಗೆ ಮುಂದಿನ ನಾಲ್ಕು ದಿನ ಲಭ್ಯರಿರುವುದಿಲ್ಲ. ನಂತರ ಎಂದಿನಂತೆ ಭೇಟಿಯಾಗಲಿದ್ದಾರೆ ಎಂದು ಅವರ ಆಪ್ತಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Former Chief Minister Siddaramaiah Left Bengaluru For Rest

ವಿಶೇಷ ಕ್ಷಣ; ಟಗರು ಭೇಟಿಯಾದ ಹುಲಿಯ!

ಕಳೆದ ಹತ್ತು ದಿನಗಳ ಹಿಂದೆ ಸಿದ್ದರಾಮಯ್ಯ ಅವರಿಗೆ ಎದೆನೋವು ಕಾಣಿಸಿಕೊಂಡಿದ್ದರಿಂದ ಬೆಂಗಳೂರಿನ ವೇಗಾಸ್ ಆಸ್ಪತ್ರೆಗೆ ದಾಖಲಾಗಿದ್ದರು. ವೈದ್ಯರು, ಹೃದಯದ ಆಂಜಿಯೋಪ್ಲಾಸ್ಟಿ ಶಸ್ತ್ರಚಿಕಿತ್ಸೆಯನ್ನು ಸಿದ್ದರಾಮಯ್ಯ ಅವರಿಗೆ ಯಶಸ್ವಿಯಾಗಿ ಮಾಡಿದ್ದರು. ಅವರು ಅದೇ ಆಸ್ಪತ್ರೆಯಲ್ಲಿ ಒಂದು ವಾರ ವಿಶ್ರಾಂತಿ ಪಡೆದು ಸೋಮವಾರ ಮನೆಗೆ ತೆರಳಿದ್ದರು.

English summary
Former Chief Minister Siddaramaiah Left Bengaluru For Rest. Siddaramaiah not available for his followers and publics till 4 days.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X