ವಿಡಿಯೋ ಸಿಡಿ ಪ್ರಕರಣ : ಎಚ್ ವೈ ಮೇಟಿಗೆ ಕ್ಲೀನ್ ಚಿಟ್
ಎಚ್ ವೈ ಮೇಟಿ ಅವರು ಸೆಕ್ಸ್ ವಿಡಿಯೋದಲ್ಲಿ ಸಿಲುಕಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು ಗೊತ್ತಿರಬಹುದು. ಆದರೆ, ಈಗ ಎಚ್ ವೈ ಮೇಟಿಗೆ ಕರ್ನಾಟಕ ಸಿಐಡಿಯಿಂದ ಕ್ಲೀನ್ ಚಿಟ್ ಸಿಕ್ಕಿದೆ.
ಬೆಂಗಳೂರು, ಮೇ 24: ಎಚ್ ವೈ ಮೇಟಿ ಅವರು ಸೆಕ್ಸ್ ವಿಡಿಯೋದಲ್ಲಿ ಸಿಲುಕಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು ಗೊತ್ತಿರಬಹುದು. ಆದರೆ, ಈ ವಿಡಿಯೋ ಶೂಟಿಂಗ್ ಹಿಂದೆ ಓರ್ವ ಮಹಿಳಾ ರಾಜಕಾರಣಿ ಹಾಗೂ ಮಾಜಿ ಪೊಲೀಸ್ ಅಧಿಕಾರಿ ಇದ್ದಾರೆ ಎಂಬ ಸತ್ಯ ಬಹಿರಂಗಗೊಂಡಿತ್ತು. ಆದರೆ, ಈಗ ಎಚ್ ವೈ ಮೇಟಿಗೆ ಕರ್ನಾಟಕ ಸಿಐಡಿಯಿಂದ ಕ್ಲೀನ್ ಚಿಟ್ ಸಿಕ್ಕಿದೆ.
ಮಾಜಿ ಸಚಿವ ಎಚ್.ವೈ.ಮೇಟಿ ಅವರ ರಾಸಲೀಲೆ ಪ್ರಕರಣದಲ್ಲಿ ಮಹಿಳೆ ಮೇಲೆ ಯಾವುದೇ ಲೈಂಗಿಕ ದೌರ್ಜನ್ಯ ನಡೆದಿಲ್ಲ. ವಿಡಿಯೋ ಎಡಿಟಿಂಗ್ ಮಾಡಿ ಪ್ರಸಾರ ಮಾಡಲಾಗಿದೆ. ಮೂಲ ವಿಡಿಯೋ ಇಲ್ಲ. ಹೀಗಾಗಿ, ಮೇಟಿ ಅವರ ಮೇಲಿನ ಆರೋಪ ಸಾಬೀತು ಮಾಡಲು ಬೇಕಾದ ಯಾವುದೇ ಅಂಶಗಳು ತನಿಖೆಯಲ್ಲಿ ಕಂಡು ಬಂದಿಲ್ಲ ಎಂದು ಸಿಐಡಿ ಗೃಹ ಇಲಾಖೆಗೆ ಸಲ್ಲಿಸಿರುವ ವರದಿಯಲ್ಲಿ ಹೇಳಲಾಗಿದೆ.[ಮೇಟಿ ರಾಸಲೀಲೆ ವಿಡಿಯೋ ಹಿಂದಿನ ರಹಸ್ಯ]

ಈ ಬಗ್ಗೆ ಸಂತ್ರಸ್ತೆ ಮಹಿಳೆ ಸಹ ಯಾವುದೇ ದೂರನ್ನು ದಾಖಲು ಮಾಡಿಲ್ಲ. ಅಲ್ಲದೆ ಆಕೆ ತನ್ನ ಮೇಲೆ ಯಾವುದೇ ದೌರ್ಜನ್ಯ ನಡೆದಿಲ್ಲವೆಂದು ಹೇಳಿಕೆ ನೀಡಿದ್ದು, ತನ್ನ ಮತ್ತು ಮೇಟಿ ಅವರ ಸಂಬಂಧ ತಂದೆ ಮತ್ತು ಮಗಳ ಸಂಬಂಧ ಎಂದು ಹೇಳಿದ್ದಾಳೆ. ಪ್ರಕರಣದ ವಿಚಾರಣೆ ವೇಳೆ ಕೆಲವರು ತನಿಖೆಗೆ ಸಹಕಾರ ನೀಡಿಲ್ಲ ಎಂಬ ಅಂಶಗಳನ್ನು ಪರಿಗಣಿಸಿ ಸಿಐಡಿ ತಂಡ, ಕ್ಲೀನ್ ಚಿಟ್ ನೀಡಿದೆ.
ಡಿಸೆಂಬರ್ 2016ರಂದು 71 ವರ್ಷ ವಯಸ್ಸಿನ ಮೇಟಿ ಅವರು ಸರ್ಕಾರಿ ಉದ್ಯೋಗಿ ವಿಜಯಲಕ್ಷ್ಮಿ ಅವರ ಜತೆ ಇರುವ ಅಶ್ಲೀಲ ವಿಡಿಯೋವೊಂದನ್ನು ಸ್ಥಳೀಯ ವಾಹಿನಿಗಳು ಪ್ರಸಾರ ಮಾಡಿತ್ತು. ಇದಾದ ಬಳಿಕ ಅಬಕಾರಿ ಸಚಿವ ಸ್ಥಾನಕ್ಕೆ ಮೇಟಿ ರಾಜೀನಾಮೆ ನೀಡಿದ್ದರು.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications