ಆಮ್ ಆದ್ಮಿಪಕ್ಷಕ್ಕೆ ಕುಮಾರಸ್ವಾಮಿ ಆಪ್ತ ಉದ್ಯಮಿ ನಾಗಣ್ಣ ಸೇರಿದ್ದೇಕೆ?
ಬೆಂಗಳೂರು ಡಿ.1: ಜೆಡಿಎಸ್ (ಜಾತ್ಯಾತೀತ ಜನತಾದಳ) ಪಕ್ಷದ ಪ್ರಧಾನ ಕಾರ್ಯದರ್ಶಿಗಳಾಗಿದ್ದ ಮಾಜಿ ಮುಖ್ಯಮಂತ್ರಿ ಎಚ್. ಡಿ ಕುಮಾರಸ್ವಾಮಿ ಅವರ ಆಪ್ತರಾಗಿದ್ದ ಉದ್ಯಮಿ ನಾಗಣ್ಣ ಸೇರಿದಂತೆ ಹಲವಾರು ಮಂದಿ ಇತ್ತೀಚೆಗೆ ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಉದ್ಯಮಿ ನಾಗಣ್ಣ ಅವರ ನೇತೃತ್ವದಲ್ಲಿ ಪ್ರಸಿದ್ದ ಲೆಕ್ಕಪರಿಶೋಧಕ ಮುರೂರು ರಾಜೇಂದ್ರ ಕುಮಾರ್ ಹಾಗೂ ವಿವಿಧ ಕ್ಷೇತ್ರಗಳ ಮುಖಂಡರು ಆಮ್ ಆದ್ಮಿ ಪಕ್ಷ ಸೇರ್ಪಡೆಗೊಂಡಿದ್ದಾರೆ.
ಅರವಿಂದ ಕೇಜ್ರಿವಾಲ್ ಅವರ ನೇತೃತ್ವದ ದೆಹಲಿಯ ಆಮ್ ಆದ್ಮಿ ಪಕ್ಷ ತಂದಿರುವ ಕ್ರಾಂತಿಕಾರಕ ಬದಲಾವಣೆಗಳನ್ನು ಬೆಂಗಳೂರಿಗೂ ತರುವ ಒತ್ತಾಸೆಯನ್ನು ಇಟ್ಟುಕೊಂಡು ಅನೇಕ ಕ್ಷೇತ್ರಗಳ ಪ್ರಮುಖರು, ವಿವಿಧ ಪಕ್ಷಗಳ ನಾಯಕರು ಆಮ್ ಆದ್ಮಿ ಪಕ್ಷ ಸೇರ್ಪಡೆಯಾಗುತ್ತಿದ್ದಾರೆ ಎಂದು ಆಮ್ ಆದ್ಮಿ ಪಕ್ಷದ ರಾಜ್ಯ ಸಂಚಾಲಕರಾದ ಪೃಥ್ವಿ ರೆಡ್ಡಿ ಹೇಳಿದರು. ಈ ಸಂದರ್ಭದಲ್ಲಿ ಬೆಂಗಳೂರು ನಗರ ಘಟಕದ ಅಧ್ಯಕ್ಷ ಮೋಹನ್ ದಾಸರಿ, ರಾಜ್ಯ ಉಪಾಧ್ಯಕ್ಷ ಸುರೇಶ್ ರಾಥೋಡ್, ಉಸ್ತುವಾರಿ ರೋಮಿ ಬಾಟಿ ಉಪಸ್ಥಿತರಿದ್ದರು.
ಆಮ್ ಆದ್ಮಿ ಪಕ್ಷದ ರಾಜ್ಯ ಸಂಚಾಲಕರಾದ ಪೃಥ್ವಿ ರೆಡ್ಡಿ ಮಾತನಾಡಿ, ಆಮ್ ಆದ್ಮಿ ಪಕ್ಷ ರಾಜ್ಯದಲ್ಲಿ ಹಾಗೂ ಬೆಂಗಳೂರು ನಗರದಲ್ಲಿ ಅತ್ಯುತ್ತಮ ವಾದ ಬೆಂಬಲಗಳಿಸುತ್ತಿದೆ. ನಾಗಣ್ಣ ಅವರಂತಹ ವ್ಯಕ್ತಿಗಳು ಪಕ್ಷಕ್ಕೆ ಸೇರ್ಪಡೆ ಆಗುವ ಮೂಲಕ ಭ್ರಷ್ಟಾಚಾರದ ವಿರುದ್ದ ದ್ವನಿ ಎತ್ತು ಪಕ್ಷಕ್ಕೆ ಇನ್ನಷ್ಟು ಬಲವನ್ನು ತುಂಬಿದ್ದಾರೆ ಎಂದು ಹೇಳಿದರು.

ಬೆಂಗಳೂರು ಘಟಕ ಆಮ್ ಆದ್ಮಿ ಪಕ್ಷದ ಮೋಹನ್ ದಾಸರಿ ಮಾತನಾಡಿ, 198 ವಾರ್ಡ್ಗಳಲ್ಲೂ ಆಪ್ ಸ್ಪರ್ಧೆಗೆ ಇಳಿಯಲಿದೆ. ಕೆ.ಬಿ ನಾಗಣ್ಣ ಅವರ ಸೇರ್ಪಡೆಯಿಂದ ಪಕ್ಷಕ್ಕೆ ಬಲ ಬಂದಿದೆ ಎಂದರು.

ಕೆ.ಬಿ ನಾಗಣ್ಣ ಮಾತನಾಡಿ, ಮೊದಲಿನಿಂದಲೂ ನಾವು ಭ್ರಷ್ಟಾಚಾರದ ವಿರುದ್ದ ಹೋರಾಡುತ್ತಾ ಬಂದಿದ್ದೇನೆ. ಭ್ರಷ್ಟಾಚಾರದ ವಿರುದ್ದ ಹೋರಾಟ ಮಾಡುವ ಮೂಲಕ ನಾವು ಮುಂದಿನ ಪೀಳಿಗೆಗೆ ಯಾವುದಾದರೂ ಕೊಡುಗೆಯನ್ನು ನೀಡಬೇಕು ಎನ್ನುವ ಉದ್ದೇಶದಿಂದ ಪಕ್ಷಕ್ಕೆ ಸೇರ್ಪಡೆ ಆಗುತ್ತಿದ್ದೇನೆ. ಒಬ್ಬ ವ್ಯಕ್ತಿ ರಾಜಕೀಯ ಅನುಭವ ಇಲ್ಲದೆ ರಾಜಕೀಯ ಪಕ್ಷದ ಸೃಷ್ಟಿ ಮಾಡಿ ಇಂತಹ ವ್ಯವಸ್ಥೆಯ ಬದಲಾವಣೆ ಮಾಢಿದ್ದಾರೆ ಅರವಿಂದ ಕೇಜ್ರಿವಾಲ್. ಇಂತಹ ಆಡಳಿತ ದೇಶದ ಎಲ್ಲಡೆ ಸಾಧ್ಯವಿದ್ದು, ಬದಲಾವಣೆಯನ್ನು ತರುವ ಉದ್ದೇಶದಿಂದ ಪಕ್ಷಕ್ಕೆ ಸೇರ್ಪಡೆ ಆಗಿದ್ದೇನೆ ಎಂದು ಹೇಳಿದರು.
-
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Sleeper Vande Bharat; ಬೆಂಗಳೂರು-ಮುಂಬೈ ಸ್ಲೀಪರ್ ವಂದೇ ಭಾರತ್ಗೆ ಕೇಂದ್ರ ಅಸ್ತು, ಕರ್ನಾಟಕಕ್ಕೆ ಏನೆಲ್ಲ ಲಾಭ? -
ಭಾರತೀಯ ರೈಲ್ವೆಯ ಹೊಸ ಹೆಜ್ಜೆ: 12 ಸ್ಲೀಪರ್ ವಂದೇ ಭಾರತ್ ರೈಲುಗಳ ಪರಿಚಯ, ಎಲ್ಲೆಲ್ಲಿ-ಯಾವಾಗ? -
Ramya: ಬೀದಿ ನಾಯಿಗಳ ಮೇಲಿನ ಕ್ರೌರ್ಯಕ್ಕೆ ನಟಿ ರಮ್ಯಾ ಕಣ್ಣೀರು: ಬೆಂಗಳೂರಿನ ಫ್ರೀಡಂಪಾರ್ಕ್ ಪ್ರತಿಭಟನೆಯಲ್ಲಿ ಭಾಗಿ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
ಮದ್ಯಪಾನದ ಅಭ್ಯಾಸವನ್ನು ನಿಯಂತ್ರಿಸಲು ಬಯಸುತ್ತೀರಾ? ತಜ್ಞರ ಸರಳ ಸಲಹೆಗಳು ಇಲ್ಲಿವೆ -
Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು? -
ವೈಭವ್ ಸೂರ್ಯವಂಶಿ ಕುರಿತು ಬಿಸಿಸಿಐಗೆ ಹೋಯ್ತು ವಿಶೇಷ ಮನವಿ; ಟೀಮ್ ಇಂಡಿಯಾ ಸೇರ್ತಾರಾ ಯುವ ಪ್ರತಿಭೆ? -
ಒಂದು ಬಟನ್ ಒತ್ತಿದರೆ ಬದಲಾಗುತ್ತೆ BMW ಕಾರಿನ ನಂಬರ್ ಪ್ಲೇಟ್, ಹೈಟೆಕ್ ಕಳ್ಳಾಟದ ವಿಡಿಯೋ ಭಾರಿ ವೈರಲ್ -
Asha Bhosle: ಗಾನ ಕೋಗಿಲೆ ಆಶಾ ಭೋಸ್ಲೆ ನಿಧನ: ದೇಶವೇ ಶೋಕದಲ್ಲಿ, ಸಾಮಾಜಿಕ ಜಾಲತಾಣದಲ್ಲಿ ಫ್ಯಾನ್ಸ್ ಕಂಬನಿ












Click it and Unblock the Notifications