ರಾಜ್ಯ ರಾಜಕಾರಣಕ್ಕೆ ಬರಲ್ಲ ಅಂದ ರಮ್ಯಾ ಕಣ್ಣೀರಿಗೆ ಕಾರಣವೇನು?
ಬೆಂಗಳೂರು, ಅ.19: ಮಂಡ್ಯದ ಮಾಜಿ ಸಂಸದೆ, ನಟಿ ರಮ್ಯಾ ಅವರು ಸೋಮವಾರ ಬೆಳಗ್ಗೆ ಮಾಜಿ ಮುಖ್ಯಮಂತ್ರಿ, ಮಾಜಿ ಕೇಂದ್ರ ಸಚಿವ ಎಸ್ಎಂ ಕೃಷ್ಣ ಅವರ ನಿವಾಸಕ್ಕೆ ತೆರಳಿ, ಭೇಟಿ ಮಾಡಿ ಮಾತುಕತೆ ನಡೆಸಿ ಹೊರಬಂದಿದ್ದಾರೆ.
ಎಸ್ಸೆಂ ಕೃಷ್ಣ ಅವರ ಜೊತೆ ಮಾತುಕತೆ, ಚರ್ಚಿಸಿದ ವಿಷಯಗಳ ಸುಳಿವು ನೀಡಿದ ರಮ್ಯಾ ಅವರು, 'ನಾನು ರಾಜ್ಯ ರಾಜಕೀಯಕ್ಕೆ ಬರುವುದಿಲ್ಲ' ಎಂದು ಘೋಷಿಸಿದ್ದಾರೆ. ಅದರೆ, ಕೃಷ್ಣ ಅವರ ನಿವಾಸದಿಂದ ಹೊರ ಬರುವಾಗ ರಮ್ಯಾ ಅವರ ಕಣ್ಣಂಚಲ್ಲಿ ನೀರು ಕಾಣಿಸಿದ್ದು ಏಕೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ನಂತರ ಮಾಧ್ಯಮಗಳ ಜೊತೆ ಮಾತನಾಡುವಾಗ ರಮ್ಯಾ ಲವಲವಿಕೆಯಿಂದ ಪ್ರತಿಕ್ರಿಯಿಸಿದರು.
ಕಾಂಗ್ರೆಸ್ ಹಿರಿಯ ನಾಯಕ ಎಸ್.ಎಂ.ಕೃಷ್ಣ ಅವರ ಸದಾಶಿವ ನಗರ ಮನೆಗೆ ರಮ್ಯಾ ಭೇಟಿ ಮಾಡಿ ಅವರು ಮಾತುಕತೆ ನಡೆಸಿರುವುದರ ಬಗ್ಗೆ ಕಾಂಗ್ರೆಸ್ಸಿಗರು ಕುತೂಹಲಿಗಳಾಗಿದ್ದಾರೆ. ಇತ್ತೀಚೆಗೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಎಸ್ಸೆಂ ಕೃಷ್ಣ ಹಾಗೂ ರಮ್ಯಾ ಅವರು ಭೇಟಿ ಮಾಡಿ ಮಾತುಕತೆ ನಡೆಸಿದ್ದರು. [ಆಗಸ್ಟ್ ತಿಂಗಳಲ್ಲಿ ಕೃಷ್ಣ ಭೇಟಿ ನಂತರ ರಮ್ಯಾ ಹೇಳಿಕೆ]
ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಮಂಡ್ಯದ ವಿಸಿ ಫಾರ್ಮ್ ಗೆ ಬಂದು ಹೋದ ಮೇಲೆ ನಡೆದ ಚೆಕ್ ಪರಿಹಾರ, ಸಂಪುಟ ವಿಸ್ತರಣೆ, ರಮ್ಯಾ ಹಾಗೂ ಮಂಡ್ಯ ಕಾಂಗ್ರೆಸ್ ಜಟಾಜಟಿ ಎಲ್ಲದರ ಬಗ್ಗೆ ಎಸ್ಸೆಂ ಕೃಷ್ಣರಿಂದ ಸೋನಿಯಾ ಅವರು ಮಾಹಿತಿ ಪಡೆದುಕೊಂಡಿದ್ದಾರೆ.[ಕೆಪಿಸಿಸಿ ಚೆಕ್ ವಿವಾದ : ಮಾಜಿ ಸಂಸದೆ ರಮ್ಯಾ ಸ್ಪಷ್ಟನೆ]
ರಮ್ಯಾ ಅವರಿಗೆ ಮತ್ತೊಮ್ಮೆ 'ಮಂಡ್ಯ ಜಿಲ್ಲಾ ಕಾಂಗ್ರೆಸ್ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕಾರ್ಯನಿರ್ವಹಿಸಬೇಕು' ಎಸ್.ಎಂ.ಕೃಷ್ಣ ಕಿವಿಮಾತು ಹೇಳಿದ್ದಾರಂತೆ. ಮಂಡ್ಯದಲ್ಲಿನ ಗೊಂದಲಕ್ಕೆ ನಾನೇನು ಕಾರಣವಲ್ಲ ಎಂದು ರಮ್ಯಾ ಸಮಾಜಾಯಿಷಿ ನೀಡಿದ್ದಾರೆ ಎಂಬ ಮಾಹಿತಿ ಇದೆ.

ಫೇಸ್ ಬುಕ್ ಪೋಸ್ಟ್ ಬಗ್ಗೆ ಸ್ಪಷ್ಟನೆ
ಫೇಸ್ ಬುಕ್ ನಲ್ಲಿ ಹಾಕಿದ್ದ ಪೋಸ್ಟ್ ಬಗ್ಗೆ ಮಾಧ್ಯಮಗಳಿಗೆ ಸ್ಪಷ್ಟನೆ ನೀಡಿದ ರಮ್ಯಾ, ಡಿವಿ ಗುಂಡಪ್ಪ ಅವರ ಕಗ್ಗಗಳ ಬಗ್ಗೆ ಇಂಗ್ಲೀಷ್ ನಲ್ಲಿ ಓದಿಕೊಂಡಿದ್ದೇನೆ. ಗುಂಡಪ್ಪ ಎಂಬ ಹೆಸರು ನನಗೆ ಹತ್ತಿರವಾಗಿದೆ. ನನ್ನ ತಂದೆಯನ್ನು ಗುಂಡಪ್ಪ ಎಂದು ಕರೆಯುತ್ತಿದ್ದೆ. ನನ್ನ ಸ್ಪಷ್ಟನೆ ಅರ್ಥವಾಗುವವರಿಗೆ ಆದರೆ ಸಾಕು. ಜನರನ್ನು ತಲುಪಲು ಫೇಸ್ ಬುಕ್ ಉತ್ತಮ ಮಾರ್ಗ ಎನಿಸಿತು ಎಂದು ನಗು ನಗುತ್ತಾ ಹೇಳಿದರು.

ಈ ಹಿಂದಿನ ಭೇಟಿಯಲ್ಲಿ ನಡೆದ ಮಾತುಕತೆ
ಪಬ್ಲಿಕ್ ಪಾಲಿಸಿ ಆನ್ ಇಂಟರ್ ನ್ಯಾಷನಲ್ ರಿಲೇಷನ್' ಬಗ್ಗೆ ಅಧ್ಯಯನ ಮಾಡಲು ಲಂಡನ್ ಗೆ ಹೋಗಿ ಬಂದಿದ್ದರ ಬಗ್ಗೆ ಹಾಗೂ ಜರ್ಮನಿ ಹೋಗಿ 'ಗ್ಲೋಬಲ್ ಗವರ್ನೆನ್ಸ್' ಬಗ್ಗೆ ಅಧ್ಯಯನ ನಡೆಸುವ ಬಗ್ಗೆ ಎಸ್ಸೆಂ ಕೃಷ್ಣರಲ್ಲಿ ಸಲಹೆ ಕೇಳಿದೆ ಎಂದು ರಮ್ಯಾ ಮಾಧ್ಯಮಗಳ ಮುಂದೆ ಹೇಳಿದ್ದರು.

ಪರಿಷತ್ ಸದಸ್ಯರಾಗಿ ಆಯ್ಕೆ ಬಗ್ಗೆ ಸ್ಪಷ್ಟನೆ
ರಮ್ಯಾ ಅವರನ್ನು ಪರಿಷತ್ ಸದಸ್ಯರಾಗಿ ಆಯ್ಕೆ ಮಾಡುವ ಬಗ್ಗೆ ಹಬ್ಬಿರುವ ಸುದ್ದಿ ಕಳೆದ ಆರು ತಿಂಗಳಿನಿಂದ ಚಾಲ್ತಿಯಲ್ಲಿದೆ. ಸಂಪುಟದಲ್ಲಿ ಅಂಬರೀಷ್ ಅವರ ಸ್ಥಾನಪಲ್ಲಟದ ಸುದ್ದಿಯೂ ಹರಿದಾಡುತ್ತಿದೆ. 'ನನಗೆ ಪರಿಷತ್ ಸ್ಥಾನ ನೀಡಬೇಕು ಎಂದು ಕೇಳಿಲ್ಲ ಎಂದು ರಮ್ಯಾ ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ. ಈ ಬಗ್ಗೆ ಹಿಂದೆ ಕೂಡಾ ಹೇಳಿದ್ದೆ. ನನಗೆ ಎಂಎಲ್ ಸಿ, ಎಂಎಲ್ ಎ ಆಗಲು ಇಷ್ಟವಿಲ್ಲ. ಸಂಸದೆಯಾಗಿ ಕಾರ್ಯನಿರ್ವಹಿಸಿದ್ದೇನೆ. ಜನರ ಸೇವೆಗೆ ಸಿದ್ಧವಿದ್ದೇನೆ ಎಂದಿದ್ದಾರೆ.

ಹೈಕಮಾಂಡ್ ಗೆ ದೂರು ನೀಡಿಲ್ಲ
ಎಸ್.ಎಂ.ಕೃಷ್ಣ ಅವರು ರಾಜ್ಯ ಸರಕಾರದ ವಿರುದ್ಧ ಹೈಕಮಾಂಡ್ಗೆ ದೂರು ಸಲ್ಲಿಸಿದ್ದಾರೆ ಎಂಬುದು ಕೇವಲ ಊಹಾಪೋಹ. ಮಾಧ್ಯಮಗಳಲ್ಲಿ ಬಂದಿರುವ ವರದಿಗಳನ್ನು ಆಧರಿಸಿ, ಊಹಾಪೋಹಗಳಿಗೆ ತಾನು ಪ್ರತಿಕ್ರಿಯಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಹೇಳಿದ್ದಾರೆ. ಹೀಗಾಗಿ ಕೃಷ್ಣ ಅವರ ಭೇಟಿ ಬಗ್ಗೆ ಕುತೂಹಲ ಇನ್ನೂ ಮುಂದುವರೆದಿದೆ.ರಮ್ಯಾ ವಿರುದ್ಧ ದೂರು ನೀಡಿದ್ದಕ್ಕೆ ಸ್ಪಷ್ಟನೆ ಪಡೆದುಕೊಂಡ ಹೈಕಮಾಂಡ್ ನೀಡಿರುವ ನಿರ್ದೇಶನಗಳೇನು ಎಂಬುದು ಸ್ಪಷ್ಟವಾಗಿಲ್ಲ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ












Click it and Unblock the Notifications