ಕಾಂಗ್ರೆಸ್ ತೊರೆದ ಮಾಜಿ ಸಚಿವ ಕುಮಾರ ಬಂಗಾರಪ್ಪ
ಮಾಜಿ ಸಚಿವ ಕುಮಾರ ಬಂಗಾರಪ್ಪ ಕಾಂಗ್ರೆಸ್ ತೊರೆದಿದ್ದಾರೆ. ಅವರು ಬಿಜೆಪಿ ಸೇರುತ್ತಾರೆ ಎಂಬ ಸುದ್ದಿ ಬಹಳ ದಿನದಿಂದ ಹರಿದಾಡುತ್ತಿತ್ತು. ಶುಕ್ರವಾರ ಪತ್ರಿಕಾಗೋಷ್ಠಿ ಮಾಡಿ, ಕಾಂಗ್ರೆಸ್ ತೊರೆಯುವುದನ್ನು ಅಧಿಕೃತವಾಗಿ ಘೋಷಿಸಿದ್ದಾರೆ
ಬೆಂಗಳೂರು, ಮಾರ್ಚ್ 3: ಕಾಂಗ್ರೆಸ್ ಪಕ್ಷ ತೊರೆದಿದ್ದೇನೆ. ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಅವರಿಗೆ ರಾಜೀನಾಮೆ ಸಲ್ಲಿಸಿದ್ದೇನೆ ಎಂದು ಮಾಜಿ ಸಚಿವ ಕುಮಾರ ಬಂಗಾರಪ್ಪ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ. ಈ ವೇಳೆ ಸಚಿವರಾದ ಕಾಗೋಡು ತಿಮ್ಮಪ್ಪ ಅವರ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಕುಮಾರ ಬಂಗಾರಪ್ಪ ಬಿಜೆಪಿ ಸೇರುವ ಬಗ್ಗೆ ಸುದ್ದಿ ದಟ್ಟವಾಗಿ ಹಬ್ಬಿತ್ತು. ಈ ಬಗ್ಗೆ ಪ್ರಶ್ನಿಸಿದಾಗೆಲ್ಲ, "ಯಾವುದೇ ನಿರ್ಧಾರ ಅಂತಿಮವಾಗಿಲ್ಲ" ಎಂದು ಅವರು ಹೇಳುತ್ತಿದ್ದರು. ಅದರೆ ಈಚೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರ ಜನ್ಮದಿನದಂದು ಅವರಿಗೆ ಶುಭ ಕೋರಿದ್ದ ಕುಮಾರ ಬಂಗಾರಪ್ಪ, ಬಿಎಸ್ ವೈ ಅವರನ್ನು ಹೊಗಳಿದ್ದರು.[ಕುಮಾರ ಬಂಗಾರಪ್ಪ ಜತೆ ಒನ್ಇಂಡಿಯಾ ಕನ್ನಡ ವಿಶೇಷ ಸಂದರ್ಶನ]

ಪಕ್ಷದ ಕಾರ್ಯಕರ್ತರು ಕಾಂಗ್ರೆಸ್ ನ ಬಿಡುವಂತೆ ಸಲಹೆ ನೀಡಿದ್ದಾರೆ. ಆದರೆ ಸೂಕ್ತ ಸಮಯಕ್ಕಾಗಿ ಕಾಯುತ್ತಿದ್ದೇನೆ. ಏಕೆಂದರೆ, ಕೆಲವು ನಿರ್ಧಾರಗಳನ್ನು ಭಾವನಾತ್ಮಕವಾಗಿ ತೆಗೆದುಕೊಳ್ಳಲು ಸಾಧ್ಯವಿಲ್ಲ ಎಂದು ಒನ್ ಇಂಡಿಯಾ ಕನ್ನಡಕ್ಕೆ ನೀಡಿದ ಸಂದರ್ಶನದ ವೇಳೆ ಅವರು ಹೇಳಿದ್ದರು. ಇದೀಗ ಕುಮಾರ್ ಕಾಂಗ್ರೆಸ್ ತೊರೆದಿದ್ದು, ಬಿಜೆಪಿ ಸೇರುವುದು ಬಹುತೇಕ ಖಚಿತವಾಗಿದೆ.[ಕುಮಾರ್ ಅಂಬುಲೆನ್ಸ್, ವೈದ್ಯರ ಜೊತೆ ಬಿಜೆಪಿಗೆ ಸೇರಲಿ, ಮಧು ಬಂಗಾರಪ್ಪ]
ಶ್ರೀನಿವಾಸ್ ಪ್ರಸಾದ್, ಎಸ್ಸೆಂ ಕೃಷ್ಣ ನಂತರ ಹಿಂದುಳಿದ ವರ್ಗದ ಪ್ರಮುಖ ನಾಯಕರೊಬ್ಬರು ಕಾಂಗ್ರೆಸ್ ತೊರೆಯುತ್ತಿರುವುದು ಪಕ್ಷದ ಪಾಲಿಗೆ ಹಿನ್ನಡೆ ಎಂಬಂತೆ ಆಗಿದೆ.
ಪರಮೇಶ್ವರ ಪ್ರತಿಕ್ರಿಯೆ: ಕುಮಾರ ಬಂಗಾರಪ್ಪ ಕಾಂಗ್ರೆಸ್ ತೊರೆದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ, ಪಕ್ಷ ಬಿಡುವವರು ಇರಬಹುದು. ಆದರೆ ಇತರ ಪಕ್ಷಗಳಿಂದ ಕಾಂಗ್ರೆಸ್ ಗೆ ಬರುವವರ ಸಂಖ್ಯೆಯೂ ದೊಡ್ಡದಿದೆ ಎಂದಿದ್ದಾರೆ.
-
ಕೇರಳದಲ್ಲಿ ಬದಲಾವಣೆಯ ಪರ್ವ ಆರಂಭ: ಅಭಿವೃದ್ಧಿಗಾಗಿ ಜನ ಕಾಂಗ್ರೆಸ್ ಕೈಹಿಡಿಯಲಿದ್ದಾರೆ-ಡಿ.ಕೆ.ಶಿವಕುಮಾರ್ ಭವಿಷ್ಯ -
Jobs: ಹೈಕೋರ್ಟ್ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
'By Election: ಕಾಂಗ್ರೆಸ್ನಿಂದ ವೀರಶೈವ ಲಿಂಗಾಯತರನ್ನು ಒಡೆಯುವ ಪ್ರಯತ್ನ'' -
Bagalkote: ಕೃಷ್ಣ ಮೇಲ್ದಂಡೆ ಯೋಜನೆ ವಿಳಂಬಕ್ಕೆ ಕಾಂಗ್ರೆಸ್ಸೇ ಕಾರಣ: ವಿವರ ಬಿಚ್ಚಿಟ್ಟ ಬಸವರಾಜ ಬೊಮ್ಮಾಯಿ -
ದಾವಣಗೆರೆ ಉಪಚುನಾವಣೆ: ಅಲ್ಪಸಂಖ್ಯಾತರ ಬೆಂಬಲ ಕಾಂಗ್ರೆಸ್ ಕಡೆ – ಸಲೀಂ ಅಹಮದ್ -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ











Click it and Unblock the Notifications