ಜಿಂದಾಲ್ಗೆ ಭೂಮಿ ಮಾರಾಟ ತಡೆ: "ಪಾಪದ ಫಲವನ್ನು ಬಿಜೆಪಿ ಅನುಭವಿಸುವಂತಾಗಿದೆ''
ಬೆಂಗಳೂರು, ಮೇ 28: ಜಿಂದಾಲ್ಗೆ ಭೂಮಿ ಮಾರಾಟ ಹಿಂದಕ್ಕೆ ಪಡೆದ ವಿಚಾರವಾಗಿ ಪ್ರತಿಕ್ರಿಯೆ ನೀಡಿರುವ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ, ಮಾಡಿದ ಪಾಪದ ಫಲವನ್ನು ಬಿಜೆಪಿ ಇಂದು ಅನುಭವಿಸುವಂತಾಗಿದೆ ಎಂದು ವ್ಯಂಗ್ಯವಾಡಿದ್ದಾರೆ.
ಟ್ವೀಟ್ ಮೂಲಕ ಬಿಜೆಪಿ ಸರ್ಕಾರವನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿರುವ ಮಾಜಿ ಸಿಎಂ ಎಚ್ಡಿಕೆ, ""ಜಿಂದಾಲ್ ಕಂಪನಿಗೆ 3667 ಎಕರೆ ಭೂಮಿ ನೀಡಲು ನಿರ್ಧರಿಸಿದ್ದ ಬಿಜೆಪಿ ಸರ್ಕಾರ ಈಗ ತನ್ನೊಳಗಿನ ಬಂಡಾಯದಿಂದ, ಅನಿವಾರ್ಯವಾಗಿ ಹಿಂದೆ ಸರಿದಿದೆ'' ಎಂದಿದ್ದಾರೆ.
ರಾಜಕೀಯ ಪಕ್ಷವೊಂದು ದ್ವಿಮುಖ ಧೋರಣೆಯ ರಾಜಕಾರಣ ಮಾಡಬಾರದು ಎಂಬುದಕ್ಕೆ ಜಿಂದಾಲ್ ಪ್ರಕರಣ ಒಂದು ನಿದರ್ಶನ. ಹಿಂದೆ ಮಾಡಿದ್ದರ ಪಾಪದ ಫಲವನ್ನು ಬಿಜೆಪಿ ಇಂದು ಅನುಭವಿಸುವಂತಾಗಿದೆ. ಆದರೆ, ನಷ್ಟ ಜಾಸ್ತಿಯೇ ಆಗಿದೆ ಎಂದು ಲೇವಡಿ ಮಾಡಿದ್ದಾರೆ.

ಜಿಂದಾಲ್ಗೆ ಲೀಸ್ ಕಂ ಸೇಲ್ ಆಧಾರದಲ್ಲಿ ಭೂಮಿ ನೀಡಲಾಗಿತ್ತು. ಲೀಸ್ ಅವಧಿ ಮುಗಿದಿದ್ದರಿಂದ ಕ್ರಯಪತ್ರ ಮಾಡಿಕೊಡಬೇಕಾಗಿತ್ತು. ಅಷ್ಟನ್ನು ಮಾತ್ರ ಮಾಡಲು ಮುಂದಾಗಿದ್ದ ನನ್ನ ಸರ್ಕಾರದ ವಿರುದ್ಧ ಯಡಿಯೂರಪ್ಪನವರು ಇಲ್ಲ ಸಲ್ಲದ ಆರೋಪ ಮಾಡಿದ್ದರು. ಆದರೆ ಈಗ? ಅವರು ಅಂದು ನನ್ನ ಮೇಲೆ ಮಾಡಿದ ಆರೋಪಗಳನ್ನೆಲ್ಲ ತಮ್ಮ ಮೇಲೆ ಹೊತ್ತುಕೊಳ್ಳುವಂಥಾಗಿದೆ ಎಂದು ಎಚ್ಡಿಕೆ ಹೇಳಿದ್ದಾರೆ.
Recommended Video
ವಿರೋಧಕ್ಕಾಗಿ ವಿರೋಧ ಮಾಡುವುದು, ವಿರೋಧ ಪಕ್ಷದಲ್ಲಿದ್ದಾಗ ವಿರೋಧಿಸಿದ್ದನ್ನೇ ಆಡಳಿತಕ್ಕೆ ಬಂದಾಗ ಕದ್ದು ಮುಚ್ಚಿ ಮಾಡುವುದು ಬಿಜೆಪಿಯ "ಸಂಸ್ಕೃತಿ'. ಬಿಜೆಪಿ ಪಾಲಿಸಿಕೊಂಡು ಬಂದ ಈ ಸಂಸ್ಕೃತಿ ಇಂದು ಅವರಿಗೆ ತಿರುಗುಬಾಣವಾಗಿದೆ. ನಾವು ಮಾಡಿದ ಕರ್ಮಗಳು ನಮ್ಮನ್ನು ಹಿಂಬಾಲಿಸಿಕೊಂಡು ಬಂದು ಪಾಠ ಕಲಿಸುತ್ತವೆ ಎಂಬುದಕ್ಕೆ ಜಿಂದಾಲ್ ಸಾಕ್ಷಿ ಎಂದು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಬಿಜೆಪಿ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications