ನಾರಾಯಣ ಹೆಲ್ತ್ ಸಿಟಿ ಟ್ರೆಡ್ ಮಿಲ್ ಮೇಲೆ ಮಾಜಿ ಕ್ರಿಕೆಟರ್ ವಾಕಿಂಗ್
ಬೆಂಗಳೂರು, ಏಪ್ರಿಲ್ 26: ರೋಗಿಗಳಿಗೆ ವಿಶ್ವದರ್ಜೆಯ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ನಾರಾಯಣ ಹೆಲ್ತ್ ಸಿಟಿ ತನ್ನ ಆವರಣದಲ್ಲಿ ವಿಶೇಷವಾದ ಸಮಗ್ರ ಪುನರ್ವಸತಿ ಕೇಂದ್ರವನ್ನು ಆರಂಭಿಸಿದೆ. ಈ ಕೇಂದ್ರವನ್ನು ಮಾಜಿ ಭಾರತೀಯ ಕ್ರಿಕೆಟ್ ಪಟು ಬಿ.ಕೆ.ವೆಂಕಟೇಶ್ ಪ್ರಸಾದ್ ಮತ್ತು ನಾರಾಯಣ ಹೆಲ್ತ್ ನ ಅಧ್ಯಕ್ಷರು & ಆಡಳಿತ ನಿರ್ದೇಶಕರಾದ ಡಾ.ದೇವಿಪ್ರಸಾದ್ ಶೆಟ್ಟಿ ಉದ್ಘಾಟಿಸಿದರು.
ಅತ್ಯಾಧುನಿಕ ತಂತ್ರಜ್ಞಾನ ಮತ್ತು ಅನುಭವಿ ವಿಶೇಷ ತಜ್ಞರನ್ನು ಒಳಗೊಂಡ ಈ ಕೇಂದ್ರವು ತೀವ್ರತರ ವೈದ್ಯಕೀಯ ಸ್ಥಿತಿಗಳಿಂದ ಬಳಲುತ್ತಿರುವ ರೋಗಿಗಳಿಗೆ ಮತ್ತು ಶಸ್ತ್ರಚಿಕಿತ್ಸೆಯಾಗಿ ಚೇತರಿಸಿಕೊಳ್ಳುತ್ತಿರುವ ರೋಗಿಗಳಿಗೆ ಸಮಗ್ರ ಪುನರ್ವಸತಿ ಚಿಕಿತ್ಸೆಗಳನ್ನು ಒದಗಿಸಲಿದೆ. ಈ ಅತ್ಯಾಧುನಿಕ ಕೇಂದ್ರವು ವರ್ಚುವಲ್ ರಿಯಾಲಿಟಿ ತಂತ್ರಜ್ಞಾನವನ್ನು ಅಳವಡಿಸಿಕೊಂಡು, ಅಸ್ವಸ್ಥತೆಯನ್ನು ತಿಳಿದುಕೊಂಡು ಚಿಕಿತ್ಸೆಯ ಸಮತೋಲನವನ್ನು ಸಾಧಿಸಲು ನೆರವಾಗುತ್ತದೆ. ಈ ಕೇಂದ್ರವು ಅತ್ಯಾಧುನಿಕ ಕಂಪ್ಯೂಟರ್ ನಿರ್ದೆಶಿತ ಚಲನೆ ಪುನರ್ವಸತಿ ಸೌಲಭ್ಯವನ್ನು ಕೂಡಾ ಹೊಂದಿರುತ್ತದೆ.

ಈ ಸಮಗ್ರ ಕೇಂದ್ರವು, ಬೆನ್ನು ನೋವು, ಮೊಣಕಾಲು ನೋವು, ಕತ್ತು ನೋವು, ಎಲುಬು ಸವೆತ, ನರರೋಗ, ಶಸ್ತ್ರಚಿಕಿತ್ಸೆ ಬಳಿಕದ ಪುನರ್ವಸತಿ, ಭುಜದ ನೋವು, ಜಾರಿದ ಬೆನ್ನು ತಟ್ಟೆ (ಸ್ಲಿಪ್ಡ್ ಡಿಸ್ಕ್), ಕಶೇರುಕವ್ಯಾಧಿ (ಸ್ಪಾಂಡಿಲೈಟಿಸ್) ಮತ್ತು ಕ್ರೀಡಾ ಗಾಯಗಳಿಗೆ ಸೂಕ್ತ ಚಿಕಿತ್ಸೆಯನ್ನು ಒದಗಿಸುತ್ತದೆ. ಮಾಂಸಖಂಡ ಮತ್ತು ಅಸ್ಥಿಪಂಜರ ಸಮಸ್ಯೆ, ಚಲನಾ ಸಮಸ್ಯೆ ಮತ್ತು ಕೀಲು ಬದಲಾವಣೆ ರೋಗಿಗಳಿಗೆ (ಸೊಂಟ, ಮೊಣಕಾಲು, ಭುಜಗಳು, ಇತ್ಯಾದಿ) ಗಳಿಗೆ ಸೂಕ್ತ ತರಬೇತಿಯನ್ನು ಕೂಡಾ ಒದಗಿಸುತ್ತದೆ. ಕ್ರಿಯಾತ್ಮಕ ವಿದ್ಯುತ್ ಪ್ರಚೋದನೆ (ಫಂಕ್ಷನಲ್ ಎಲೆಕ್ಟ್ರಿಕಲ್ ಸ್ಟಿಮ್ಯುಲೇಶನ್ ಸೌಲಭ್ಯ (ಎಫ್ಇಎಸ್), ಮಕ್ಕಳ ನರಸಮಸ್ಯೆ ಪುನರ್ವಸತಿ ಮತ್ತು ಯೋಗ ಚಿಕಿತ್ಸೆಗಳನ್ನು ಕೂಡಾ ಈ ಅತ್ಯಾಧುನಿಕ ಪುನರ್ವಸತಿ ಕೇಂದ್ರದಲ್ಲಿ ನೀಡಲಾಗುತ್ತದೆ.

ಬೆಂಗಳೂರು ನಾರಾಯಣ ಹೆಲ್ತ್ ಸಿಟಿ ಬಗ್ಗೆ
ನಾರಾಯಣ ಹೆಲ್ತ್ ಸಿಟಿ ಬೆಂಗಳೂರಿನ ಬೊಮ್ಮಸಂದ್ರದಲ್ಲಿದ್ದು, ಇದರಲ್ಲಿ ಹೃದ್ರೋಗ ಮತ್ತು ಹೃದಯ ಶಸ್ತ್ರಚಿಕಿತ್ಸೆಯ ಸೂಪರ್ಸ್ಪೆಷಾಲಿಟಿ ಆಸ್ಪತ್ರೆಯಾದ ನಾರಾಯಣ ಹೃದ್ರೋಗ ಸಂಸ್ಥೆ, ಕ್ಯಾನ್ಸರ್ ಚಿಕಿತ್ಸೆ, ನರರೋಗ ಮತ್ತು ನರಶಸ್ತ್ರಚಿಕಿತ್ಸೆ, ಮೂತ್ರರೋಗ, ಮೂತ್ರಶಾಸ್ತ್ರ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಾದ ಮಜೂಂದರ್ ಶಾ ವೈದ್ಯಕೀಯ ಕೇಂದ್ರ (ಎಂಎಸ್ಎಂಸಿ)ಯನ್ನು ಹೊಂದಿದೆ. ಬಹುಶಃ ದೇಶದಲ್ಲೇ ಅತಿ ದೊಡ್ಡದು ಎನ್ನಲಾದ ಅಸ್ಥಿಮಜ್ಜೆ ಕಸಿ ಕೇಂದ್ರವನ್ನೂ ಹೊಂದಿದೆ. ನಾರಾಯಣ ಹೆಲ್ತ್ ಸಿಟಿ ಅಂಗಾಂಶ ಕಸಿ ಬ್ಯಾಂಕನ್ನು ಸಹಾ ನಿರ್ವಹಿಸುತ್ತಿದೆ.
-
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
IPL 2026: ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ











Click it and Unblock the Notifications