ಮಾಜಿ ಸಂಸದೆ ತೇಜಸ್ವಿನಿ ಗೌಡ ಬಿಜೆಪಿಗೆ ಸೇರ್ಪಡೆ
ಬೆಂಗಳೂರು, ಮಾ.12: ಕಾಂಗ್ರೆಸ್ ಮಾಜಿ ಸಂಸದೆ ತೇಜಸ್ವಿನಿ ಗೌಡ ಅವರು ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ನಗರದ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಅಧಿಕೃತವಾಗಿ ಪಕ್ಷದ ಸೇರಿದ್ದಾರೆ. ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಬಿಜೆಪಿ ಅಧ್ಯಕ್ಷ ಪ್ರಹ್ಲಾದ್ ಜೋಶಿ, ಮಾಜಿ ಸಚಿವ ಆರ್ ಆಶೋಕ್, ಶಾಸಕ ಸಿ.ಟಿ ರವಿ, ನಿರ್ಮಲ್ ಕುಮಾರ್ ಸುರಾನಾ ಮುಂತಾದ ಬಿಜೆಪಿ ಮುಖಂಡರು ತೇಜಸ್ವಿನಿ ಅವರನ್ನು ಸ್ವಾಗತಿಸಿದರು.
ತೇಜಸ್ವಿನಿ ಶ್ರೀರಮೇಶ್ ಅವರು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ಸ್ಪರ್ಧಿಸಲು ಸಾಕಷ್ಟು ಕಸರತ್ತು ನಡೆಸಿ ವಿಫಲರಾಗಿದ್ದರು. ಬೆಂಗಳೂರು ಗ್ರಾಮಾಂತರಕ್ಕೆ ಹಾಲಿ ಸಂಸದ ಡಿಕೆ ಸುರೇಶ್ ಅವರು ಕಾಯಂ ಆಗಿದ್ದು, ಬೆಂಗಳೂರು ದಕ್ಷಿಣದಿಂದ ನಂದನ್ ನಿಲೇಕಣಿ ಅವರ ಹೆಸರು ಘೋಷಣೆ ಹಿನ್ನೆಲೆಯಲ್ಲಿ ತಮಗೆ ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್ ದಕ್ಕದು ಎಂಬ ಲೆಕ್ಕಾಚಾರದಲ್ಲಿ ತೇಜಸ್ವಿನಿ ಶ್ರೀರಮೇಶ್, ಅನಿವಾರ್ಯವಾಗಿ ಅನ್ಯ ಪಕ್ಷಗಳತ್ತ ಮುಖ ಮಾಡುವಂತಾಗಿದೆ.

'ಮಾಜಿ ಕಾಂಗ್ರೆಸ್ ಸಂಸದೆ ತೇಜಸ್ವಿನಿ ರಮೇಶ್ ಬಿಜೆಪಿ ಸೇರುವ ಕುರಿತಂತೆ ಈಗಾಗಲೇ ಮಾತುಕತೆ ನಡೆಸಿದ್ದಾರೆ. ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳಲು ನಾಯಕರು ಕೂಡ ಒಪ್ಪಿಗೆ ನೀಡಿದ್ದಾರೆ' ಎಂದು ಸದಾನಂದಗೌಡ ಈ ಮುಂಚೆ ಹೇಳಿದ್ದನ್ನು ಇಲ್ಲಿ ಸ್ಮರಿಸಬಹುದು. ಇದು ಒಕ್ಕಲಿಗ ಮತಗಳನ್ನು ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಸೆಳೆಯಲು ಸಹಕಾರಿಯಾಗಬಹುದಾಗಿದೆ ಎಣಿಕೆ ಬಿಜೆಪಿಯದ್ದಾಗಿದೆ.
2004ರಲ್ಲಿ ಬೆಂಗಳೂರಿನ ಕನಕಪುರ ಲೋಕಸಭಾ ಕ್ಷೇತ್ರದಲ್ಲಿ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರನ್ನು 1.22 ಕ್ಕೂ ಅಧಿಕ ಮತಗಳ ಅಂತರದಿಂದ ಸೋಲಿಸಿ ಸಂಸತ್ತು ಪ್ರವೇಶಿಸುವ ಮೂಲಕ ತೇಜಸ್ವಿನಿ ಅವರು ರಾಜಕೀಯವಾಗಿ ಗುರುತಿಸಿಕೊಂಡರು. ಇದಕ್ಕೂ ಮುನ್ನ ಉದಯ ಟಿವಿಯಲ್ಲಿ ನಿರೂಪಕಿ, ಸುದ್ದಿ ವಿಶ್ಲೇಷಕಿಯಾಗಿ ಕಾರ್ಯನಿರ್ವಹಿಸಿದ್ದರು.
ಕನಕಪುರದಲ್ಲಿ ಡಿಕೆ ಶಿವಕುಮಾರ್ ಹಾಗೂ ಅವರ ಬೆಂಬಲಿಗರು ಗೂಂಡಾಗಿರಿ ಮಾಡುತ್ತಿದ್ದಾರೆ ನನ್ನ ಬೆಂಬಲಿಗರ ಮೇಲೆ ಹಲ್ಲೆ ಮಾಡಿದ್ದಾರೆ. ನನಗೆ ಪ್ರತಿ ಸಾರಿ ಟಿಕೆಟ್ ತಪ್ಪುವಂತೆ ಮಾಡುವಲ್ಲಿ ಡಿಕೆ ಶಿವಕುಮಾರ್ ಅವರ ಕೈವಾಡವಿದೆ ತೇಜಸ್ವಿನಿ ಗೌಡ ಆರೋಪಿಸಿದ್ದನ್ನು ಇಲ್ಲಿ ಸ್ಮರಿಸಬಹುದು.ತೇಜಸ್ವಿನಿ ಗೌಡ ಅವರನ್ನು ಕಾಂಗ್ರೆಸ್ ನಿಂದ ಬಿಜೆಪಿಗೆ ಕರೆ ತರುವಲ್ಲಿ ಮಾಜಿ ಮುಖ್ಯಮಂತ್ರಿ ಸದಾನಂದ ಗೌಡ ಅವರ ಪಾತ್ರ ಹಿರಿದಾಗಿದೆ.
'ರಾಜಕಾರಣದಲ್ಲಿ ನೈತಿಕತೆ ಉಳಿದಿಲ್ಲ. ಇಲ್ಲಿ ಹಣವಿಲ್ಲದೆ ರಾಜಕಾರಣ ನಡೆಸಲು ಸಾಧ್ಯವೇ ಇಲ್ಲ. ಒಂದು ಎಂಪಿ ಸೀಟು ಗೆಲ್ಲಬೇಕು ಎಂದರೆ 20 ಕೋಟಿ ರೂ. ಬೇಕು. ಇದನ್ನು ಗಾಂಧೀಜಿ, ಅಂಬೇಡ್ಕರ್, ನಮ್ಮ ಪಕ್ಷದ ಅಧ್ಯಕ್ಷೆ ಸೋನಿಯಾಗಾಂಧಿ ಅವರ ಮೇಲೆ ಪ್ರಮಾಣ ಮಾಡಿ ಹೇಳಲೂ ಸಿದ್ಧ'' ಎಂದು ತೇಜಸ್ವಿನಿ ಈ ಹಿಂದೆ ಘೋಷಿಸಿದ್ದರು.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications