ಸರ್ಕಾರದ ನಿರ್ಲಕ್ಷ್ಯಕ್ಕೆ KSTDC ಕ್ಯಾಬ್ ಚಾಲಕ ಸಾವು: ಎಚ್ಡಿಕೆ ಆರೋಪ
ಬೆಂಗಳೂರು, ಮಾರ್ಚ್ 31: ಬಾಡಿಗೆ ದೊರೆಯದೆ ಖಿನ್ನತೆಗೆ ಒಳಗಾಗಿ ಬೆಂಗಳೂರಿನ ಕೆಂಪೇಗೌಡ ಏರ್ಪೋರ್ಟ್ನಲ್ಲಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ಟ್ಯಾಕ್ಸಿ ಚಾಲಕ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ.
ಈ ಕುರಿತು ಟ್ವೀಟ್ ಮಾಡಿರುವ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ, "ಬಾಡಿಗೆ ದೊರೆಯದೆ ಆರ್ಥಿಕ ಸಂಕಷ್ಟಕ್ಕೀಡಾಗಿದ್ದ ಕೆಎಸ್ಟಿಡಿಸಿ ಕ್ಯಾಬ್ ಚಾಲಕ ಪ್ರತಾಪ್ ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಂಗಳವಾರ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರು. ಮಂಗಳವಾರ ಮಧ್ಯರಾತ್ರಿ ಅವರು ಕೊನೆಯುಸಿರೆಳೆದಿದ್ದಾರೆ. ಪ್ರತಾಪ್ ಅವರ ಸಾವಿನೊಂದಿಗೆ ಕೆಎಸ್ಟಿಡಿಸಿ ಚಾಲಕರ ಹಲವು ಸಮಸ್ಯೆಗಳು ತೆರೆದುಕೊಂಡಿವೆ'' ಎಂದಿದ್ದಾರೆ.

ಕ್ಯಾಬ್ ಉದ್ಯಮದ ದರ ಸಮರ, ಸರ್ಕಾರದ ನಿರ್ಲಕ್ಷ್ಯಕ್ಕೆ ಪ್ರತಾಪ್ ಜೀವ ಬಲಿಯಾಗಿದ್ದು, ಟ್ಯಾಕ್ಸಿ, ಕ್ಯಾಬ್ಗಳಿಗೆ ಸರ್ಕಾರ 1 ಕಿ.ಮೀಗೆ 24 ರೂ. ದರ ನಿಗದಿ ಮಾಡಿದೆ. ಕೆಎಸ್ಟಿಡಿಸಿ ಚಾಲಕರು ಇದನ್ನು ಪಾಲಿಸುತ್ತಿದ್ದಾರೆ. ಆದರೆ, ಖಾಸಗಿ ಕಂಪನಿಗಳು ನಿಯಮ ಗಾಳಿಗೆ ತೂರಿ ಗ್ರಾಹಕರನ್ನು ಆಕರ್ಷಿಸುತ್ತಿವೆ. ಇತ್ತ ಕೆಎಸ್ಟಿಡಿಸಿ ಕ್ಯಾಬ್ ಚಾಲಕರು ಸೊರಗುತ್ತಿದ್ದಾರೆ ಎಂದು ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.

ಕೆಎಸ್ಟಿಡಿಸಿ ಕ್ಯಾಬ್ಗಳು ದರ ನಿಯಮ ಪಾಲಿಸುತ್ತಿದ್ದರೆ, ಖಾಸಗಿ ಕ್ಯಾಬ್ಗಳು 9 ರೂ.ಗೆ ಗ್ರಾಹಕರನ್ನು ಸೆಳೆಯುತ್ತಿವೆ. ಹೀಗಾಗಿ ಕೆಎಸ್ಟಿಡಿಸಿ ಕ್ಯಾಬ್ಗಳಿಗೆ ಗ್ರಾಹಕರೇ ಇಲ್ಲದಂತಾಗಿದೆ. ಚಾಲಕರು ಸಮಸ್ಯೆಗೆ ಸಿಲುಕಿದ್ದಾರೆ. ಇದರ ಜೊತೆಗೆ ವಿಮಾನ ನಿಲ್ದಾಣದ ಪಾರ್ಕಿಂಗ್ನಲ್ಲೂ ನಡೆಯುತ್ತಿರುವ ರಾಜಕೀಯವು ಚಾಲಕರ ಕತ್ತು ಹಿಸುಕುವಂತಿವೆ ಎಂದು ಆರೋಪಿಸಿದ್ದಾರೆ.

Recommended Video
ರಾಜ್ಯ ಸರ್ಕಾರ ಕೂಡಲೇ ದರ ಸಮರದತ್ತ ಗಮನಹರಿಸಬೇಕು. ನಿಯಮ ಪಾಲಿಸದೇ ಮಾರುಕಟ್ಟೆಯಲ್ಲಿ ಅನಗತ್ಯ ಪೈಪೋಟಿ ಸೃಷ್ಟಿ ಮಾಡುತ್ತಿರುವ, ಆ ಮೂಲಕ ಅಮಾಯಕ ಚಾಲಕರ ಪ್ರಾಣ ಕಸಿಯುತ್ತಿರುವ ಖಾಸಗಿ ಕಂಪನಿಗಳಿಗೆ ಎಚ್ಚರಿಕೆ ನೀಡಬೇಕು. ಅದರ ಮೂಲಕ ಅಮಾಯಕ, ಶ್ರಮಜೀವಿ ಕ್ಯಾಬ್ ಚಾಲಕರ ರಕ್ಷಣೆಗೆ ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಆಗ್ರಹಿಸಿದ್ದಾರೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications