ಸಿಎಎ ವಿರೋಧಿ ಹೋರಾಟಕ್ಕೆ ಹೊರ ದೇಶಗಳಿಂದ 120 ಕೋಟಿ ರೂ.
ಬೆಂಗಳೂರು, ಜ. 28: ಮಂಗಳೂರು ಪ್ರಕರಣದಲ್ಲಿ ಸಿಕ್ಕ ಮಿಣಿ ಮಿಣಿ ಪೌಡರ್ನ್ನು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ತಮ್ಮ ಮುಖಕ್ಕೆ ಹಚ್ಚಿಕೊಳ್ಳಲಿ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಎನ್. ರವಿಕುಮಾರ್ ಲೇವಡಿ ಮಾಡಿದ್ದಾರೆ.
ಮಲ್ಲೇಶ್ವರದ ರಾಜ್ಯ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ಮಾಡಿದ್ದಾರೆ. ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಬ್ ಪತ್ತೆ ಪ್ರಕರಣದಲ್ಲಿ ಪೊಲೀಸ್ ಇಲಾಖೆಯನ್ನು ಅಭಿನಂಧಿಸಬೇಕಿತ್ತು.
ಆದರೆ, ಕುಮಾರಸ್ವಾಮಿ ಅವರು ಪೊಲೀಸ್ ಅಧಿಕಾರಿಗಳನ್ನು ಲೇವಡಿ, ಟೀಕೆ ಮಾಡಿದ್ದಾರೆ. ತಮ್ಮ ಜವಾಬ್ದಾರಿ ಮರೆತು ಹೇಳಿಕೆ ಕೊಟ್ಟಿದ್ದಾರೆ. ಮಂಗಳೂರು ಬಾಂಬ್ ಪತ್ತೆ ಪ್ರಕರಣದಲ್ಲಿ ಅದು ಮಿಣಿ ಮಿಣಿ ಪೌಡರ್ ಅಂದರು. ಅದು ಪೌಡರ್ ಆಗಿದ್ದರೇ ಕುಮಾರಸ್ವಾಮಿ ಮುಖಕ್ಕೆ ಹಚ್ಚಿಕೊಳ್ಳಲು ಬಳಸಿಕೊಳ್ಳಲಿ ಎಂದು ರವಿಕುಮಾರ್ ಲೇವಡಿ ಮಾಡಿದ್ದಾರೆ.
ಆದಿತ್ಯ ರಾವ್ ಒಬ್ಬ ಉಗ್ರವಾದಿ ಎಂದ ರವಿಕುಮಾರ್, ಭಯೋತ್ಪಾದಕ ಸಂಘಟನೆಯಾಗಿದ್ದ ಸಿಮಿಯನ್ನು ನಿಷೇಧಿಸಿದ ಬಳಿಕ ಬಳಿಕ ಅದರ ಸದಸ್ಯರು ಈಗ ಎಸ್ಡಿಪಿಐ ರಚಿಸಿ ಕಾರ್ಯಚಟುವಟಿಕೆ ಮಾಡುತ್ತಿದ್ದಾರೆ. ಪಿಎಫ್ಐ ಮತ್ತು ಎಸ್ಡಿಪಿಐ ಸಂಘಟನೆಗಳ ನಿಷೇಧಕ್ಕೆ ರಾಷ್ಟ್ರಾದ್ಯಂತ ಒತ್ತಾಯ ಇದೆ. ಕೇಂದ್ರ ಸರ್ಕಾರಕ್ಕೆ ಪತ್ರ ಬರೆದು ನಿಷೇಧಕ್ಕೆ ಒತ್ತಾಯ ಮಾಡುತ್ತೇವೆ ಎಂದಿದ್ದಾರೆ.

ಎಸ್ಡಿಪಿಐ ಹಾಗೂ ಪಿಎಫ್ಐ ಸಂಘಟನೆಗಳಿಗೆ ಸಿಎಎ ವಿರೋಧಿಸಿ ಹೋರಾಟ ಮಾಡಲು ಹೊರದೇಶಗಳಿಂದ 120 ಕೋಟಿ ರೂ. ಗಳು ಬಂದಿದೆ. ಕಾಂಗ್ರೆಸ್ ಪಕ್ಷದ ನಾಯಕರಿಗೂ ಹಣ ಸಂದಾಯವಾಗಿದೆ. ಈ ಬಗ್ಗೆ ಸೂಕ್ತ ತನಿಖೆ ನಡೆಸಲು ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯುತ್ತೇನೆ ಎಂದು ಎನ್. ರವಿಕುಮಾರ್ ಹೇಳಿದ್ದಾರೆ.
-
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು












Click it and Unblock the Notifications