ಮಾಜಿ ಸಚಿವ ರೋಷನ್ ಬೇಗ್ ಮರಳಿ ಕಾಂಗ್ರೆಸ್ಸಿಗೆ?
ಬೆಂಗಳೂರು, ಜೂ. 12: ಮಾಜಿ ಸಚಿವ, ಮಾಜಿ ಕಾಂಗ್ರೆಸ್ಸಿಗ ರೋಷನ್ ಬೇಗ್ ಮತ್ತೆ ಕಾಂಗ್ರೆಸ್ ಪಕ್ಷಕ್ಕೆ ಮರಳುವ ಪ್ರಯತ್ನ ಆರಂಭಿಸಿದ್ದಾರೆ. ಇದೇ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿದ್ದಾರೆ ಎನ್ನಲಾಗಿದೆ.
ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್ ಅವರ ವಿರುದ್ಧ ಕಿಡಿಕಾರಿದ್ದ ರೋಷನ್ ಬೇಗ್ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದರು. ನಂತರ ಬಿಜೆಪಿ ಸೇರುವ ಪ್ರಯತ್ನವನ್ನು ಮಾಡಿದ್ದರು. ಅದೇ ಸಂದರ್ಭದಲ್ಲಿ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಬಿಜೆಪಿ ಜೊತೆ ಗುರ್ತಿಸಿಕೊಂಡಿದ್ದರು. ಆದರೆ ಐಎಂಎ ಹರಗರಣದಲ್ಲಿ ಬೇಗ್ ಹೆಸರು ತಳಕು ಹಾಕಿಕೊಂಡಿದ್ದರಿಂದ ಬಿಜೆಪಿ ರೋಷನ್ ಬೇಗ್ ಅವರನ್ನು ಸೇರಿಸಿಕೊಂಡಿರಲಿಲ್ಲ. ಜೊತೆಗೆ ಉಪ ಚುನಾವಣೆಯಲ್ಲಿ ಶಿವಾಜಿನಗರದಿಂದ ಬಿಜೆಪಿ ಟಿಕೆಟ್ ಕೂಡ ನಿರಾಕರಿಸಿತ್ತು . ಹೀಗಾಗಿ ಮಾಜಿ ಸಚಿವ ರೋಷನ್ ಬೇಗ್ ಅತಂತ್ರರಾಗಿದ್ದಾರೆ.
ಜೊತೆಗೆ ಕೊರೊನಾ ವೈರಸ್ ವಿಚಾರವಾಗಿ ಬಿಜೆಪಿ ನಾಯಕರಿಂದ ಮುಸ್ಲಿಂ ಸಮುದಾಯ ಹೊಣೆ ಮಾಡಲಾಗುತ್ತಿದೆ ಎಂದು ರೋಷನ್ ಬೇಗ್ ಆಪ್ತರ ಬಳಿ ಮಾತನಾಡಿಕೊಂಡಿದ್ದಾರೆ ಎನ್ನಲಾಗಿದೆ. ಜೊತೆಗೆ ಬಿಜೆಪಿಯಲ್ಲಿ ರಾಜಕೀಯ ಭವಿಷ್ಯವಿಲ್ಲವೆಂಬ ಸಲಹೆಯನ್ನು ಬೇಗ್ ಆಪ್ತರು ಕೊಟ್ಟಿದ್ದಾರೆ. ಹೀಗಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕೊತೆಗೆ ಮಾತುಕತೆ ನಡೆಸಿದ್ದಾರೆ. ಆದರೆ ಮೊದಲು ಹೈಕಮಾಂಡ್ ಜೊತೆ ಚರ್ಚಿಸಿ, ನಂತರ ಪಕ್ಷಕ್ಕೆ ಸೇರಿಸಿಕೊಳ್ಳುವ ಬಗ್ಗೆ ತಿಳಿಸುತ್ತೇನೆ ಎಂದು ಡಿಕೆಶಿ ಹೇಳಿದ್ದಾರೆ ಎನ್ನಲಾಗಿದೆ.

ಈಗಾಗಲೆ ರಿಜ್ವಾನ್ ಅರ್ಷದ್ ಶಿವಾಜಿನಗರದಲ್ಲಿ ಮುಸ್ಲಿಂ ಸಮುದಾಯದ ನಾಯರಾಗಿ ಗುರುತಿಸಿಕೊಂಡಿದ್ದು, ಶಾಸಕರೂ ಆಗಿದ್ದಾರೆ. ಇದರೊಂದಿಗೆ ರೋಷನ್ ಬೇಗ್ ಮೇಲೆ ಆರೋಪ ಇರುವ ಐಎಂಎ ಪ್ರಕರಣ ಇನ್ನೂ ಮುಗಿದಿಲ್ಲ. ಹೀಗಾಗಿ ಕಾಂಗ್ರೆಸ್ ಹೈಕಮಾಂಡ್ ಏನು ಸಲಹೆ ಕೊಡುತ್ತದೆ ಎಂಬುದರ ಮೇಲೆ ಬೇಗ್ ಭವಿಷ್ಯ ನಿಂತಿದೆ ಎನ್ನಬಹುದು.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ












Click it and Unblock the Notifications