ಮಾಜಿ ಕೇಂದ್ರ ಸಚಿವ ಜಾಫರ್ ಷರೀಫ್ ಆಸ್ಪತ್ರೆಗೆ ದಾಖಲು
ಬೆಂಗಳೂರು, ನವೆಂಬರ್ 23 : ಮಾಜಿ ಕೇಂದ್ರ ಸಚಿವ, ಹಿರಿಯ ಕಾಂಗ್ರೆಸ್ ನಾಯಕ ಸಿ.ಕೆ.ಜಾಫರ್ ಷರೀಫ್ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ವಯೋಸಹಜ ಕಾಯಿಲೆಯಿಂದ ಅವರು ಬಳಲುತ್ತಿದ್ದಾರೆ.
ಶುಕ್ರವಾರ ಬೆಳಗ್ಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಸಿ.ಕೆ.ಜಾಫರ್ ಷರೀಫ್ (85) ಅವರನ್ನು ದಾಖಲು ಮಾಡಲಾಗಿದೆ. ಉಸಿರಾಟದ ತೊಂದರೆ ಕಾಣಿಸಿಕೊಂಡ ಹಿನ್ನಲೆಯಲ್ಲಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಸಿ.ಕೆ.ಜಾಫರ್ ಷರೀಫ್ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದಾರೆ. ಆಸ್ಪತ್ರೆಯ ಐಸಿಯುನಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಕಾಂಗ್ರೆಸ್ ಪಕ್ಷದ ಹಲವು ನಾಯಕರು ಆಸ್ಪತ್ರೆಗೆ ಭೇಟಿ ನೀಡುವ ಸಾಧ್ಯತೆ ಇದೆ.
ಜಾಫರ್ ಷರೀಫ್ ಅವರು ಮೌಲಾನಾ ಅಬ್ದುಲ್ ಕಲಾಮ್ ಆಝಾದ್ ಅವರ 'ಇಂಡಿಯಾ ವಿನ್ಸ್ ಫ್ರೀಡಂ' ಪುಸ್ತಕವನ್ನು ಉರ್ದು ಭಾಷೆಗೆ ಅನುವಾದ ಮಾಡಿಸಿದ್ದಾರೆ. ಈ ಪುಸ್ತಕ ಬಿಡುಗಡೆ ಸಮಾರಂಭ ನವೆಂಬರ್ 28ರಂದು ಅರಮನೆ ಮೈದಾನದಲ್ಲಿ ನಡೆಯಲಿದೆ.
ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಪುಸ್ತಕವನ್ನು ಬಿಡುಗಡೆ ಮಾಡಲಿದ್ದಾರೆ. ಜಾಫರ್ ಷರೀಫ್ ಅವರ ಅನಾರೋಗ್ಯದ ಕಾರಣದಿಂದಾಗಿ ಪುಸ್ತಕ ಬಿಡುಗಡೆ ಕಾರ್ಯಕ್ರಮವನ್ನು ಮುಂದೂಡಲಾಗುತ್ತದೆಯೇ? ಎಂಬ ಪ್ರಶ್ನೆ ಎದ್ದಿದೆ.
-
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
RCB Vs SRH: ಎಸ್ಆರ್ಎಚ್ ವಿರುದ್ಧದ ಐಪಿಎಲ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕಿಂಗ್ ಕುರಿತು ಆರ್ಸಿಬಿ ಬಿಗ್ ಅಪ್ಡೇಟ್ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ನಟಿ ನೋರಾ ಫತೇಹಿ ವೃತ್ತಿಜೀವನಕ್ಕೆ ಕುತ್ತು ತಂದ 'ಸೆರಗ ಸರ್ಸೆ' ವಿವಾದ: ಗಡಿಪಾರು ಮಾಡುವಂತೆ ಗೃಹ ಸಚಿವಾಲಯಕ್ಕೆ ದೂರು -
ಮಾರ್ಚ್ 21ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ತಿಂಗಳಿಗೆ 50 ಸಾವಿರ ಸಂಬಳ ಇದೆಯಾ? 2026ರಲ್ಲಿ ಬೆಂಗಳೂರಿನಂತಹ ಮಹಾನಗರದಲ್ಲಿ ಜೀವನ ವೆಚ್ಚ ಎಷ್ಟಾಗುತ್ತೆ ಗೊತ್ತಾ? ಇಲ್ಲಿದೆ ಮಾಹಿತಿ -
AI ಮೂಲಕ ಬರುವ ಉದ್ಯೋಗ ಅರ್ಜಿಗಳಿಂದ ಬೆಂಗಳೂರು ಉದ್ಯಮಿ ಬೇಸರ: 'ಅರ್ಜಿಗಳು ಜಾಸ್ತಿ, ಅರ್ಹತೆ ಕಡಿಮೆ’ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ












Click it and Unblock the Notifications