ಮತದಾನದ ಜಾಗೃತಿ ಮೂಡಿಸಿದ ದ್ರಾವಿಡ್ ಗೆ ಮತದಾನದ ಹಕ್ಕಿಲ್ಲ
ಬೆಂಗಳೂರು, ಏಪ್ರಿಲ್ 14: ಟೀಂ ಇಂಡಿಯಾದ ಮಾಜಿ ನಾಯಕ, ಕರ್ನಾಟಕ ಚುನಾವಣೆ ಆಯೋಗದ ಐಕಾನ್ ಮತ್ತು ರಾಯಭಾರಿಯಾಗಿದ್ದ ರಾಹುಲ್ದ್ರಾವಿಡ್ ಅವರು ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಮತದಾನ ಮಾಡಲು ಸಾಧ್ಯವಾಗದಂಥ ಪರಿಸ್ಥಿತಿ ಎದುರಾಗಿದೆ. ಇಂದಿರಾನಗರ ನಿವಾಸಿಗಳಾಗಿದ್ದ ದ್ರಾವಿಡ್ ಅವರ ಕುಟುಂಬಕ್ಕೂ ಕೂಡ ಮತದಾನದ ಹಕ್ಕು ಕೈತಪ್ಪಿದೆ.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ಏಪ್ರಿಲ್ 18ರಂದು ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಮತದಾನ ಮಾಡಬೇಕಿರುವ ದ್ರಾವಿಡ್ ಕುಟುಂಬದವರ ಹೆಸರು ಮತದಾನದ ಪಟ್ಟಿಯಿಂದ ಡಿಲೀಟ್ ಆಗಿದ್ದು, ಮತ್ತೆ ಸೇರಿಸಲು ಆಗದಂಥ ಪರಿಸ್ಥಿತಿ ಎದುರಾಗಿದೆ.

ಏನು ಕಾರಣ: ಇಂದಿರಾನಗರದಲ್ಲಿದ್ದ ರಾಹುಲ್ ಕುಟುಂಬ ಈಗ ಅಶ್ವತ್ಥ್ನಗರದ ನಿವಾಸಿಗಳಾಗಿದ್ದಾರೆ. ವಿಳಾಸ ಬದಲಾವಣೆಗಾಗಿ ಮತದಾರರ ಪಟ್ಟಿಗೆ ಹೆಸರನ್ನು ಸೇರಿಸಲು ಸರಿಯಾದ ವೇಳೆಗೆ ಫಾರ್ಮ್ 6 ಅನ್ನು ಸಲ್ಲಿಸಬೇಕಿತ್ತು. ಆದರೆ, ನಿಗದಿತ ವೇಳೆಯಲ್ಲಿ ಅರ್ಜಿ ಸಲ್ಲಿಸದ ಕಾರಣ ಮತದಾನ ಪಟ್ಟಿಯಿಂದ ರಾಹುಲ್ ದ್ರಾವಿಡ್ ಹೆಸರು ಮತ್ತೆ ಸೇರ್ಪಡೆಯಾಗಿಲ್ಲ.
ಬೆಂಗಳೂರಿನ ಸೆಂಟ್ರಲ್ ಲೋಕಸಭಾ ಕ್ಷೇತ್ರದ ಶಾಂತಿನಗರ ವಿಧಾನಸಭಾ ವಿಭಾಗದ ಇಂದಿರಾನಗರದ 12ನೇ ಮುಖ್ಯರಸ್ತೆ ನಿವಾಸಿಯಾಗಿದ್ದರು. ಅಶ್ವಥ್ ನಗರಕ್ಕೆ ಮನೆ ಶಿಫ್ಟ್ ಆದ ಬಳಿಕ ದ್ರಾವಿಡ್ ಸಹೋದರ ವಿಜಯ್ ಫಾರ್ಮ್ 7ನ್ನು ಇಂದಿರಾನಗರದ ಮತದಾನದ ಅಧಿಕಾರಿಗಳಿಗೆ ನೀಡಿದ್ದರು.
ನಂತರ ಇಂದಿರಾನಗರದ ಮತದಾರರ ಪಟ್ಟಿಯಿಂದ ದ್ರಾವಿಡ್ ಕುಟುಂಬದ ಹೆಸರನ್ನು ಅಳಿಸಲಾಗಿದೆ. ಮಾ. 16ರೊಳಗೆ ಮತದಾರರ ಹೆಸರು ಸೇರಿಸಲು ಅರ್ಜಿ ಸಲ್ಲಿಸಲು ಸೂಚಿಸಲಾಗಿತ್ತು ಆದರೆ, ನಿಗದಿತ ವೇಳೆಯಲ್ಲಿ ವಿಳಾಸ ಬದಲಾವಣೆ ಅರ್ಜಿ ಸಲ್ಲಿಸಿಲ್ಲ ಎಂದು ದೊಮ್ಮಲೂರು ವಿಭಾಗದ ಅಧಿಕಾರಿ ಹೇಳಿದ್ದಾರೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications