ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಭಜರಂಗ ದಳದ ಮಾಜಿ ಸಂಚಾಲಕ ಮಹೇಂದ್ರ ಕುಮಾರ್ ನಿಧನ

|
Google Oneindia Kannada News

ಬೆಂಗಳೂರು, ಏಪ್ರಿಲ್ 25: ಭಜರಂಗ ದಳದ ಮಾಜಿ ಸಂಚಾಲಕ ಮಹೇಂದ್ರ ಕುಮಾರ್ ನಿಧನರಾಗಿದ್ದಾರೆ. ಇಂದು ಬೆಳಗಿನ ಜಾವ 5 ಗಂಟೆ ಸುಮಾರಿಗೆ ಹೃದಯಾಘಾತದಿಂದ ಬೆಂಗಳೂರಿನ ಎಂ.ಎಸ್.ರಾಮಯ್ಯ ಆಸ್ಪತ್ರೆಯಲ್ಲಿ ಮಹೇಂದ್ರ ಕುಮಾರ್ ವಿಧಿವಶರಾಗಿದ್ದಾರೆ.

Recommended Video

ಮಂಡ್ಯದಲ್ಲಿ ಕೊರೊನ ಪರೀಕ್ಷೆ ವೇಳೆ ಪತ್ರಕರ್ತರ ಮೇಲೆ ಹಲ್ಲೆ , ಸಚಿವ ಡಾ. ನಾರಾಯಣಗೌಡ ಪ್ರತಿಕ್ರಿಯೆ

ಚಿಕ್ಕಮಗಳೂರಿನ ಕೊಪ್ಪ ಮೂಲದ ಮಹೇಂದ್ರ ಕುಮಾರ್ ಸದ್ಯ ಬೆಂಗಳೂರಿನಲ್ಲೇ ನೆಲೆಸಿದ್ದರು.

ಭಜರಂಗ ದಳದ ರಾಜ್ಯ ಸಂಚಾಲಕರಾಗಿದ್ದ ಮಹೇಂದ್ರ ಕುಮಾರ್, 2008 ರಲ್ಲಿ ಕ್ರೈಸ್ತ ಪ್ರಾರ್ಥನಾ ಮಂದಿರಗಳ ಮೇಲೆ ದಾಳಿ ನಡೆಸಿದ ಸಂಬಂಧ ಬಂಧನಕ್ಕೊಳಗಾಗಿದ್ದರು. ಬಳಿಕ ಅದೇ ಪ್ರಕರಣದಲ್ಲಿ ಅವರನ್ನು ದೋಷಮುಕ್ತಗೊಳಿಸಲಾಗಿತ್ತು.

former-convener-of-bajrang-dal-mahendra-kumar-passes-away

2008 ರ ಅಕ್ಟೋಬರ್ 1 ರಂದು ಭಜರಂಗ ದಳಕ್ಕೆ ರಾಜೀನಾಮೆ ನೀಡಿದ ಮಹೇಂದ್ರ ಕುಮಾರ್, 2011 ಫೆಬ್ರವರಿ 21 ರಂದು ಜೆಡಿಎಸ್ ಸೇರಿದ್ದರು. ಸಂಘ ಪರಿವಾರ ಕಟು ಟೀಕಾಕಾರರಾಗಿ ಸಾಮಾಜಿಕ, ಜಾಗೃತಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಮಹೇಂದ್ರ ಕುಮಾರ್ ಭಾಗವಹಿಸುತ್ತಿದ್ದರು.

'ನಮ್ಮ ಧ್ವನಿ' ಎಂಬ ಯೂಟ್ಯೂಬ್ ಚಾನೆಲ್ ಪ್ರಾರಂಭಿಸಿದ್ದ ಮಹೇಂದ್ರ ಕುಮಾರ್, ಸಮಾಜದ ಪರ ದನಿಯಾಗಿದ್ದರು. ಕೇಂದ್ರ ಸರ್ಕಾರರ ಸಿಎಎ ಕಾಯ್ದೆ ವಿರುದ್ಧವೂ ಪ್ರತಿಭಟನೆ ನಡೆಸಿದ್ದರು.

English summary
Former Convener of Bajrang Dal Mahendra Kumar passes away.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X